
ದಾವಣಗೆರೆ(ಸೆ.12): ನಾಪತ್ತೆಯಾಗಿದ್ದ ಏಳು ವರ್ಷದ ಬಾಲಕನ ಶವ ನಗರದ ಟಿವಿ ಸ್ಟೇಷನ್ ಕೆರೆಯಲ್ಲಿ ಪತ್ತೆಯಾದ ಘಟನೆ ಇಂದು(ಭಾನುವಾರ) ನಡೆದಿದೆ. ಗಣ್ಯ (07) ಮೃತಪಟ್ಟ ಬಾಲಕನಾಗಿದ್ದಾನೆ.
ಕೆರೆ ಪಕ್ಕದ ಚಿಕ್ಕಮ್ಮಣ್ಣಿ ದೇವರಾಜ್ ಅರಸು ಬಡಾವಣೆ ನಿವಾಸಿಯಾದ ಬಾಲಕ ಗಣ್ಯ ನಿನ್ನೆ(ಶನಿವಾರ) ಮಧ್ಯಾಹ್ನ ಮನೆಯಿಂದ ನಾಪತ್ತೆಯಾಗಿದ್ದ ಎಂದು ತಿಳಿದು ಬಂದಿದೆ. ದೊಡ್ಡಮ್ಮನ ಮನೆಯಿಂದ ತಿರುಗಾಡುತ್ತಾ ಕೆರೆಯಲ್ಲಿ ಬಿದ್ದು ಸಾವನ್ನಪ್ಪಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ರಾಯಚೂರು: ಮೊಸಳೆಗೆ ಬಲಿಯಾಗಿದ್ದ ಬಾಲಕನ ರುಂಡ ಮಾತ್ರ ಪತ್ತೆ
ಕೆರೆಗೆ ಕಾಂಪೌಂಡ್ ಕಟ್ಟದ ಹಿನ್ನೆಲೆಯಲ್ಲಿ ಬಾಲಕ ಸಾವನ್ನಪ್ಪಿದ್ದಾನೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಘಟನಾ ಸ್ಥಳಕ್ಕೆ ಮೇಯರ್ ಹಾಗೂ ಆಯುಕ್ತರು ಬರುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. ಕೆಟಿಜೆ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೆರೆಯಿಂದ ಬಾಲಕನ ಶವವನ್ನ ಸ್ಥಳೀಯರು ಹೊರತೆಗೆದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ