
ಮಂಡ್ಯ (ಮಾ.26): ಕಾವೇರಿ ನದಿಗೆ ಈಜಾಡಲು ಹೋಗಿ ತಂದೆ-ಮಗ ಸೇರಿ ನಾಲ್ವರು ಮೃತಪಟ್ಟ ದುರ್ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿ ಬಳಿ ನಡೆದಿದೆ.
ತಂದೆ ನಾಗೇಶ್(40) ಮಗ ಭರತ್ (17), ಗುರು(32), ಮಹದೇವ್(16) ಸಾವನ್ನಪ್ಪಿದರು. ಮೃತಪಟ್ಟ ನಾಲ್ವರು ಮೈಸೂರು ಮೂಲದದವರೆಂದು ತಿಳಿದುಬಂದಿದೆ. ಮೈಸೂರಿನ ಕನಕಗಿರಿಯಿಂದ ಮಳವಳ್ಳಿಯ ಮುತ್ತತ್ತಿಗೆ ಪ್ರವಾಸಕ್ಕೆ ಬಂದಿದ್ದರು.ಒಂದೇ ಬಸ್ನಲ್ಲಿ ಆಗಮಿಸಿದ್ದ 40 ಜನ ಕುಟುಂಬಸ್ಥರು ಹಾಗೂ ಸ್ನೇಹಿತರು. ಬಿಸಲಿನ ತಾಪಕ್ಕೆ ತಂಪಾಗಲು ನದಿಯಲ್ಲಿ ಈಜಾಡಲು ತೆರಳಿದ್ದರು. ಕಾವೇರಿ ನದಿಯಲ್ಲಿ ಈಜಾಡುವ ವೇಳೆ ನೀರಿನಲ್ಲಿ ಓರ್ವ ಮುಳುಗಿದ್ದಾನೆ. ರಕ್ಷಣೆಗೆ ಹೋದ ಮೂವರು ಸಹ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಸದ್ಯ ಇಬ್ಬರ ಮೃತದೇಹ ಪತ್ತೆಯಾಗಿದೆ. ಮತ್ತಿಬ್ಬರ ಶವಕ್ಕಾಗಿ ಹುಡುಕಾಟ ನಡೆಸುತ್ತಿದ್ದಾರೆ. ಹಲಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ.
ಬೆಳಗಾವಿ: ಕೃಷಿ ಹೊಂಡದಲ್ಲಿ ಬಿದ್ದು ಒಂದೇ ಕುಟುಂಬದ ಮೂವರ ಸಾವು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ