ಚಿತ್ರದುರ್ಗ: ಗಾಂಜಾ ಬೆಳೆದಿದ್ದ ಹೊಲಕ್ಕೆ ದಿಢೀರ್ ದಾಳಿ, ಜಮೀನು ಮಾಲೀಕ ಅರೆಸ್ಟ್‌

Published : Sep 28, 2023, 01:32 PM IST
ಚಿತ್ರದುರ್ಗ:  ಗಾಂಜಾ ಬೆಳೆದಿದ್ದ ಹೊಲಕ್ಕೆ ದಿಢೀರ್ ದಾಳಿ, ಜಮೀನು ಮಾಲೀಕ ಅರೆಸ್ಟ್‌

ಸಾರಾಂಶ

ಆರೋಪಿಯು ತನ್ನ ಜಮೀನಿನಲ್ಲಿ ಯಾರಿಗೂ ಅನುಮಾನ ಬರದಂತೆ ಹತ್ತಿ ಬೆಳೆಯ ನಡುವೆ ಗಾಂಜಾ ಗಿಡಗಳನ್ನು ಬೆಳೆಸಿದ್ದ. ಖಚಿತ ಮಾಹಿತಿಯನ್ನಾಧರಿಸಿ ಅಬಕಾರಿ ಉಪ ಆಯುಕ್ತ ಬಿ.ಮಾದೇಶ ನೇತೃತ್ವ ತಂಡ ಜಮೀನಿಗೆ ದಿಢೀರನೆ ದಾಳಿ ನಡೆಸಿದ್ದಾರೆ. ಈ ವೇಳೆ ಹತ್ತಿ ಬೆಳೆಯ ನಡುವೆ ಹೂ, ಕಾಯಿ ಬಿಟ್ಟಿದ್ದ 4.5 ಲಕ್ಷ ಅಂದಾಜಿನ 89 ಕೆಜಿ ತೂಕದ 18 ಗಾಂಜಾ ಗಿಡಗಳನ್ನು ವಶಪಡಿಸಿಕೊಂಡಿದ್ದಾರೆ. 

ಮೊಳಕಾಲ್ಮುರು(ಸೆ.28): ರಾಯಾಪುರದಲ್ಲಿ ಗಾಂಜಾ ಬೆಳೆದಿದ್ದ ಹೊಲಕ್ಕೆ ದಿಢೀರ್ ದಾಳಿ ನಡೆಸಿರುವ ಅಬಕಾರಿ ಇಲಾಖೆ ಅಧಿಕಾರಿಗಳ ತಂಡ 89 ಕೆಜಿ ಗಾಂಜಾ ವಶಪಡಿಸಿಕೊಂಡು, ಜಮೀನು ಮಾಲೀಕನನ್ನು ವಶಕ್ಕೆ ಪಡೆದಿರುವ ಘಟನೆ ಬುಧವಾರ ಸಂಜೆ ನಡೆದಿದೆ.

ಬಂಧಿತ ಜಮೀನಿನ ಮಾಲೀಕ ಬೈರಯ್ಯ(53) ಎಂದು ಗುರುತಿಸಲಾಗಿದೆ. ಆರೋಪಿಯು ತನ್ನ ಜಮೀನಿನಲ್ಲಿ ಯಾರಿಗೂ ಅನುಮಾನ ಬರದಂತೆ ಹತ್ತಿ ಬೆಳೆಯ ನಡುವೆ ಗಾಂಜಾ ಗಿಡಗಳನ್ನು ಬೆಳೆಸಿದ್ದ. ಖಚಿತ ಮಾಹಿತಿಯನ್ನಾಧರಿಸಿ ಅಬಕಾರಿ ಉಪ ಆಯುಕ್ತ ಬಿ.ಮಾದೇಶ ನೇತೃತ್ವ ತಂಡ ಜಮೀನಿಗೆ ದಿಢೀರನೆ ದಾಳಿ ನಡೆಸಿದ್ದಾರೆ. ಈ ವೇಳೆ ಹತ್ತಿ ಬೆಳೆಯ ನಡುವೆ ಹೂ, ಕಾಯಿ ಬಿಟ್ಟಿದ್ದ 4.5 ಲಕ್ಷ ಅಂದಾಜಿನ 89 ಕೆಜಿ ತೂಕದ 18 ಗಾಂಜಾ ಗಿಡಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧವಾಗಿ ನಾರ್ಕೋಟಿಕ್ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ದೊಡ್ಡಬಳ್ಳಾಪುರ: ಸಿಮೆಂಟ್ ರೆಡಿ ಮಿಕ್ಸ್ ಪ್ಲಾಂಟ್‌ನಲ್ಲಿ ಗಾಂಜಾ ಬೆಳೆದಿದ್ದ ಖದೀಮರು

ಈ ವೇಳೆ ಅಬಕಾರಿ ನಿರೀಕ್ಷಕ ಮೊಹಮದ್ ಸಾದತ್ ಉಲ್ಲಾ, ಸಿಬ್ಬಂದಿ ಈರಣ್ಣ, ವೀರೇಶ, ಮಲ್ಲಿಕಾರ್ಜುನಯ್ಯ, ವಾಹನ ಚಾಲಕ ಪರುಶುರಾಮ್, ಅರುಣ್ ಕುಮಾರ್, ಶಿವಮೂರ್ತಿ, ಶರಣಯ್ಯ ಇದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕ್ಯಾಸ್ಟ್ರೋಲ್ ಬ್ರಾಂಡ್‌ನ ನಕಲಿ ಎಂಜಿನ್ ಆಯಿಲ್ ಉತ್ಪಾದನೆ ಮಾಡುತ್ತಿದ್ದ ಘಟಕದ ಮೇಲೆ ದಾಳಿ
ಕೋಲಾರ: ಅಪ್ಪ- ಅಮ್ಮನ ವಿಚ್ಚೇದನಕ್ಕೆ ಮನನೊಂದು 26 ವರ್ಷದ ಪುತ್ರ ಆತ್ಮ*ಹತ್ಯೆ!