ಶೃಂಗೇರಿ ಆಸಿಡ್ ದಾಳಿ ಕೇಸ್ : ನಾಲ್ವರಿಗೆ ಜೀವಾವಧಿ ಶಿಕ್ಷೆ

Kannadaprabha News   | Asianet News
Published : Jul 15, 2021, 02:29 PM IST
ಶೃಂಗೇರಿ ಆಸಿಡ್ ದಾಳಿ ಕೇಸ್ : ನಾಲ್ವರಿಗೆ ಜೀವಾವಧಿ ಶಿಕ್ಷೆ

ಸಾರಾಂಶ

ಶೃಂಗೇರಿ ಆಸಿಡ್ ದಾಳಿ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳಿಗೆ ಶಿಕ್ಷೆ ಪ್ರಮಾಣ ಪ್ರಕಟ 2015ರ ಏಪ್ರಿಲ್ 18ರಂದು ಶೃಂಗೇರಿಯಲ್ಲಿ  ನಡೆದ ಪ್ರಕರಣ  ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ಇಂದು ತೀರ್ಪು

ಚಿಕ್ಕಮಗಳೂರು (ಜು.15): ಶೃಂಗೇರಿ ಆಸಿಡ್ ದಾಳಿ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳಿಗೆ ಶಿಕ್ಷೆ ಪ್ರಮಾಣ ಘೋಷಿಸಿ ತೀರ್ಪು ಪ್ರಕಟಿಸಲಾಗಿದೆ. 

2015ರ ಏಪ್ರಿಲ್ 18ರಂದು ಶೃಂಗೇರಿಯಲ್ಲಿ ಬ್ಯೂಟಿ ಪಾರ್ಲರ್ ನಡೆಸುತ್ತಿದ್ದ ಮಹಿಳೆಯ ಮೇಲೆ ಆಸಿಡ್ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರು ಆರೋಪಿಗಳು ತಪ್ಪಿತಸ್ಥರು ಎಂದು ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ಇಂದು ತೀರ್ಪು ನೀಡಿದೆ.

 ವೇಶ್ಯಾವಾಟಿಕೆ ಜಾಲ ಬಟಾಬಯಲು, ದಂಧೆಯ ಕಿಂಗ್‌ಪಿನ್ ತೃತೀಯ ಲಿಂಗಿ!

ಈ ಪ್ರಕರಣ ಸಂಬಂಧ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್  ನಾಲ್ವರಿಗೆ  ಜೀವಾವಧಿ ಶಿಕ್ಷೆ ಹಾಗೂ ತಲಾ 2.50 ಲಕ್ಷ ರು. ದಂಡ ವಿಧಿಸಿದೆ.  ಮೇಲ್ಮನವಿ ಸಲ್ಲಿಸಬೇಕಾದಲ್ಲಿ ತಲಾ 2.50 ಲಕ್ಷ ದಂಡ ಪಾವತಿಸಿದ ನಂತರವಷ್ಟೇ ಅವಕಾಶ ನೀಡಲಾಗಿದೆ.

ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಗಣೇಶ್ ಅಲಿಯಾಸ್ ಗಣಿ (36), ಮಹಮ್ಮದ್ ಕಬೀರ್ (31), ವಿನೋದ್ ಕುಮಾರ್(38), ಹಾಗೂ ಅಬ್ದುಲ್ ವಾಜೀದ್(37)ಗೆ ಜೀವಾಧಿ ಶಿಕ್ಷೆ ನೀಡಲಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Pocso: 9 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿಗೆ ಗ್ರಾಮಸ್ಥರಿಂದ ಧರ್ಮದೇಟು!
ಸಿನಿಮೀಯ ಶೈಲಿಯಲ್ಲಿ ಹಿಮಾಲಯದ ಮೈನಸ್ ತಾಪಮಾನದಲ್ಲಿ ಅಂತಾರಾಷ್ಟ್ರೀಯ ಮಹಿಳಾ ಸ್ಮಗ್ಲರ್‌ ಬಂಧನ