
ಬೆಳಗಾವಿ(ಸೆ. 29)ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ನಾಲ್ಕು ಜನರನ್ನು ಪೊಲೀಸರು ಬಂಧಿಸಿ, ಅವರಿಂದ 15700 ರೂ.ನಗದು ಹಾಗೂ ದಂಧೆಗೆ ಉಪಯೋಗಿಸುತ್ತಿದ್ದ ನಾಲ್ಕು ಮೊಬೈಲ್ ಗಳನ್ನು ಮಂಗಳವಾರ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ನಗರದ ಖಡಕ್ ಗಲ್ಲಿಯ ಉತ್ಸವ ಪ್ರಮೋದ ಜಾಧವ, ಖಂಜರಗಲ್ಲಿಯ ಶಕೀಲ್ ಶಹಪುರವಾಲೆ, ಅಮೀರ್ ಮುಲ್ಲಾ ಹಾಗೂ ಚಾಂದುಗಲ್ಲಿಯ ಮುಜಾವರ ಚಾಂದವಾಲೆ ಬಂಧಿತರು. ಈ ಕುರಿತು ಖಡೇಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಐಪಿಎಲ್ ಶುರುವಾಗಿದ್ದು ಸಣ್ಣ ಪುಟ್ಟ ನಗರದಲ್ಲಿಯೂ ಬೆಟ್ಟಿಂಗ್ ದಂಧೆ ಜೋರಾಗಿದೆ. ಬೆಂಗಳೂರಿನ ಗಾಂಧಿನಗರದ ಬೆಟ್ಟಿಂಗ್ ಅಡ್ಡೆ ಮೇಲೂ ಪೊಲೀಸರು ದಾಳಿ ಮಾಡಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ