ಪಿಯುಸಿ ಪರೀಕ್ಷೆಯಲ್ಲಿ ಫೇಲಾದ 7 ವಿದ್ಯಾರ್ಥಿಗಳ ಆತ್ಮಹತ್ಯೆ

Published : Jun 19, 2022, 05:00 AM IST
ಪಿಯುಸಿ ಪರೀಕ್ಷೆಯಲ್ಲಿ ಫೇಲಾದ 7 ವಿದ್ಯಾರ್ಥಿಗಳ ಆತ್ಮಹತ್ಯೆ

ಸಾರಾಂಶ

*  ನಾಲ್ವರು ಬಾಲಕಿಯರು ಅತ್ಮಹತ್ಯೆಗೆ ಶರಣು *  ಇಂತಹ ಘಟನೆಗಳು ನಡೆಯುತ್ತಿರುವುದು ಆತಂಕಕಾರಿ ಸಂಗತಿ *  ಶಿಕ್ಷಣ ಇಲಾಖೆ, ಸರ್ಕಾರೇತರ ಸಂಘಸಂಸ್ಥೆಗಳಿಂದ ಜಾಗೃತಿ ಮೂಡಿಸಿದ್ದರೂ ನಿಲ್ಲದ ಆತ್ಮಹತ್ಯೆ   

ಬೆಂಗಳೂರು(ಜೂ.19): ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ಕಾರಣಕ್ಕೆ ಮನನೊಂದು ರಾಜ್ಯದ ವಿವಿಧೆಡೆ 7 ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿರುವ ಪ್ರತ್ಯೇಕ ಘಟನೆಗಳು ವರದಿಯಾಗಿವೆ. ಶಿಕ್ಷಣ ಇಲಾಖೆ, ಸರ್ಕಾರೇತರ ಸಂಘಸಂಸ್ಥೆಗಳು ಎಷ್ಟೇ ಜಾಗೃತಿ ಮೂಡಿಸಿದ್ದರೂ ಇಂತಹ ಘಟನೆಗಳು ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ.

ಬಾಗಲಕೋಟೆ ಜಿಲ್ಲೆ ಬೀಳಗಿ ತಾಲೂಕಿನ ಯಡಹಳ್ಳಿ ಗ್ರಾಮದ ಪೂಜಾ ರಾಚಪ್ಪ ಚಳಗೇರಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರೆ, ಬೀದರ್‌ ಜಿಲ್ಲೆ ಹುಮನಾಬಾದ್‌ ಗ್ರಾಮದ ದಿಲೀಪ್‌ ಮಚಾಪೂರೆ, ವಿಜಯನಗರ ಜಿಲ್ಲೆ ಗರಗ ಗ್ರಾಮದ ನಿವಾಸಿ ಶ್ಯಾಮರಾಜ, ಗದಗ ತಾಲೂಕಿನ ಹರ್ತಿ ಗ್ರಾಮದ ಪವಿತ್ರಾ ಲಿಂಗದಾಳ, ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರದ ಸ್ಪಂದನಾ, ಕೊಡಗಿನ ಕುಶಾಲನಗರ ಸಮೀಪದ ಬಸವನಹಳ್ಳಿಯ ಸಂಧ್ಯಾ, ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕಿನ ಪ್ರಣಮ್‌ ನಾಯ್ಕ ನೇಣಿಗೆ ಶರಣಾಗಿದ್ದಾರೆ.

ಆನ್‌ಲೈನ್‌ ಟ್ರೇಡಿಂಗಲ್ಲಿ 2 ಕೋಟಿ ನಷ್ಟ: ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ

ಪೂಜಾ ರಾಚಪ್ಪ ಚಳಗೇರಿ ಕಲಾ ವಿಭಾಗದ ವಿದ್ಯಾರ್ಥಿನಿಯಾಗಿದ್ದು ಇಂಗ್ಲಿಷ್‌ ವಿಷಯದಲ್ಲಿ ಅನುತ್ತೀರ್ಣಳಾಗಿದ್ದಳು. ಉಳಿದ 6 ಮಂದಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾಗಿದ್ದು ಹೆಚ್ಚಿನವರು ಸಣ್ಣ ಅಂತರದಿಂದ ಫೇಲಾಗಿದ್ದರು.
ಇವರಲ್ಲಿ ಫಲಿತಾಂಶದ ಬಗ್ಗೆ ತೀವ್ರ ಆತಂಕದಿಂದಿದ್ದ ಕುಶಾಲನಗರದ ಬಸವನಹಳ್ಳಿ ಗ್ರಾಮದ ಸಂಧ್ಯಾ ಶನಿವಾರ ಪಿಯುಸಿ ಫಲಿತಾಂಶ ಪ್ರಕಟಗೊಳ್ಳುವ ಮುನ್ನವೇ ನೇಣಿಗೆ ಶರಣಾಗಿದ್ದಾಳೆ. ಆದರೆ ಈಕೆ ಶೇ.67 ಅಂಕಗಳೊಂದಿಗೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣಳಾಗಿದ್ದಳು. ಈಕೆ ನಿವೃತ್ತ ಯೋಧ ಸುಭಾಷ್‌ ಮತ್ತು ಸೌಮ್ಯಾ ದಂಪತಿ ಪುತ್ರಿ.

ಇನ್ನು ಕುಮಟಾದ ಪ್ರಣಮ್‌ ವಿಜ್ಞಾನ ವಿಭಾಗದಲ್ಲಿ 4 ವಿಷಯದಲ್ಲಿ ಫೇಲಾದ್ದಕ್ಕೆ ಮನನೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈತನ ತಂದೆ ಆಟೋ ಚಾಲಕನಾಗಿದ್ದು, ಒಬ್ಬನೇ ಮಗನನ್ನು ಕಳೆದುಕೊಂಡ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕೊಪ್ಪಳ: ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ - ಪ್ರಿ-ವೆಡ್ಡಿಂಗ್ ಶೂಟಿಂಗ್ ಮುಗಿಸಿ ವಾಪಸಾಗುವಾಗ ಭೀಕರ ದುರಂತ!
ಪ್ರೆಗ್ನೆಂಟ್ ಮಾಡಿ ಗರ್ಭಪಾತ ಮಾಡಿಸಿದ, Sorry ಅಮ್ಮಾ ಸಾಯ್ತಿದ್ದೀನಿ: ಯುವತಿ ಆತ್ಮ*ಹತ್ಯೆ