ಕೋಲಾರ: ವರದಕ್ಷಿಣೆಗಾಗಿ ಗರ್ಭಿಣಿ ಪತ್ನಿಗೆ ಕಿರುಕುಳ, ಪಾಪಿ ಗಂಡನಿಗೆ 7 ವರ್ಷ ಜೈಲು ಶಿಕ್ಷೆ

Published : Jan 04, 2024, 11:15 PM IST
ಕೋಲಾರ: ವರದಕ್ಷಿಣೆಗಾಗಿ ಗರ್ಭಿಣಿ ಪತ್ನಿಗೆ ಕಿರುಕುಳ, ಪಾಪಿ ಗಂಡನಿಗೆ 7 ವರ್ಷ ಜೈಲು ಶಿಕ್ಷೆ

ಸಾರಾಂಶ

ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2013 ಡಿ.28ರಂದು ಮಾಲೂರು ತಾಲ್ಲೂಕಿನ ಲಕ್ಕೂರು ಹೋಬಳಿಯ ರಾಜಕೃಷ್ಣಾಪುರ ಚೌಡಪ್ಪ ರೆಡ್ಡಿ ವರದಕ್ಷಿಣೆ ತರುವಂತೆ ಒತ್ತಾಯಿಸಿ ತನ್ನ ಗರ್ಭಿಣಿ ಪತ್ನಿ ಯನ್ನು ಹೊಡೆದು ಕಿರುಕುಳ ನೀಡಿದ ಸಂದರ್ಭದಲ್ಲಿ ಆಕೆಯ ಹೊಟ್ಟೆಗೆ ಬಲವಾದ ಏಟುಗಳು ಬಿದ್ದ ಪರಿಣಾಮ ರಕ್ತಸ್ರಾವವಾಗಿ ಗರ್ಭಪಾತವಾದ ಹಿನ್ನಲೆಯಲ್ಲಿ ಮಗು ಮೃತಪಟ್ಟಿತ್ತು.

ಕೋಲಾರ(ಜ.04): ವರದಕ್ಷಿಣೆಗಾಗಿ ಗರ್ಭಿಣಿ ಪತ್ನಿಯನ್ನು ಹೊಡೆದ ಪರಿಣಾಮ ಮಗು ಮೃತಪಟ್ಟ ಹಿನ್ನೆಲೆಯಲ್ಲಿ ಆರೋಪಿ ಪತಿಗೆ ೭ ವರ್ಷ ಶಿಕ್ಷೆ ಹಾಗೂ ೪೦ ಸಾವಿರ ರೂ. ದಂಡವಿಧಿಸಿ ಇಲ್ಲಿನ ೧ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತೀರ್ಪು ನೀಡಿದೆ.

ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ೨೦೧೩ ಡಿ.೨೮ರಂದು ಮಾಲೂರು ತಾಲ್ಲೂಕಿನ ಲಕ್ಕೂರು ಹೋಬಳಿಯ ರಾಜಕೃಷ್ಣಾಪುರ ಚೌಡಪ್ಪ ರೆಡ್ಡಿ ವರದಕ್ಷಿಣೆ ತರುವಂತೆ ಒತ್ತಾಯಿಸಿ ತನ್ನ ಗರ್ಭಿಣಿ ಪತ್ನಿ ಯನ್ನು ಹೊಡೆದು ಕಿರುಕುಳ ನೀಡಿದ ಸಂದರ್ಭದಲ್ಲಿ ಆಕೆಯ ಹೊಟ್ಟೆಗೆ ಬಲವಾದ ಏಟುಗಳು ಬಿದ್ದ ಪರಿಣಾಮ ರಕ್ತಸ್ರಾವವಾಗಿ ಗರ್ಭಪಾತವಾದ ಹಿನ್ನಲೆಯಲ್ಲಿ ಮಗು ಮೃತಪಟ್ಟಿತ್ತು. ಪತ್ನಿಯ ದೂರಿನ ಹಿನ್ನಲೆಯಲ್ಲಿ ಮಾಲೂರು ಪೊಲೀಸರು ಐ.ಪಿ.ಸಿ. ೪೯೮ಎ, ೩೦೭, ೩೨೩, ೩೧೬, ೫೦೪ ಸೆಕ್ಷನ್ ಅನ್ವಯ ದೂರು ದಾಖಲಿಸಿಕೊಂಡು ಆರೋಪಿ ಚೌಡಪ್ಪನನ್ನು ಜೈಲಿಗೆ ಕಳುಹಿಸಿದ್ದರು.

ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; 4 ತಿಂಗಳ ಬಳಿಕ ಪ್ರಕರಣ ಬಯಲಿಗೆ!

ಈ ಬಗ್ಗೆ ನ್ಯಾಯಾಲಯದಲ್ಲಿ ಸುಧೀರ್ಘ ವಾದ ವಿವಾದ ಹಾಗೂ ೧೧ ಸಾಕ್ಷಿಗಳ ವಿಚಾರಣೆ ನಡೆದು ಆರೋಪಿ ಚೌಡಪ್ಪ ಮೇಲೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ೧ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲದ ನ್ಯಾಯಾಧೀಶರಾದ ಪಿ.ಕೆ.ದಿವ್ಯ ಅವರು ಆರೋಪಿಗೆ ೭ ವರ್ಷ ಶಿಕ್ಷೆ ಹಾಗೂ ೪೦ ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ಸಂತ್ರಸ್ತೆ ಗರ್ಭಿಣಿ ಪರವಾಗಿ ಸರ್ಕಾರಿ ಅಭಿಯೋಜಕಿ ಜ್ಯೋತಿಲಕ್ಷ್ಮಿ ಅವರು ವಾದ ಮಂಡಿಸಿದ್ದು, ಅಂದಿನ ವೃತ್ತ ನಿರೀಕ್ಷಕ ಮಾರ್ಕಂಡಯ್ಯ ಅವರು ತನಿಖಾ ಅಧಿಕಾರಿಯಾಗಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ
ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?