
ಕೋರ್ಬಾ( ಜು. 21) ಕೊರೋನಾಕ್ಕೆ ಹಸುವಿನ ಸಗಣಿ ಕೊರೋನಾಕ್ಕೆ ಮದ್ದು ಎಂಬ ಸುದ್ದಿ ಬಂದಿತ್ತು. ಛತ್ತೀಸ್ಘಡದ ಕೊರ್ಬಾ ಜಿಲ್ಲೆಯ ಧುರೇನಾ ಗ್ರಾಮದಿಂದ 1,600 ರೂ.ಗಳ ಮೌಲ್ಯದ ಸುಮಾರು 800 ಕಿಲೋಗ್ರಾಂಗಳಷ್ಟು ಗೋವಿನ ಸಗಣಿ ಕಳ್ಳತನ ಮಾಡಲಾಗಿದೆ.
ಸಗಣಿ ಕಳ್ಳರ ವಿರುದ್ಧ ಪ್ರಕರಣ ದಾಖಲಾಗಿದೆ. ಜೂನ್ 8 ಮತ್ತು ಜೂನ್ 9 ರ ಮಧ್ಯರಾತ್ರಿ ಡಿಪ್ಕಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಧುರೇನಾ ಗ್ರಾಮದಲ್ಲಿ ಈ ಕಳ್ಳತನ ನಡೆದಿದೆ.
ಬಿಜೆಪಿ ನಾಯಕನ ಮನೆ ಮುಂದೆ ಸಗಣಿ ರಾಶಿ
1,600 ರೂ.ಗಳ ಮೌಲ್ಯದ 8 ಕ್ವಿಂಟಾಲ್ ಗೋವಿನ ಸಗಣಿ ಕಳವು ಮಾಡಲಾಗಿದೆ. ಅಪರಿಚಿತ ವ್ಯಕ್ತಿಗಳ ವಿರುದ್ಧ ಜೂನ್ 15 ರಂದು ಪ್ರಕರಣ ದಾಖಲಿಸಲಾಗಿದೆ ಎಂದು ಡಿಪ್ಕಾ ಪೊಲೀಸ್ ಠಾಣೆಯ ಸಹಾಯಕ ಸಬ್ ಇನ್ಸ್ಪೆಕ್ಟರ್ ಸುರೇಶ್ ಕುಮಾ ತಿಳಿಸಿದ್ದಾರೆ.
ಛತ್ತೀಸ್ ಘಡ ಸರ್ಕಾರ 'ಗೋಧನ್ ನ್ಯಾಯ ಯೋಜನೆ' ಯಡಿ ಹಸುವಿನ ಸಗಣಿ ಖರೀದಿ ಮಾಡುತ್ತೇನೆ ಎಂದು ಹೇಳಿದ ನಂತರ ಬೇಡಿಕೆ ಹೆಚ್ಚಿದೆ. ಕೆಜಿ ಸಗಣಿಗೆ 2 ರೂ. ಕೊಟ್ಟು ಖರೀದಿಸುವುದಾಗಿ ಸರ್ಕಾರ ಹೇಳಿದ ನಂತರ ಕಳ್ಳರ ಕಣ್ಣು ಸಗಣಿ ಮೇಲೆ ಬಿದ್ದಿದೆ. ಸರ್ಕಾರದ ಈ ಘೋಷಣೆ ನಂತರ ಸ್ಥಳೀಯರು ಸಹ ಸಗಣಿ ಸಂಗ್ರಹಣೆಯಲ್ಲಿ ಬ್ಯುಸಿಯಾಗಿದ್ದಾರೆ. (ಚಿತ್ರ ಕೃಪೆ; ಎಎನ್ಐ)
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ