ಉಡುಪಿ: ಕುಡಿತಕ್ಕಾಗಿ 6500 ರು. ಮೌಲ್ಯದ ಮೀನು ಕದ್ದು 140 ರು.ಗೆ ಮಾರಿದ ಭೂಪ..!

Published : Jun 20, 2024, 08:48 AM IST
ಉಡುಪಿ: ಕುಡಿತಕ್ಕಾಗಿ 6500 ರು. ಮೌಲ್ಯದ ಮೀನು ಕದ್ದು 140 ರು.ಗೆ ಮಾರಿದ ಭೂಪ..!

ಸಾರಾಂಶ

ಪ್ರಕರಣ ದಾಖಲಿಸಿದ ಪೊಲೀಸರು ಅನುಮಾನದ ಮೇರೆಗೆ ಸೂರಜ್ ಎಂಬಾತನನ್ನು ವಿಚಾರಿಸಿದ್ದು, ಆತ ಕುಡಿತಕ್ಕಾಗಿ ಅಂಜಲ್ ಮೀನು ಕಳವುಗೈದಿರುವುದನ್ನು ಒಪ್ಪಿಕೊಂಡಿದ್ದಾನೆ. ತಾನು ಕದ್ದ 6500 ರು. ಮೌಲ್ಯದ ಅಂಜಲ್ ಮೀನನ್ನು ಮದ್ಯಕ್ಕಾಗಿ ಕೇವಲ 140 ರು.ಗೆ ಮಾರ್ಕೆಟ್ ಬಳಿಯ ಹೂವಿನ ವ್ಯಾಪಾರಿ ವಿಶಾಲ್ ಎಂಬಾತನಿಗೆ ಮಾರಾಟ ಮಾಡಿದ್ದಾನೆ. 

ಕಾರ್ಕಳ(ಜೂ.20): ಅಂಜಲ್ ಮೀನು ಕಳವು ಪ್ರಕರಣವೊಂದು ಕಾರ್ಕಳ ನಗರ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದು, ಬಳಿಕ ಅಂಜಲ್ ಮೀನು ಮಾಲಕ, ಕದ್ದವನು ಹಾಗೂ ಅದನ್ನು ತಿಂದವನ ನಡುವೆ ರಾಜಿ ಸಂಧಾನ ನಡೆದು ವಿವಾದ ಠಾಣೆಯಲ್ಲೇ ಬಗೆಹರಿದ ವಿಚಿತ್ರ ಘಟನೆ ನಡೆದಿದೆ.

ಘಟನೆ ವಿವರ:

ಗ್ರಾಹಕರೊಬ್ಬರು ಜೂನ್‌ 9ರಂದು ಕಾರ್ಕಳದ ಮೀನು ಮಾರುಕಟ್ಟೆಯ ವ್ಯಾಪಾರಿ ಮಾಲಾ ಎಂಬವರ ಬಳಿ ದುಬಾರಿ ಅಂಜಲ್‌ ಮೀನನ್ನು ಬುಕ್‌ ಮಾಡಿದ್ದರು. ಅದರಂತೆ ಮಾಲಾ ಮರುದಿನ, 6.5 ಕೆ.ಜಿ. ತೂಕದ 6500 ರು. ಮೌಲ್ಯದ ಅಂಜಲ್ ಮೀನನ್ನು ಪಡೆದು ಫ್ರಿಡ್ಜ್‌ನಲ್ಲಿಟ್ಟಿದ್ದರು. ಅದರಂತೆ ಗ್ರಾಹಕರಿಗೆ ಮೀನು ನೀಡಲು ಫ್ರಿಡ್ಜ್‌ನಲ್ಲಿಟ್ಟಿದ್ದ ಮೀನು ತೆಗೆಯಲು ಹೋದಾಗ ಮೀನು ಕಳವಾಗಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಮಾಲಾ ಅವರ ಪುತ್ರ ಕಾರ್ಕಳ ನಗರ ಠಾಣೆಯಲ್ಲಿ ದೂರು ನೀಡಿದ್ದರು.

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ದರ್ಶನ್ ಗ್ಯಾಂಗ್‌ಗೆ ಡಿಎನ್‌ಎ ಟೆಸ್ಟ್‌..!

ಪ್ರಕರಣ ದಾಖಲಿಸಿದ ಪೊಲೀಸರು ಅನುಮಾನದ ಮೇರೆಗೆ ಸೂರಜ್ ಎಂಬಾತನನ್ನು ವಿಚಾರಿಸಿದ್ದು, ಆತ ಕುಡಿತಕ್ಕಾಗಿ ಅಂಜಲ್ ಮೀನು ಕಳವುಗೈದಿರುವುದನ್ನು ಒಪ್ಪಿಕೊಂಡಿದ್ದಾನೆ. ತಾನು ಕದ್ದ 6500 ರು. ಮೌಲ್ಯದ ಅಂಜಲ್ ಮೀನನ್ನು ಮದ್ಯಕ್ಕಾಗಿ ಕೇವಲ 140 ರು.ಗೆ ಮಾರ್ಕೆಟ್ ಬಳಿಯ ಹೂವಿನ ವ್ಯಾಪಾರಿ ವಿಶಾಲ್ ಎಂಬಾತನಿಗೆ ಮಾರಾಟ ಮಾಡಿದ್ದಾನೆ. ಈತನ ಹೇಳಿಕೆ ಆಧರಿಸಿ ಪೊಲೀಸರು ಮೀನು ಖರೀದಿಸಿದ್ದ ಹೂವಿನ ವ್ಯಾಪಾರಿಯನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಿದ್ದು, ಆತ ಕೂಡ ಸತ್ಯ ಒಪ್ಪಿಕೊಂಡಿದ್ದಾನೆ.

ಬಳಿಕ ಮೀನು ವ್ಯಾಪಾರಿ ಮಾಲಾ ಅವರಿಗೆ ಅಂಜಲ್ ಮೀನಿನ ನಿಜವಾದ ಮೌಲ್ಯವನ್ನು ನೀಡಲು ಒಪ್ಪಿಕೊಂಡಿದ್ದಾನೆ. ಸದ್ಯಕ್ಕೆ 3 ಸಾವಿರ ರು. ಪಾವತಿಸಿ, ಉಳಿದ ಬಾಕಿ ಮೊತ್ತವನ್ನು ಜೂನ್‌ 27ರಂದು ನೀಡುವುದಾಗಿ ಒಪ್ಪಿಕೊಂಡ ಬಳಿಕ ಪೊಲೀಸರು ಮುಚ್ಚಳಿಕೆ ಬರೆಸಿ ಈ ಪ್ರಕರಣವನ್ನು ರಾಜಿಯಲ್ಲಿ ಇತ್ಯರ್ಥಗೊಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೇಣುಕಾಸ್ವಾಮಿ ತಂದೆ-ತಾಯಿಗೆ ಸಮನ್ಸ್, ದರ್ಶನ್‌ಗೆ ಜೈಲಲ್ಲೊಂದು ಶಾಕ್, ಕೋರ್ಟ್‌ನಲ್ಲೊಂದು ಆಘಾತ!
ದಂಪತಿ, ಪಾಲಿಕೆ ಅಧಿಕಾರಿಗಳ ಕಿರುಕುಳಕ್ಕೆ ಟೆಕ್ಕಿ ದುರಂತ ಸಾವು, ಡೆಟ್‌ನೋಟ್‌ನಲ್ಲಿ ಶಾಕಿಂಗ್ ಮಾಹಿತಿ!