
ಜೈಪುರ(ಜ. 29) ನಕಲಿ ಮದ್ಯ ಸೇವನೆ ಮಾಡಿ ರಾಜಸ್ಥಾನದ ಭಿಲ್ವಾರಾ ಜಿಲ್ಲೆಯಲ್ಲಿ ಮಹಿಳೆ ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ. ಅಸ್ವಸ್ಥಗೊಂಡಿರುವ ಐವರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಶುಕ್ರವಾರ ದುರಂತ ಸಂಭವಿಸಿದ್ದು ಇದಕ್ಕೆ ಸಂಬಂಧಿಸಿ ಅಬಕಾರಿ ಇಲಾಖೆಗಳ 12 ಸಿಬ್ಬಂದಿಯನ್ನು ಅಮಾನತುಗೊಳಿಸಿದೆ.
ಮನೆಗೆ ಬಾರದ ಗಂಡ; ಕೊನೆಯಾಯಿತು ಸುರಸುಂದರಿಯ ಬದುಕು
ಮಂಡಲ್ ಘಡ್ ಜಿಲ್ಲೆಯಲ್ಲಿ ಸರನ್ ಕಾ ಖೇಡಾ ಗ್ರಾಮದಲ್ಲಿ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಂಭೀರ ಸ್ಥಿತಿಯಲ್ಲಿರುವ ಎಲ್ಲಾ ಐವರು ಜನರನ್ನು ಮಹಾತ್ಮ ಗಾಂಧಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತರನ್ನು ಹಜಾರಿ ಬೈರ್ವಾ, ಸರ್ದಾರ್ ಭಟ್ ಮತ್ತು ದಲೀಲ್ ಸಿಂಗ್, ಮಹಿಳೆ ಸಾತುರಿ ಎಂದು ಗುರುತಿಸಲಾಗಿದ್ದು ನೀತು ಮತ್ತು ಮಂಜು ಜೀವನ್ಮರಣದ ನಡುವೆ ಹೋರಾಟ ಮಾಡುತ್ತಿದ್ದಾರೆ. ಇವರೆಲ್ಲರೂ ಒಟ್ಟಿಗೆ ಮದ್ಯ ಸೇವನೆ ಮಾಡಿಲ್ಲ ಎಂಬುದನ್ನು ಪೊಲೀಸರು ಸ್ಪಷ್ಟ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ