ರಾಯಚೂರು ಭೀಕರ ಅಪಘಾತ ಪ್ರಕರಣ ಬೆನ್ನಲ್ಲೇ ಕಲಬುರಗಿಯಲ್ಲಿ ಮತ್ತೊಂದು ದುರಂತ; ಶಾಲಾ ವಾಹನ ಹರಿದು ಮಗು ದುರ್ಮರಣ!

Published : Sep 12, 2024, 07:10 AM IST
ರಾಯಚೂರು ಭೀಕರ ಅಪಘಾತ ಪ್ರಕರಣ ಬೆನ್ನಲ್ಲೇ ಕಲಬುರಗಿಯಲ್ಲಿ ಮತ್ತೊಂದು ದುರಂತ; ಶಾಲಾ ವಾಹನ ಹರಿದು ಮಗು ದುರ್ಮರಣ!

ಸಾರಾಂಶ

ಶಾಲಾ ವಾಹನ ಹರಿದು ಮೂರು ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಶಿವಪುರ ಗ್ರಾಮದಲ್ಲಿ ನಡೆದಿದೆ.

ಕಲಬುರಗಿ (ಸೆ.12): ಶಾಲಾ ವಾಹನ ಹರಿದು ಮೂರು ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಶಿವಪುರ ಗ್ರಾಮದಲ್ಲಿ ನಡೆದಿದೆ.

ರಾಜಶೇಖರ್ ಎಂಬುವವರ ಪುತ್ರಿ ಖುಷಿ ಬನ್ನಟ್ಟಿ (3) ಮೃತ ಮಗು,  ಶ್ರೀಶೈಲ್ ಬಂಧಿತ ಶಾಲಾ ವಾಹನ ಚಾಲಕ. ಶಾಲೆಯಿಂದ ಶಾಲಾವಾಹನದಲ್ಲಿ ಬಂದಿದ್ದ ಮಗು. ಮಗುವನ್ನು ಕರೆತರಲು ಹೋಗಿದ್ದ ತಂದೆ. ಶಾಲಾ ವಾಹನದಿಂದ ಇಳಿದು ತಂದೆಯ ಹಿಂದೆ ಓಡೋಡಿ ಬಂದಿದ್ದ ಮಗು. ಆದರೆ ಮಗಳು ತನ್ನ ಹಿಂದೆ ಬಂದಿದ್ದು ಗಮನಿಸದ ತಂದೆ. ಈ ವೇಳೆ ಚಾಲಕ ವಾಹನ ಹಿಂದಕ್ಕೆ  ತಿರುಗಿಸಿಕೊಳ್ಳುವಾಗ ಹಿಂಬದಿಯಿದ್ದ ಬಾಲಕಿ ಮೇಲೆ ಹರಿಸಿದ್ದಾನೆ. ಬಾಲಕಿ ಹಿಂದಿನ ಚಕ್ರದಡಿ ಸಿಲುಕಿ ಪ್ರಾಣಬಿಟ್ಟಿದ್ದಾಳೆ.

ರಾಯಚೂರಲ್ಲಿ ಭೀಕರ ಅಪಘಾತ: ಶಿಕ್ಷಕರ ದಿನಾಚರಣೆಯಂದೇ ಕಾಲು ಕಳೆದುಕೊಂಡ ನಾಲ್ವರು ಮಕ್ಕಳು!

ಇತ್ತೀಚೆಗಷ್ಟೇ ರಾಯಚೂರು ಜಿಲ್ಲೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಮಕ್ಕಳು ಮೃತಪಟ್ಟಿದ್ದರು. ನಾಲ್ವರ ವಿದ್ಯಾರ್ಥಿಗಳಿಗೆ ಕಾಲು ತುಂಡಾಗಿತ್ತು. ಹಲವಾರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದರು.  ಘಟನೆ ಬಳಿಕ ಸರ್ಕಾರ ಶಾಲಾ ವಾಹನಗಳ ತಪಾಸಣೆಗೆ ಚಾಲಕರ ಲೈಸೆನ್ಸ್ ಪರಿಶೀಲನೆಗೆ ಸೂಚಿಸಿದ ಬೆನ್ನಲ್ಲೇ ಕಲಬುರಗಿಯಲ್ಲಿ ಮತ್ತೊಂದು ದುರಂತ ನಡೆದುಹೋಗಿದೆ. ಚಾಲಕನ ನಿರ್ಲಕ್ಷ್ಯ ಮಗುವಿನ ಸಾವಿನ ಕಾರಣ ಎಂದು ಮೃತ ಬಾಲಕಿ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಘಟನೆ ಸಂಬಂಧ ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಾಲಿವುಡ್ ನಿರ್ದೇಶಕ ವಿಕ್ರಂ ಭಟ್, ಪತ್ನಿ ಶ್ವೇತಾಂಬರಿ ಭಟ್ ಬಂಧನ; ಅಂತಿಂಥ ವಂಚನೆ ಕೇಸಲ್ಲ ಇದು ಅಂತೀರಾ?!
ಕೊಪ್ಪಳ: ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ - ಪ್ರಿ-ವೆಡ್ಡಿಂಗ್ ಶೂಟಿಂಗ್ ಮುಗಿಸಿ ವಾಪಸಾಗುವಾಗ ಭೀಕರ ದುರಂತ!