
ಕಲಬುರಗಿ/ಕೊಡಗು,(ಮಾ.04): ಮೀನು ಹಿಡಿಯಲು ಹೋಗಿದ್ದ ಯುವಕರಿಬ್ಬರು ನೀರುಪಾಲಾಗಿರುವ ಘಟನೆ ಜೇವರ್ಗಿ ತಾಲೂಕಿನ ಹಾಲಗಡ್ಲಾ ಕೆರೆಯಲ್ಲಿ ಈ ದುರ್ಘಟನೆ ನಡೆದಿದೆ.
ಬಸಣ್ಣ (24), ನಾಗಣ್ಣ (18) ಮೃತ ಯುವಕರು. ಜೇವರ್ಗಿ ಹರಣೂರ ಗ್ರಾಮದ ನಿವಾಸಿಗಳಾದ ಇವರು, ಇಂದು (ಬುಧವಾರ) ಬೆಳಗ್ಗೆ ಹಾಲಗಡ್ಲಾ ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಕೊರೊನಾಗೆ ಡೋಂಟ್ ವರಿ, ಐಪಿಎಲ್ ಪ್ರಶಸ್ತಿ ಮೊತ್ತಕ್ಕೆ ಕತ್ತರಿ; ಮಾ.04ರ ಟಾಪ್ 10 ಸುದ್ದಿ!
ವಿಷಯ ತಿಳಿದು ಸ್ಥಳಕ್ಕೆ ಆಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದು, ಗ್ರಾಮಸ್ಥರ ಸಹಾಯದಿಂದ ಯುವಕರ ಮೃತ ದೇಹ ಹೊರತೆಗೆದಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಕಾವೇರಿ ನದಿಯಲ್ಲಿ ಮುಳುಗಿ ವಿದ್ಯಾರ್ಥಿಗಳಿಬ್ಬರ ದುರ್ಮರಣ
ಮತ್ತೊಂದೆಡೆ ಕೊಡಗಿನಲ್ಲಿ ಇಬ್ಬರು ವಿದ್ಯಾರ್ಥಿಗಳು ಕಾವೇರಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ದುಬಾರೆಯಲ್ಲಿ ಈ ಘಟನೆ ಸಂಭವಿಸಿದೆ.
ಶ್ರೇಯಸ್(14), ಲೆನಿನ್(14) ಮೃತ ವಿದ್ಯಾರ್ಥಿಗಳು. ಮೃತರು ಗೋಣಿಕೊಪ್ಪ ಲಯನ್ಸ್ ಶಾಲೆ ವಿದ್ಯಾರ್ಥಿಗಳಾಗಿದ್ದಾರೆ. ಶಾಳೆಯಿಂದ ಪಿಕ್ನಿಕ್ ಹೋಗಿದ್ದು, ದುಬಾರೆ ಆನೆ ಕ್ಯಾಂಪ್ ವೀಕ್ಷಿಸಿ ಮರಳುವಾಗ ದುರ್ಘಟನೆ ನಡೆದಿದೆ. ನದಿ ದಾಟುವಾಗ ಆಳವಾದ ಜಾಗಕ್ಕೆ ತೆರಳಿದ ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
"
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ