Bengaluru: ಐಷಾರಾಮಿ ಕಾರು ಕಡಿಮೆ ದರದಲ್ಲಿ ಕೊಡಿಸೋದಾಗಿ ವೈದ್ಯ ದಂಪತಿಗೆ 6.20 ಕೋಟಿ ವಂಚನೆ!

Published : Feb 08, 2024, 11:32 AM ISTUpdated : Feb 08, 2024, 12:18 PM IST
Bengaluru: ಐಷಾರಾಮಿ ಕಾರು ಕಡಿಮೆ ದರದಲ್ಲಿ ಕೊಡಿಸೋದಾಗಿ ವೈದ್ಯ ದಂಪತಿಗೆ 6.20 ಕೋಟಿ ವಂಚನೆ!

ಸಾರಾಂಶ

ಐಷಾರಾಮಿ ಕಾರನ್ನು ಕಡಿಮೆ ಕೊಡಿಸುವುದಾಗಿ ನಂಬಿಸಿ ವೈದ್ಯ ದಂಪತಿಯಿಂದ 6.20 ಕೋಟಿ ಪಡೆದು ವಂಚಿಸಿದ್ದಲ್ಲದೇ ಹಣ ಕೇಳಿದರೆ ಅತ್ಯಾಚಾರ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿದ ಮಹಿಳೆಯ ವಿರುದ್ಧ ಪ್ರಕರಣ ದಾಖಲಾಗಿದೆ. 

ಬೆಂಗಳೂರು (ಫೆ.08): ಐಷಾರಾಮಿ ಕಾರನ್ನು ಕಡಿಮೆ ಕೊಡಿಸುವುದಾಗಿ ನಂಬಿಸಿ ವೈದ್ಯ ದಂಪತಿಯಿಂದ 6.20 ಕೋಟಿ ಪಡೆದು ವಂಚಿಸಿದ್ದಲ್ಲದೇ ಹಣ ಕೇಳಿದರೆ ಅತ್ಯಾಚಾರ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿದ ಮಹಿಳೆಯ ವಿರುದ್ಧ ಪ್ರಕರಣ ದಾಖಲಾಗಿದೆ. ಮೋಸ ಹೋಗಿರುವ ವಿಜಯನಗರದ ನಿವಾಸಿ ಡಾ| ಗಿರೀಶ್ ದಂಪತಿ ನೀಡಿದ ದೂರಿನ ಮೇರೆಗೆ ರಾಜರಾಜೇಶ್ವರಿ ನಗರದ ಬಿಇಎಲ್ ಲೇಔಟ್ ಐಶ್ವರ್ಯಗೌಡ ಎಂಬುವರ ವಿರುದ್ಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಜಯನಗರದ ಎಂ.ಸಿ.ಲೇಔಟ್‌ನಲ್ಲಿ ವೈದ್ಯ ಗಿರೀಶ್ ದಂಪತಿ ಅವರಿಗೆ ಸೇರಿದ ಆಸ್ಪತ್ರೆ ಇದೆ. 2022ರ ಮಾರ್ಚ್‌ನಲ್ಲಿ ಕಾಸೆಟಿಕ್ ಸರ್ಜರಿಗೆ ಗಿರೀಶ್ ಅವರನ್ನು ಆರೋಪಿ ಐಶ್ವರ್ಯ ಭೇಟಿ ಯಾಗಿದ್ದಳು. 

ಹೀಗೆ ಪರಿಚಯವಾದ ಆರೋಪಿ, ತಾನು ರಿಯಲ್ ಎಸ್ಟೇಟ್ ಹಾಗೂ ಸೆಕೆಂಡ್ ಹ್ಯಾಂಡ್ ಕಾರುಗಳ ಡೀಲರ್ ಸಹ ಆಗಿದ್ದೇನೆ ಎಂದಿದ್ದಳು. ಕ್ರಮೇಣ ತನ್ನ ನಾಜೂಕಿನ ಮಾತಿನ ಮೂಲಕ ವೈದ್ಯರಿಗೆ ಆತ್ಮೀಯಳಾಗಿದ್ದಾಳೆ. ಹೀಗಿ ರುವ ದುಬಾರಿ ಮೌಲ್ಯದ ಕಾರು ಖರೀದಿಗೆ ಯೋಜಿಸಿದ್ದ ವೈದ್ಯ ಗಿರೀಶ್ ಅವರು, ಇದೇ ವಿಚಾರವಾಗಿ ಐಶ್ವರ್ಯರನ್ನು ಸಂಪರ್ಕಿಸಿದ್ದರು. ಆಗ ಕಡಿಮೆ ಬೆಲೆಗೆ ಐಷರಾಮಿ ಕಾರು ಕೊಡಿ ಸುವುದಾಗಿ ಹೇಳಿದ್ದಾಳೆ. ಈ ಮಾತು ನಂಬಿದ ವೈದ್ಯ, ಆರ್‌ಟಿಜಿಎಸ್ ಮೂಲಕ 2.75 ಕೋಟಿ ಹಾಗೂ 3.75 ಕೋಟಿಯನ್ನು ನಗದು ಹೀಗೆ ಎರಡು ಹಂತದಲ್ಲಿ ಆರೋಪಿಗೆ ಒಟ್ಟು 6.20 ಕೋಟಿ ಕೊಟ್ಟಿದ್ದರು. ಈ ಹಣ ಸಂದಾಯವಾದ ಬಳಿಕ ವೈದ್ಯರ ಸಂಪರ್ಕ ಕಡಿತಗೊಳಿಸಿದ ಆಕೆ, ಹಣ ಕೇಳಿದರೆ ಸಬೂಬು ಹೇಳುತ್ತಿದ್ದಳು. 

ರಾಜ್ಯಾದ್ಯಂತ ಹುಕ್ಕಾ ನಿಷೇಧಿಸಿ ಆದೇಶ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ದಿಟ್ಟ ಹೆಜ್ಜೆ!

ವೈದ್ಯರು ಜೋರು ಮಾಡಿದಾಗ ಹಣದ ವಿಚಾರ ಮಾತುಕತೆಗೆ ವಿಜಯನಗರ ಕ್ಲಬ್ ಬಳಿ ಬರುವಂತೆ ಆರೋಪಿ ಸೂಚಿಸಿದ್ದಳು. ಅಂತೆಯೇ ಕ್ಲಬ್ ಬಳಿ ತೆರಳಿದ ವೈದ್ಯ ಗಿರೀಶ್ ದಂಪತಿ ಮೇಲೆ ಐಶ್ವರ್ಯ ಗಲಾಟೆ ಮಾಡಿದ್ದಾಳೆ. 'ನೀನು ಹಣ ಕೇಳಿದರೆ ಅತ್ಯಾಚಾರ ಮಾಡಿರುವುದಾಗಿ ಪ್ರಕರಣ ದಾಖಲಿಸುತ್ತೇನೆ. ಮಾಧ್ಯಮಗಳಿಗೆ ತಿಳಿಸಿ ನಿಮ್ಮ ಮರ್ಯಾದೆ ಕಳೆಯುವುದಾಗಿ ಆಕೆ ಬೆದರಿಸಿದ್ದಳು. ಇದರಿಂದ ವೈದ್ಯ ಗಿರೀಶ್ ಹೆದರಿದಾಗ ಮತ್ತೆ 75 ಲಕ್ಷ ಕೊಡುವಂತೆ ಆಕೆ ಬೇಡಿಕೆ ಇಟ್ಟಿದ್ದಳು. ಈ ಕಿರುಕುಳ ಸಹಿಸಲಾರದೆ ಕೊನೆಗೆ ವಿಯನಗರ ಠಾಣೆಗೆ ತೆರಳಿ ವೈದ್ಯ ದೂರು ನೀಡಿದ್ದಾರೆ. ಅದರನ್ವಯ ಎಫ್‌ಐಆರ್‌ದಾಖಲಿಸಿಕೊಂಡು ಆರೋಪಿ ಪತ್ತೆಗೆ ತನಿಖೆ ನಡೆಸಿದ್ದೇವೆ ಎಂದು ಅಧಿಕಾರಿಗಳು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ
ಮಧುಗಿರಿ: ಕದ್ದ ಎಟಿಎಂ ಭಾರ ಇದೆ ಎಂದು ರಸ್ತೆಯಲ್ಲೇ ಬಿಟ್ಟು ಹೋದರು