ಹಿಂದಿ ಹೇರಿಕೆ ವಿರೋಧಿಸಿ ತಮಿಳುನಾಡು ವಯೋವೃದ್ಧ ರೈತ ಆತ್ಮಾಹುತಿ

Published : Nov 27, 2022, 07:44 AM IST
ಹಿಂದಿ ಹೇರಿಕೆ ವಿರೋಧಿಸಿ ತಮಿಳುನಾಡು ವಯೋವೃದ್ಧ ರೈತ  ಆತ್ಮಾಹುತಿ

ಸಾರಾಂಶ

 ಹಿಂದಿ ಹೇರಿಕೆ ವಿರೋಧಿಸಿ ಬೆಂಕಿ ಹಚ್ಚಿಕೊಂಡು ತಮಿಳುನಾಡು ರೈತ ಆತ್ಮಾಹುತಿ ಮಾಡಿಕೊಂಡಿದ್ದಾರೆ. ತಮಿಳುನಾಡಿನ ಸೇಲಂ ಜಿಲ್ಲೆಯ ಡಿಎಂಕೆ ಕಚೇರಿಯೆದುರು ಈ ಘಟನೆ ನಡೆದಿದೆ.

ಚೆನ್ನೈ: ಹಿಂದಿ ಹೇರಿಕೆಯನ್ನು (Hindi Imposition) ವಿರೋಧಿಸಿ ತಮಿಳುನಾಡಿನ (Tamil Nadu) ಸೇಲಂ (Salem) ಜಿಲ್ಲೆಯ 85 ವರ್ಷದ ರೈತನು (Farmer) ಡಿಎಂಕೆ (DMK) ಕಚೇರಿಯೆದುರು ತನ್ನ ದೇಹಕ್ಕೆ ಬೆಂಕಿ ಹಚ್ಚಿಕೊಂಡ ಮೃತಪಟ್ಟ ಭೀಕರ ಘಟನೆ ವರದಿಯಾಗಿದೆ. ಡಿಎಂಕೆ ಪಕ್ಷದ ಕೃಷಿ ಒಕ್ಕೂಟದ ಮಾಜಿ ಸಂಘಟಕ ತಂಗವೇಲ್‌ (Thangavel) ಮೃತಪಟ್ಟ ರೈತ. ಇವರು ಥಲೈಯೂರಿನ ಡಿಎಂಕೆ ಪಕ್ಷದ ಕಚೇರಿಯ ಎದುರು ಹಿಂದಿ ಹೇರಿಕೆಯನ್ನು ವಿರೋಧಿಸಿ ತಮ್ಮ ಮೇಲೆ ಪೆಟ್ರೋಲ್‌ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದು ಶನಿವಾರ ಮುಂಜಾನೆ 11 ಗಂಟೆ ವೇಳೆಗೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ತಂಗವೇಲ್‌ ಕೇಂದ್ರ ಸರ್ಕಾರವು ಹಿಂದಿಯನ್ನು ಶಿಕ್ಷಣದ ಮಾಧ್ಯಮವಾಗಿ ಮಾಡಲು ಮುಂದಾಗಿದೆ ಎಂದು ಚಿಂತೆಗೀಡಾಗಿದ್ದರು ಎನ್ನಲಾಗಿದೆ. ತಮ್ಮನ್ನೇ ತಾವು ಸುಟ್ಟುಕೊಳ್ಳುವ ಮೊದಲು ಅವರು ‘ಮೋದಿ ಸರ್ಕಾರ, ಕೇಂದ್ರ ಸರ್ಕಾರ, ನಮಗೆ ಹಿಂದಿ ಬೇಡ. ನಮ್ಮ ಮಾತೃಭಾಷೆ ತಮಿಳು. ಹಿಂದಿಯು ವಿದೂಷಕರಿಗಾಗಿ ಇರುವ ಭಾಷೆ. ಹಿಂದಿ ಭಾಷೆಯನ್ನು ಹೇರುವುದರಿಂದ ವಿದ್ಯಾರ್ಥಿಗಳ ಜೀವನಕ್ಕೆ ತೊಂದರೆಯಾಗುತ್ತದೆ. ಹಿಂದಿ ತೊಲಗಿಸಿ’ ಎಂದು ಬರೆದ ಬ್ಯಾನರ್‌ ಹಿಡಿದುಕೊಂಡಿದ್ದರು.

ಇದನ್ನು ಓದಿ: ಎನ್‌ಇಪಿಯಲ್ಲಿ ಹಿಂದಿ ಹೇರಿಕೆ ಇಲ್ಲ: ಧರ್ಮೇಂದ್ರ ಪ್ರಧಾನ್‌

ಡಿಎಂಕೆ ಕಾರ್ಯಕರ್ತರೂ ಆಗಿರುವ ಇವರು, ತಮಿಳುನಾಡಿನಲ್ಲಿ ಕೇಂದ್ರ ಸರ್ಕಾರ ಹಿಂದಿ ಹೇರುತ್ತಿದೆ ಎಂದು ಆರೋಪಿಸಿ ಶನಿವಾರ ಸೇಲಂನಲ್ಲಿ ಆತ್ಮಾಹುತಿ ಮಾಡಿಕೊಂಡಿದ್ದಾರೆ. ಮೆಟ್ಟೂರಿನ ಪಿ.ಎನ್. ಪಟ್ಟಿ ಸಮೀಪದ ತಲೈಯೂರಿನ ಎಂ.ವಿ. ತಂಗವೇಲ್, ರೈತ ಮತ್ತು ಡಿಎಂಕೆ ಪದಾಧಿಕಾರಿಯಾಗಿದ್ದರು ಎಂದು ತಮಿಳುನಾಡು ಪೊಲೀಸರು ಮಾಹಿತಿ ನೀಡಿದ್ದಾರೆ. ಶನಿವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ತಂಗವೇಲ್ ತಲೈಯೂರಿನಲ್ಲಿರುವ ಡಿಎಂಕೆ ಪಕ್ಷದ ಕಚೇರಿಗೆ ಬಂದು ಆತ್ಮಾಹುತಿ ಮಾಡಿಕೊಂಡರು. 

ಅವರ ಕಿರುಚಾಟ ಕೇಳಿ ಸ್ಥಳೀಯ ನಿವಾಸಿಗಳು ಸ್ಥಳಕ್ಕೆ ಧಾವಿಸಿದರೂ ಅವರನ್ನು ಬಚಾವ್‌ ಮಾಡಲು ಸಾಧ್ಯವಾಗಲಿಲ್ಲ. ನಂತರ, ಈ ಬಗ್ಗೆ ಮಾಹಿತಿ ಪಡೆದ ಮೆಟ್ಟೂರು ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮೆಟ್ಟೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಇದನ್ನೂ ಓದಿ: ಹಿಂದಿ ಕಡ್ಡಾಯದ ಅಮಿತ್‌ ಶಾ ವರದಿ ಆಘಾತಕಾರಿ: ಎಚ್‌.ಡಿ.ಕುಮಾರಸ್ವಾಮಿ

ಮೃತ ತಂಗವೇಲ್ ಪಿ.ಎನ್. ಪಟ್ಟಿ ಪಟ್ಟಣ ಪಂಚಾಯತ್ ಡಿಎಂಕೆ ಕಾರ್ಯದರ್ಶಿ ಕುಮಾರ್ ಅವರಿಗೆ ಬರೆದಿದ್ದ ಫಲಕ ಹಾಗೂ ಪತ್ರವನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಅದನ್ನು ಅವರು ಡಿಎಂಕೆ ಪಕ್ಷದ ಕಚೇರಿಗೆ ಕರೆದುಕೊಂಡು ಹೋಗಿದ್ದರು. ಫಲಕದಲ್ಲಿ ತಂಗವೇಲ್ ಅವರು ಕೇಂದ್ರ ಸರ್ಕಾರ ಮತ್ತು ಪ್ರಧಾನಿಯನ್ನು ಹಿಂದಿ ಹೇರಿಕೆ ಮಾಡದಂತೆ ಒತ್ತಾಯಿಸಿದರು.

ಈ ಸಂಬಂಧ ಮೆಟ್ಟೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಮೃತರು ಪತ್ನಿ ಜಾನಕಿಯಮ್ಮಳ್, ಪುತ್ರರಾದ ಮಣಿ ಮತ್ತು ರತ್ನವೇಲ್ ಹಾಗೂ ಪುತ್ರಿ ಕಲ್ಯಾಣಿ ಅವರನ್ನು ಅಗಲಿದ್ದಾರೆ. ಘಟನೆಯ ಮಾಹಿತಿ ತಿಳಿದ ಡಿಎಂಕೆ ಕಾರ್ಯಕರ್ತರು ಡಿಎಂಕೆ ಪಕ್ಷದ ಕಚೇರಿ ಮತ್ತು ಮೃತರ ನಿವಾಸದಲ್ಲಿ ಜಮಾಯಿಸಿದರು.

ಇದನ್ನೂ ಓದಿ: ಎಸ್‌ಎಸ್‌ಸಿ ಪರೀಕ್ಷೆಯಲ್ಲಿ ಕನ್ನಡ ನಿರ್ಲಕ್ಷ್ಯ ವಿವಾದ, ಸೋಶಿಯಲ್‌ ಮೀಡಿಯಾದಲ್ಲಿ ಕೇಂದ್ರದ ವಿರುದ್ಧ ಕೆಂಗಣ್ಣು!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?
ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ