
ಬೆಂಗಳೂರು(ಮೇ.02): ಅಮೆರಿಕದ ಗೆಳೆಯನ ಹೆಸರಿನಲ್ಲಿ ಮಾರತ್ತಹಳ್ಳಿಯ ಉದ್ಯಮಿಯೊಬ್ಬರಿಗೆ 7 ಲಕ್ಷ ಸೈಬರ್ ವಂಚಕರು ಟೋಪಿ ಹಾಕಿದ್ದಾರೆ.
ಕೆಲ ದಿನಗಳ ಹಿಂದೆ ಅಮೆರಿಕದಲ್ಲಿರುವ ಉದ್ಯಮಿ ಸ್ನೇಹಿತ ಸಂಜಯ್ ಸಿಂಗ್ ಹೆಸರಿನಲ್ಲಿ ಮೊಬೈಲ್ಗೆ ಸಂದೇಶ ಬಂದಿತು. ಅನಾರೋಗ್ಯ ಸಮಸ್ಯೆಗೆ ಸಿಲುಕಿದ್ದೇನೆ. ಅದಷ್ಟು ಬೇಗ ಹಣ ಕಳುಹಿಸುವಂತೆ ಮನವಿ ಮಾಡಲಾಗಿತ್ತು.
ಮೊಬೈಲ್ ಸಂಖ್ಯೆಯನ್ನೇ ಹ್ಯಾಕ್ ಮಾಡಿ 98 ಸಾವಿರ ಎಗರಿಸಿದ ವಂಚಕರು
ಈ ಸಂದೇಶ ನೋಡಿ ಆತಂಕಗೊಂಡ ಉದ್ಯಮಿ, ಕೂಡಲೇ ಗೆಳೆಯನ ಸಂದೇಶದಲ್ಲಿ ಬ್ಯಾಂಕ್ ಖಾತೆಗೆ 7 ಲಕ್ಷವನ್ನು ಜಮೆ ಮಾಡಿದ್ದಾರೆ. ಬಳಿಕ ವಿಚಾರಿಸಿದಾಗ ಸತ್ಯ ಗೊತ್ತಾಗಿದೆ ಎಂದು ಸಿಇಎನ್ ಠಾಣೆ ಪೊಲೀಸರು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ