ಹೊಸಪೇಟೆ: ದೀಪಾವಳಿ ಹಬ್ಬದಂದೇ ಭರ್ಜರಿ ಕಾರ್ಯಾಚರಣೆ, 7 ಲಕ್ಷ ಮೌಲ್ಯದ ಗಾಂಜಾ ಜಪ್ತಿ

Suvarna News   | Asianet News
Published : Nov 15, 2020, 03:42 PM IST
ಹೊಸಪೇಟೆ: ದೀಪಾವಳಿ ಹಬ್ಬದಂದೇ ಭರ್ಜರಿ ಕಾರ್ಯಾಚರಣೆ, 7 ಲಕ್ಷ ಮೌಲ್ಯದ ಗಾಂಜಾ ಜಪ್ತಿ

ಸಾರಾಂಶ

ಮೆಣಸಿನ ಗಿಡ ಹಾಗೂ ಹತ್ತಿಯ ಹೊಲದಲ್ಲಿ ಅಕ್ರಮವಾಗಿ ಬೆಳೆದ 31 ಗಾಂಜಾ ಗಿಡಗಳು| ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲೂಕಿನಲ್ಲಿ ನಡೆದ ಘಟನೆ| ಸ್ಥಳದಿಂದ ಪರಾರಿಯಾದ ಆರೋಪಿಗಳು

ಬಳ್ಳಾರಿ(ನ.15): ದೀಪಾವಳಿ ಹಬ್ಬದಂದೇ ಅಬಕಾರಿ ಇಲಾಖೆಯ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸುವ ಮೂಲಕ 7 ಲಕ್ಷ 20 ಸಾವಿರ ಮೌಲ್ಯದ ಗಾಂಜಾ ಜಪ್ತಿ ಮಾಡಿದ ಘಟನೆ ಜಿಲ್ಲೆಯ ಹೊಸಪೇಟೆ ತಾಲೂಕಿನ ಗುಂಡ್ಲಹಳ್ಳಿಯಿಂದದ ಬಸಾಪುರಕ್ಕೆ ಹೋಗುವ ಮಧ್ಯದಲ್ಲಿ ಇಂದು (ಭಾನುವಾರ) ನಡೆದಿದೆ. 

ಸರ್ವೆ ನಂಬರ್ 63 /2 ಸರ್ವೆ ನಂಬರ್ 63/3 ದೇವಣ್ಣ ಹಾಗೂ ಬಾಲಯ್ಯ ಇವರಿಗೆ ಸೇರಿದ ಜಮೀನಿನಲ್ಲಿ ಈ ಘಟನೆ ನಡೆದಿದೆ. ಮೆಣಸಿನ ಗಿಡ ಹಾಗೂ ಹತ್ತಿಯ ಹೊಲದಲ್ಲಿ ಅಕ್ರಮವಾಗಿ 31 ಗಾಂಜಾ ಗಿಡಗಳನ್ನು ಬೆಳೆದಿದ್ದ ರೈತರು ಎಂದು ಅಬಕಾರಿ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಬಳ್ಳಾರಿ: ಹೊಲದಲ್ಲಿ ಬೆಳೆದಿದ್ದ 1.75 ಲಕ್ಷ ರು. ಮೌಲ್ಯದ ಗಾಂಜಾ ವಶ

ದಾಳಿ ವೇಳೆ ಒಟ್ಟು 49 ಕೆಜಿ 240 ಗ್ರಾಂ ಗಾಂಜಾ ಗಿಡಗಳನ್ನು ವಶಪಡಿಸಿಕೊಳ್ಳಲಾಗಿದೆ. ಹೊಲದ ಮಾಲೀಕರ  ವಿರುದ್ಧ ಪೊಲೀಸರು ಪ್ರಕರಣವನ್ನ ದಾಖಲಿಸಿಕೊಂಡಿದ್ದಾರೆ. ದಾಳಿ ಮಾಡಿದ ವೇಳೆ ಆರೋಪಿಗಳು ಪರಾರಿಯಾಗಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಶಿಕ್ಷಕನಿಗೆ ಪೋಷಕರಿಂದ ಧರ್ಮದೇಟು!
ಬೆಂಗಳೂರಲ್ಲಿ ಹೊಟ್ಟೆಪಾಡಿಗೆ ಕಳ್ಳತನ ಮಾಡ್ತಿದ್ದ ಕಳ್ಳನನ್ನೇ ರಾಬರಿ ಮಾಡಿದ ಖತರ್ನಾಕ್ ಕಿತಾಪತಿಗಳು!