
ಬೆಂಗಳೂರು(ಅ.28): ದೀಪಾವಳಿ ಹಬ್ಬದ ವೇಳೆ ಜೂಜಾಡುವಾಗ ಹಣದ ವಿಚಾರವಾಗಿ ನಿಂದಿಸಿದ ಎಂಬ ಕಾರಣಕ್ಕೆ ಕೋಪಗೊಂಡು ಆಟೋ ಚಾಲಕನೊಬ್ಬನನ್ನು ಆತನ ಸ್ನೇಹಿತರೇ ಕೊಂದಿರುವ ಘಟನೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯ ಕೂಡ್ಲು ಬಳಿ ನಡೆದಿದೆ.
ಬಂಡೇಪಾಳ್ಯ ನಿವಾಸಿ ರಾಜು (40) ಕೊಲೆಯಾದ ದುರ್ದೈವಿ. ಈ ಕೃತ್ಯ ಸಂಬಂಧ ಮೃತನ ಸ್ನೇಹಿತರಾದ ವಿಜಯ್ ರೆಡ್ಡಿ, ವಿನಯ್ ರೆಡ್ಡಿ ಹಾಗೂ ಗಂಗಾಧರ್ನನ್ನು ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೂಡ್ಲು ಬಳಿ ಕುಡಿದ ಅಮಲಿನಲ್ಲಿ ಬುಧವಾರ ರಾತ್ರಿ ಈ ನಾಲ್ವರು ಸ್ನೇಹಿತರ ಮಧ್ಯೆ ಜಗಳವಾಗಿದೆ. ಆಗ ಆತನ ಮೇಲೆ ಇಟ್ಟಿಗೆಯಿಂದ ಹಲ್ಲೆ ನಡೆಸಿ ಆರೋಪಿಗಳು ಕೊಲೆ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು: ಅಕ್ರಮ ಸಂಬಂಧಕ್ಕೆ ಅಡ್ಡಿ ಅಂತ ಗಂಡನನ್ನೇ ಕೊಂದ ಮಹಿಳೆ..!
ಬಂಡೇಪಾಳ್ಯದ ರಾಜು ಆಟೋ ಚಾಲಕನಾಗಿದ್ದು, ತನ್ನ ಕುಟುಂಬದ ಜತೆ ನೆಲೆಸಿದ್ದ. ದೀಪಾವಳಿ ಹಬ್ಬದ ದಿನ ಸ್ನೇಹಿತರ ಜತೆ ಆತ ಜೂಜಾಡುತ್ತಿದ್ದ. ಆ ವೇಳೆ ಹಣದ ವಿಚಾರವಾಗಿ ವಿಜಯ್, ವಿನಯ್ ಹಾಗೂ ಗಂಗಾಧರ್ ಅವರಿಗೆ ರಾಜು ಬೈದಿದ್ದ. ಇದರಿಂದ ಕೆರಳಿದ ಆರೋಪಿಗಳು, ಮದ್ಯ ಸೇವನೆ ನೆಪದಲ್ಲಿ ಬುಧವಾರ ರಾತ್ರಿ ಕರೆಸಿಕೊಂಡಿದ್ದಾರೆ. ಆಗ ಮತ್ತೆ ಇಸ್ಪೀಟ್ ವಿಚಾರ ಪ್ರಸ್ತಾಪವಾಗಿ ಜಗಳವಾಗಿದೆ. ಈ ಹಂತದಲ್ಲಿ ರಾಜು ಮೇಲೆ ಹಲ್ಲೆ ನಡೆಸಿ ಆರೋಪಿಗಳು ಕೊಂದಿದ್ದಾರೆ. ಘಟನೆ ವಿಚಾರ ತಿಳಿದ ಕೂಡಲೇ ಆರೋಪಿಗಳನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ