ಮೈಸೂರು: ರೌಡಿಶೀಟರ್‌ ಚಂದ್ರು ಕೊಲೆ, 7 ಮಂದಿ ಬಂಧನ

Published : May 21, 2023, 09:19 AM IST
ಮೈಸೂರು: ರೌಡಿಶೀಟರ್‌ ಚಂದ್ರು ಕೊಲೆ, 7 ಮಂದಿ ಬಂಧನ

ಸಾರಾಂಶ

ಪಡುವಾರಹಳ್ಳಿ, ಕುವೆಂಪುನಗರ ಹಾಗೂ ಕೆ.ಜಿ. ಕೊಪ್ಪಲು ನಿವಾಸಿಗಳಾದ ಯಶವಂತ, ಪ್ರಶಾಂತ, ಅರವಿಂದ ಸಾಗರ್‌, ರಾಘವೇಂದ್ರ, ಸುದೀಪ್‌, ಮಹೇಶ್‌ ಮತ್ತು ಪ್ರೀತಮ್‌ ಎಂಬವರೇ ಬಂಧಿತ ಆರೋಪಿಗಳು. ಇವರನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಮೈಸೂರು(ಮೇ.21): ಹಳೆ ದ್ವೇಷ ಹಿನ್ನೆಲೆಯಲ್ಲಿ ಹಿನ್ನೆಲೆಯಲ್ಲಿ ಒಂಟಿಕೊಪ್ಪಲಿನ ರೌಡಿಶೀಟರ್‌ ಚಂದ್ರು ಕೊಲೆ ಪ್ರಕರಣ ಸಂಬಂಧ ಪೊಲೀಸರು 7 ಮಂದಿ ಆರೋಪಿಗಳನ್ನು ಶನಿವಾರ ಬಂಧಿಸಿದ್ದಾರೆ. ನಗರದ ಒಂಟಿಕೊಪ್ಪಲಿನ ಕಾಳಿದಾಸ ರಸ್ತೆಯಲ್ಲಿರುವ ಟೈಲರ್‌ ಶಾಪ್‌ ಬಳಿ ಕುಳಿತಿದ್ದ ರೌಡಿಶೀಟರ್‌ ಚಂದ್ರು(47) ಎಂಬಾತನನ್ನು ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಗುರುವಾರ ಸಂಜೆ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದರು. ಈ ಸಂಬಂಧ ವಿ.ವಿ. ಪುರಂ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ಸಂಬಂಧ ರಚಿಸಲಾಗಿದ್ದ ವಿಶೇಷ ತಂಡಗಳ ಪೊಲೀಸರು ಇಲವಾಲದ ಬಳಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಪಡುವಾರಹಳ್ಳಿ, ಕುವೆಂಪುನಗರ ಹಾಗೂ ಕೆ.ಜಿ. ಕೊಪ್ಪಲು ನಿವಾಸಿಗಳಾದ ಯಶವಂತ, ಪ್ರಶಾಂತ, ಅರವಿಂದ ಸಾಗರ್‌, ರಾಘವೇಂದ್ರ, ಸುದೀಪ್‌, ಮಹೇಶ್‌ ಮತ್ತು ಪ್ರೀತಮ್‌ ಎಂಬವರೇ ಬಂಧಿತ ಆರೋಪಿಗಳು. ಇವರನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Mysuru: ಜೈಲಿನಿಂದ ಬಂದಿದ್ದ ರೌಡಿಶೀಟರ್ ದುಷ್ಕರ್ಮಿಗಳ ಮಚ್ಚಿನೇಟಿಗೆ ಬಲಿ

ಈ ಪ್ರಕರಣದಲ್ಲಿ ವರುಣ್‌, ಅನಿಲ್‌, ಸಚಿನ್‌ ಮತ್ತು ದರ್ಶನ್‌ ಎಂಬವರು ತಲೆಮರೆಸಿಕೊಂಡಿದ್ದು, ಇವರಿಗಾಗಿ ಪೊಲೀಸರು ಶೋಧ ಮುಂದುವರೆಸಿದ್ದಾರೆ. ಕೊಲೆಯಾದ ರೌಡಿಶೀಟರ್‌ ಚಂದು, ಹುಣಸೂರು ಜೋಡಿ ಕೊಲೆ ಪ್ರಕರಣ ಮತ್ತು ಪಡುವಾರಹಳ್ಳಿ ದೇವು ಕೊಲೆ ಪ್ರಕರಣದಲ್ಲಿ ಆರೋಪಿ. ದೇವು ಹತ್ಯೆಗೆ ಪ್ರತೀಕಾರವಾಗಿ ಚಂದುವನ್ನು ಆರೋಪಿಗಳು ಹತ್ಯೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ನಗರ ಪೊಲೀಸ್‌ ಆಯುಕ್ತ ರಮೇಶ್‌ ಬಾನೋತ್‌, ಡಿಸಿಪಿ ಎಂ. ಮುತ್ತುರಾಜು, ಎಸ್‌. ಜಾಹ್ನವಿ ಅವರ ಮಾರ್ಗದರ್ಶನದಲ್ಲಿ ರಚಿಸಲಾಗಿದ್ದ ನರಸಿಂಹರಾಜ ವಿಭಾಗದ ಎಸಿಪಿ ಅಶ್ವತ್ಥನಾರಾಯಣ್‌, ದೇವರಾಜ ವಿಭಾಗ ಎಸಿಪಿ ಶಾಂತಮಲ್ಲಪ್ಪ, ಸಿಸಿಬಿ ಘಟಕದ ಎಸಿಪಿ ಸಂದೇಶ್‌ ಕುಮಾರ್‌, ಮಂಡಿ ಠಾಣೆಯ ಇನ್ಸ್‌ಪೆಕ್ಟರ್‌ ಯೋಗೇಶ್‌, ಇತರೆ ಅಧಿಕಾರಿಗಳು ಮತ್ತು ಸಿಬ್ಬಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಾಲಿವುಡ್ ನಿರ್ದೇಶಕ ವಿಕ್ರಂ ಭಟ್, ಪತ್ನಿ ಶ್ವೇತಾಂಬರಿ ಭಟ್ ಬಂಧನ; ಅಂತಿಂಥ ವಂಚನೆ ಕೇಸಲ್ಲ ಇದು ಅಂತೀರಾ?!
ಕೊಪ್ಪಳ: ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ - ಪ್ರಿ-ವೆಡ್ಡಿಂಗ್ ಶೂಟಿಂಗ್ ಮುಗಿಸಿ ವಾಪಸಾಗುವಾಗ ಭೀಕರ ದುರಂತ!