
ಸಂಭಾಲ್ (ಉತ್ತರ ಪ್ರದೇಶ), (ಡಿ.16): ಉತ್ತರ ಪ್ರದೇಶದಲ್ಲಿ ಬಸ್ ಮತ್ತು ಗ್ಯಾಸ್ ಟ್ಯಾಂಕರ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಏಳು ಮಂದಿ ಮೃತಪಟ್ಟಿದ್ದು, 25 ಜನರು ಗಾಯಗೊಂಡಿದ್ದಾರೆ.
ಧನಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು (ಬುಧವಾರ) ಈ ಘಟನೆ ನಡೆದಿದ್ದು, ಮಂಜು ಕವಿದ ವಾತಾವರಣವಿದ್ದರಿಂದ ರಸ್ತೆ ಸಂಪೂರ್ಣವಾಗಿ ಕಾಣದೆ ಈ ಅಪಘಾತ ಸಂಭವಿಸಿದೆ ತಿಳಿದುಬಂದಿದೆ.
ಪಾರ್ಟಿ ಮಾಡೋಣ ಬಾ.. ನಂಬಿ ಬಂದ ಆಕೆಗೆ ಮಾಡಬಾರದನ್ನ ಮಾಡಿದ ಕಾಮುಕ ಸ್ನೇಹಿತರು
ಆಗ್ರಾ-ಮುರಾದಾಬಾದ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಚಕ್ರೇಶ್ ಮಿಶ್ರಾ ಅವರು ಮಾಹಿತಿ ನೀಡಿದರು.
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ಅವರು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ