ರಾಯಚೂರು: ಸಹೋದರರ ನಡುವೆ ಜಗಳ ಕೊಲೆಯಲ್ಲಿ ಅಂತ್ಯ

Published : May 11, 2023, 01:00 PM IST
ರಾಯಚೂರು: ಸಹೋದರರ ನಡುವೆ ಜಗಳ ಕೊಲೆಯಲ್ಲಿ ಅಂತ್ಯ

ಸಾರಾಂಶ

ಹೊಲದಲ್ಲಿ ಹಾಕಲಾಗಿದ್ದ ಮೆಣಸಿನಕಾಯಿ ರಾಶಿ ಸಂಬಂಧಿಸಿದಂತೆ ಸಾವಿಗೀಡಾದ ಉಮೇಶ ಮತ್ತು ಆರೋಪಿ ಮಲ್ಲೇಶನ ನಡುವೆ ಜಗಳ ನಡೆದಿತ್ತು. ರಾತ್ರಿ ಹೊಲದಲ್ಲಿ ಮಲಗಿದ್ದ ಉಮೇಶನಿಗೆ ರಾಡ್‌ನಿಂದ ಹೊಡೆದು ಕೊಲೆ ಮಾಡಿದ ಮಲ್ಲೇಶ. 

ಸಿರವಾರ(ಮೇ.11):  ಕ್ಷುಲ್ಲಕ ಕಾರಣಕ್ಕೆ ಸಹೋದರರ ನಡುವೆ ನಡೆದ ಜಗಳದಲ್ಲಿ ಉಮೇಶ (40) ಕೊಲೆಯಾದ ಘಟನೆ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕಲ್ಲೂರು ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ಹೊಲದಲ್ಲಿ ಹಾಕಲಾಗಿದ್ದ ಮೆಣಸಿನಕಾಯಿ ರಾಶಿ ಸಂಬಂಧಿಸಿದಂತೆ ಸಾವಿಗೀಡಾದ ಉಮೇಶ ಮತ್ತು ಆರೋಪಿ ಮಲ್ಲೇಶನ ನಡುವೆ ಜಗಳ ನಡೆದಿತ್ತು. ರಾತ್ರಿ ಹೊಲದಲ್ಲಿ ಮಲಗಿದ್ದ ಉಮೇಶನಿಗೆ ಮಲ್ಲೇಶನು ರಾಡ್‌ನಿಂದ ಹೊಡೆದು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಪತಿಯ ಸಾವಿನ ನಂತರ ದು:ಖದ ಬಗ್ಗೆ ಪುಸ್ತಕ ಬರೆದ ಮಹಿಳೆ: ಕೊಲೆ ಆರೋಪದ ಮೇಲೆ ಬಂಧಿಸಿದ ಪೊಲೀಸರು!

ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಈ ಕುರಿತು ಸಿರವಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರು ವಿಜಯ್ ಗುರೂಜಿ ಗ್ಯಾಂಗ್ ಸಮೇತ ಅರೆಸ್ಟ್; ಟೆಕ್ಕಿಗೆ ಲೈಂಗಿಕ ಶಕ್ತಿ ಹೆಚ್ಚಿಸೋದಾಗಿ ₹40 ಲಕ್ಷ ವಂಚನೆ!
ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಶಿಕ್ಷಕನಿಗೆ ಪೋಷಕರಿಂದ ಧರ್ಮದೇಟು!