ಹಾವೇರಿ: ಹೆಂಡ್ತಿ ಜತೆ ಅಕ್ರಮ ಸಂಬಂಧ, ತಮ್ಮನ ಎದೆಗೆ ಚೂರಿ ಹಾಕಿ ಕೊಲೆಗೈದ ಅಣ್ಣ..!

Published : Feb 17, 2024, 10:36 AM ISTUpdated : Feb 17, 2024, 10:39 AM IST
ಹಾವೇರಿ: ಹೆಂಡ್ತಿ ಜತೆ ಅಕ್ರಮ ಸಂಬಂಧ, ತಮ್ಮನ ಎದೆಗೆ ಚೂರಿ ಹಾಕಿ ಕೊಲೆಗೈದ ಅಣ್ಣ..!

ಸಾರಾಂಶ

ಆರೋಪಿ ಅಣ್ಣ ಶಂಕ್ರಪ್ಪ ಕುಡಿದು ಬಂದು ಮನೆಯಲ್ಲಿ ಜಗಳ ಮಾಡಿದ್ದ, ಈ ವೇಳೆ ಜಗಳ ವಿಕೋಪಕ್ಕೆ ಹೋಗಿ ತಮ್ಮ ಹನುಮಂತಪ್ಪನ ಎದೆಗೆ ಚೂರಿ ಇರಿದಿದ್ದನು. ತಕ್ಷಣ ಹನುಮಂತಪ್ಪ ಲಮಾಣಿಯನ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೆ ಹಾವೇರಿ ಸರ್ಕಾರಿ ಆಸ್ಪತ್ರೆಯಲ್ಲಿ ಹನುಮಂತಪ್ಪ ಲಮಾಣಿ ಸಾವನ್ನಪ್ಪಿದ್ದಾನೆ. 

ಹಾವೇರಿ(ಫೆ.17): ಅನೈತಿಕ ಸಂಬಂಧದ ಶಂಕೆ ಹಿನ್ನಲೆಯಲ್ಲಿ ತಮ್ಮನ ಎದೆಗೆ ಅಣ್ಣ ಚೂರಿ ಹಾಕಿ ಕೊಲೆಗೈದ ಘಟನೆ ಹಾವೇರಿ ತಾಲೂಕಿನ ನೆಲೋಗಲ್ಲ ತಾಂಡಾ ಇಂದು(ಶನಿವಾರ) ನಡೆದಿದೆ. ಹನುಮಂತಪ್ಪ ಲಮಾಣಿ(42) ಕೊಲೆಯಾದ ದುರ್ದೈವಿಯಾಗಿದ್ದಾನೆ. ಶಂಕ್ರಪ್ಪ ಲಮಾಣಿ(55) ಎಂಬಾತನೇ ತಮ್ಮನನ್ನ ಕೊಲೆಗೈದ ಆರೋಪಿಯಾಗಿದ್ದಾನೆ. 

ಹೆಂಡತಿ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಎಂಬ ಶಂಕೆಯಿಂದ ತಮ್ಮ ಹನುಮಂತಪ್ಪ ಲಮಾಣಿಯನ್ನ ಕೊಲೆಗೈದಿರಬಹುದು ಎಂದು ಶಂಕಿಸಲಾಗಿದೆ. ಆರೋಪಿ ಅಣ್ಣ ಶಂಕ್ರಪ್ಪ ಕುಡಿದು ಬಂದು ಮನೆಯಲ್ಲಿ ಜಗಳ ಮಾಡಿದ್ದ, ಈ ವೇಳೆ ಜಗಳ ವಿಕೋಪಕ್ಕೆ ಹೋಗಿ ತಮ್ಮ ಹನುಮಂತಪ್ಪನ ಎದೆಗೆ ಚೂರಿ ಇರಿದಿದ್ದನು. ತಕ್ಷಣ ಹನುಮಂತಪ್ಪ ಲಮಾಣಿಯನ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೆ ಹಾವೇರಿ ಸರ್ಕಾರಿ ಆಸ್ಪತ್ರೆಯಲ್ಲಿ ಹನುಮಂತಪ್ಪ ಲಮಾಣಿ ಸಾವನ್ನಪ್ಪಿದ್ದಾನೆ. 

ಚಿಕ್ಕಬಳ್ಳಾಪುರ: ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಮಹಿಳೆಯ ಕೊಲೆ ಮಾಡಿದ ಪ್ರಿಯಕರ

ಆರೋಪಿ ಶಂಕ್ರಪ್ಪನನ್ನು ಪೋಲಿಸರು ಬಂಧಿಸಿದ್ದಾರೆ. ಈ ಸಂಬಂಧ ಹಾವೇರಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮಂಗಳಮುಖಿಯರಿಂದ ಯುವಕನ ಅಪಹರಣ; ಶಸ್ತ್ರಚಿಕಿತ್ಸೆ ನಡೆಸಿ ಪರಿವರ್ತನೆಗೆ ಯತ್ನ?
ಬಾಲಿವುಡ್ ನಿರ್ದೇಶಕ ವಿಕ್ರಂ ಭಟ್, ಪತ್ನಿ ಶ್ವೇತಾಂಬರಿ ಭಟ್ ಬಂಧನ; ಅಂತಿಂಥ ವಂಚನೆ ಕೇಸಲ್ಲ ಇದು ಅಂತೀರಾ?!