
ಮುಂಡಗೋಡ(ಫೆ.14): ತಾಯಿಯ ತಪ್ಪು ನಿರ್ಧಾರದಿಂದಾಗಿ 9 ತಿಂಗಳ ಮಗುವೊಂದು ನೀರು ಪಾಲಾದ ಘಟನೆ ತಾಲೂಕಿನ ಅತ್ತಿವೇರಿ ಜಲಾಶಯದಲ್ಲಿ ಶನಿವಾರ ನಡೆದಿದೆ.
ರಾಮು ಕಾಳು ಶಳಕೆ (9 ತಿಂಗಳು) ನೀರು ಪಾಲಾದ ಮಗು. ತಾಲೂಕಿನ ಅತ್ತಿವೇರಿ ಗೌಳಿ ದೊಡ್ಡಿಯ ಚಂದ್ರಕಲಾ ಕಾಳು ಶಳಕೆ ಎಂಬ ಮಹಿಳೆ ತನ್ನ 9 ತಿಂಗಳ ಮಗು ಸಮೇತ ಜಲಾಶಯಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಇದನ್ನು ಗಮನಿಸಿದ ಸ್ಥಳೀಯರು ತಕ್ಷಣ ಮಹಿಳೆಯನ್ನು ರಕ್ಷಿಸಿದ್ದಾರೆ. ಆದರೆ 9 ತಿಂಗಳ ಹಸು ಗೂಸು ಮಾತ್ರ ನೀರು ಪಾಲಾಗಿದೆ.
ಪತ್ನಿ ಸಾವಿನ ಸುದ್ದಿ ಕೇಳಿ ಪತಿ ಆತ್ಮಹತ್ಯೆ: ಸಾವಿನಲ್ಲೂ ಒಂದಾದ ದಂಪತಿ
ಸುದ್ದಿ ತಿಳಿದ ಮುಂಡಗೋಡ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ತೀವ್ರ ಶೋಧ ಕಾರ್ಯ ನಡೆಸುವ ಮೂಲಕ ಮಗುವಿನ ಶವವನ್ನು ಹೊರ ತೆಗೆದಿದ್ದಾರೆ. ತೀವ್ರ ಅಸ್ವಸ್ಥಗೊಂಡಿದ್ದ ಮಹಿಳೆಗೆ ಮುಂಡಗೋಡ ಸರಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೌಟುಂಬಿಕ ಸಮಸ್ಯೆಯೇ ಈ ಘಟನೆಗೆ ಕಾರಣವೆನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ