ವರ್ತೂರು ಪ್ರಕಾಶ್‌ ಕಿಡ್ನಾಪ್‌ ಪ್ರಕರಣ: 6 ಮಂದಿ ಬಂಧನ

Kannadaprabha News   | Asianet News
Published : Dec 24, 2020, 09:34 AM IST
ವರ್ತೂರು ಪ್ರಕಾಶ್‌ ಕಿಡ್ನಾಪ್‌ ಪ್ರಕರಣ: 6 ಮಂದಿ ಬಂಧನ

ಸಾರಾಂಶ

20.5 ಲಕ್ಷ ನಗದು, 4 ಕಾರು ವಶ| ಪ್ರಮುಖ ಆರೋಪಿ ಕವಿರಾಜ್‌ ಮೇಲೆ ವಿವಿಧ ಠಾಣೆಗಳಲ್ಲಿ 10 ಪ್ರಕರಣ ದಾಖಲು| ಡಿ.ಕವಿರಾಜ್‌ ವಿಚಾರಣೆ ನಡೆಸಿದ ನಂತರ ಉಳಿದ ಆರೋಪಿಗಳ ವಶ| 

ಕೋಲಾರ(ಡಿ.24): ಮಾಜಿ ಸಚಿವ ವರ್ತೂರು ಪ್ರಕಾಶ್‌ ಕಿಡ್ನಾಪ್‌ ಕೇಸ್‌ಗೆ ಸಂಬಂಧಿಸಿದಂತೆ ಇದುವರೆಗೆ 6 ಮಂದಿ ಆರೋಪಿಗಳನ್ನು ಬಂಧಿಸಿ ಅವರಿಂದ 20.50 ಲಕ್ಷ ನಗದು, 4 ಕಾರು, ಒಂದು ದ್ವಿಚಕ್ರವಾಹನ ಹಾಗೂ ಮಾರಕ ಆಯುಧಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕೇಂದ್ರವಲಯ ಐಜಿಪಿ ಸೀಮಂತ್‌ ಕುಮಾರ್‌ ಸಿಂಗ್‌ ತಿಳಿಸಿದ್ದಾರೆ.

ಪ್ರಕರಣದ ಮಾಸ್ಟರ್‌ ಮೈಂಡ್‌ ತಮಿಳುನಾಡಿನ ಮೂಲದ ಬೆಂಗಳೂರಿನ ವಿನಾಯಕ ನಗರ ನಿವಾಸಿ ಡಿ.ಕವಿರಾಜ್‌ (43), ಬಿಕಾಂ ವಿದ್ಯಾರ್ಥಿ ಎಸ್‌.ಲಿಖಿತ್‌(20), ಎಚ್‌.ಎ.ಉಲ್ಲಾಸ್‌ (21), ಪ್ರವೀಣ್‌ (20), ಮನೋಜ್‌ (20), ಎನ್‌.ರಾಘವೇಂದ್ರ (34) ಬಂಧಿತ ಆರೋಪಿಗಳು. ಇವರನ್ನು ಎಎಸ್‌ಪಿ ಸಾಹಿಲ್‌ ಬಾಗ್ಲಾ ನೇತೃತ್ವದ ಪೊಲೀಸರ ತಂಡ ಬಂಧಿಸಿದೆ. ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಡಿ.ಕವಿರಾಜ್‌ನನ್ನು ವಿಚಾರಣೆ ನಡೆಸಿದ ನಂತರ ಉಳಿದ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದರು.

ವರ್ತೂರು ಪ್ರಕಾಶ್ ಕಿಡ್ನಾಪ್ ಕೇಸ್, ತನಿಖೆ ವೇಳೆ ಬಯಲಾಯ್ತು ಸ್ಫೋಟಕ ಸಂಗತಿ!

ಆರೋಪಿಗಳು ವರ್ತೂರು ಪ್ರಕಾಶ್‌ ಅವರಿಂದ 48 ಲಕ್ಷ ಪಡೆದಿದ್ದರು. ಇದೀಗ 20.5 ಲಕ್ಷವನ್ನು ಆರೋಪಿಗಳಿಂದ ವಶಪಡಿಸಿಕೊಳ್ಳಲಾಗಿದೆ. ಉಳಿದ ಹಣ ವಸೂಲಿಗೆ ತನಿಖೆ ಮುಂದುವರೆದಿದೆ. ಪ್ರಮುಖ ಆರೋಪಿ ಕವಿರಾಜ್‌ ಮೇಲೆ ವಿವಿಧ ಠಾಣೆಗಳಲ್ಲಿ 10 ಪ್ರಕರಣಗಳಿವೆ ಎಂದು ತಿಳಿಸಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಶಿಕ್ಷಕನಿಗೆ ಪೋಷಕರಿಂದ ಧರ್ಮದೇಟು!
ಬೆಂಗಳೂರಲ್ಲಿ ಹೊಟ್ಟೆಪಾಡಿಗೆ ಕಳ್ಳತನ ಮಾಡ್ತಿದ್ದ ಕಳ್ಳನನ್ನೇ ರಾಬರಿ ಮಾಡಿದ ಖತರ್ನಾಕ್ ಕಿತಾಪತಿಗಳು!