
ಕುಂದಾಪುರ(ಡಿ.22): ಇಲ್ಲಿನ ಕಟ್ಕೆರೆ ಗ್ರಾಮದಲ್ಲಿ 13 ವರ್ಷದ ವಿದ್ಯಾರ್ಥಿನಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ಸಂಜೆ ನಡೆದಿದೆ. ಇಲ್ಲಿನ ನಿವಾಸಿ ರಾಜಶೇಖರ ಎಂಬವರ ಮಗಳು ರಿಷಿತಾ ಆತ್ಮಹತ್ಯೆ ಮಾಡಿಕೊಂಡವಳು.
ಈಕೆ 7ನೇ ತರಗತಿಯಲ್ಲಿ ಓದುತ್ತಿದ್ದು, ಶಾಲೆಯಿಂದ ಮನೆಗೆ ಬಂದವಳೇ ಮನೆಯ ಸಮೀಪದ ಬಾವಿಗೆ ಹಾರಿದಳು. ತಕ್ಷಣ ಮನೆಯವರು ಆಗ್ನಿಶಾಮಕ ದಳವನ್ನು ಕರೆಯಿಸಿ ಆಕೆಯನ್ನು ಮೇಲೆತ್ತಿದರಾದರೂ, ಆಕೆ ಅದಾಗಲೇ ಮೃತಪಟ್ಟಿದ್ದಳು.
ಫ್ಯಾಕ್ಟರಿಯಲ್ಲಿ ರಜೆ ನೀಡದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ!
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆಕೆ ಅನೇಕ ಸಮಯದಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ಕುಂದಾಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಮಾಡಿಸಲಾಗುತ್ತಿತ್ತು ಎಂದು ತಿಳಿದುಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ