
ಬೆಂಗಳೂರು (ಜ.14): ರಾಜ್ಯ ರಾಜಧಾನಿಯಲ್ಲಿ ದಾರುಣ ಘಟನೆ ನಡೆದಿದ್ದು, 6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಬೆಂಗಳೂರಿನ ರಾಮಮೂರ್ತಿ ನಗರ ವಲಯದ ಹೊಯ್ಸಳ ನಗರದ ವಿನಾಯಕ ಲೇಔಟ್ನಲ್ಲಿ ಈ ಘಟನೆ ನಡೆದಿದೆ. ನಿರ್ಮಾಣ ಹಂತದ ಕಟ್ಟಡದಲ್ಲಿ ನಡೆದಿರುವ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಿಹಾರ ಮೂಲದ ಅಭಿಷೇಕ್ ಎಂಬಾತ ಈ ಕೃತ್ಯ ಎಸಗಿದ್ದಾನೆ. ಆರೋಪಿಯನ್ನು ಹಿಡಿದಿರುವ ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ. ನೇಪಾಳ ಮೂಲದ ಕುಟುಂಬಕ್ಕೆ ಸೇರಿದ ಬಾಲಕಿಯಾಗಿದ್ದಾಳೆ. ಅದೇ ಕಟ್ಟಡದಲ್ಲಿ ಬಾಲಕಿಯ ತಂದೆ ಸೆಕ್ಯುರಿಟಿ ಗಾರ್ಡ್ ಆಗಿದ್ದ. ರಾಮಮೂರ್ತಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಆರೋಪಿಯನ್ನ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
ಗರ್ಲ್ಫ್ರೆಂಡ್ನ ಗಂಡ, ತಂದೆಯನ್ನು ಕೊಲ್ಲಲು ಗ್ಯಾಂಗ್ಗೆ ಸುಪಾರಿ ಕೊಟ್ಟಿದ್ದ ವಕೀಲ, ಆದ್ರೆ ಕೊಲೆಯಾದವನೇ ಬೇರೆ!
ನಾಲ್ಕು ತಿಂಗಳಿನಿಂದ ನಡೆಯುತ್ತಿದ್ದ ಕಟ್ಟಡ ಕಾಮಗಾರಿ ನಡೆಯುತ್ತಿದೆ. ಬಾಲಕಿ ತಂದೆ-ತಾಯಿ ಕಟ್ಟಡ ಆರಂಭವಾದಗಲೇ ಬೆಂಗಳೂರಿಗೆ ಬಂದಿದ್ದರು. ವಿನಾಯಕ ಲೇಔಟ್ ನ ಮೊದಲ ಕ್ರಾಸ್ ನಿರ್ಮಾಣವಾಗುತ್ತಿರುವ ಕಟ್ಟಡ ಇದಾಗಿದೆ. ಬಾಲಕಿಯ ತಂದೆ ಇದೇ ಕಟ್ಟಡದಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರು. ಆರೋಪಿ ಕಳೆದ 5 ದಿನದ ಹಿಂದೆ ಈ ಕಟ್ಟಡ ಕಾಮಗಾರಿಗೆ ಬಂದಿದ್ದ ಎಂದು ಹೇಳಲಾಗಿದೆ.
Hassan: ಮೈದುನನ ಜೊತೆ ಸೇರಿ ಗಂಡನನ್ನೇ ಕೊಂದ್ಬಿಟ್ಲು, ಪೆಟ್ರೋಲ್ ತರ್ತೀನಿ ಅಂತಾ ಹೋದವನು ಫೋಟೋ ಆಗ್ಬಿಟ್ಟ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ