
ಚಿಕ್ಕಬಳ್ಳಾಪುರ(ಫೆ.12): ಮಹಿಳೆಯೊಬ್ಬಳನ್ನು ಕೊಲೆ ಮಾಡಿ ಆರೋಪಿ ಪರಾರಿಯಾದ ಘಟನೆ ನಗರದ 29 ನೇ ವಾರ್ಡ್ ನ ರೈಲ್ವೇ ಸ್ಟೇಷನ್ ಮುಖ್ಯರಸ್ತೆಯ ಚಾಮರಾಜಪೇಟೆಯಲ್ಲಿ ಬಾಡಿಗೆ ಕೊಠಡಿಯೊಂದರಲ್ಲಿ ನಡೆದಿದೆ.
ಕೊಲೆಯಾದ ಮಹಿಳೆಯನ್ನು ದೀಪ(40) ಎಂದು ಗುರುತಿಸಲಾಗಿದೆ. ಕೊಲೆ ಆರೋಪಿ ತಮಿಳುನಾಡಿನ ದಿವಾಕರ ಎಂಬುವನು ಈಕೆಯ ಜತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಎನ್ನಲಾಗಿದೆ.
ತಂದೂರಿ ರೊಟ್ಟಿ ಮಾಡುತ್ತಿದ್ದವ ಮಧ್ಯರಾತ್ರಿ ಮಸಣ ಸೇರಿದ, ನಾಲ್ಕು ದಿನ 4 ಕೊಲೆಗೆ ಬಿಚ್ಚಿಬಿದ್ದ ಧಾರವಾಡ
ಫೆ.7 ರಂದು ಕೊಠಡಿಗೆ ಆಗಮಿಸಿದ್ದ ಈಕೆಯನ್ನು ಕೊಲೆ ಮಾಡಿರುವ ಆರೋಪಿ, ಕೊಠಡಿ ಬೀಗ ಹಾಕಿ ಕೊಂಡು ತೆರಳಿದ್ದಾನೆ. ಶನಿವಾರ ಕೊಠಡಿಯಿಂದ ದುರ್ವಾಸನೆ ಬರುತ್ತಿದ್ದು ರಾತ್ರಿ ಮನೆಯ ಬಾಗಿಲಿನ ಬೀಗದ ಕಿಂಡಿಯಿಂದ ಮನೆ ಮಾಲಿಕರು ಇಣುಕಿ ನೋಡಿದಾಗ ಮಹಿಳೆಯ ಶವ ಕಾಣಿಸಿದೆ. ಕೂಡಲೇ ಮನೆ ಮಾಲೀಕರು ನಗರ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದು ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ