
ಬೆಂಗಳೂರು(ಏ.29): ಕಳೆದ ಮೂರು ತಿಂಗಳ ಅವಧಿಯಲ್ಲಿ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಎಂಟು ಮಂದಿ ರೌಡಿಶೀಟರ್ಗಳು ಸೇರಿ ಒಟ್ಟು ಒಂಬತ್ತು ಮಂದಿಯನ್ನು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಗೂಂಡಾ ಕಾಯ್ದೆಯಡಿ ಬಂಧಿಸಿದ್ದಾರೆ.
ಅಮೃತಹಳ್ಳಿ ಠಾಣೆ ರೌಡಿಶೀಟರ್ ಮುನಿಕೃಷ್ಣ (27), ಬನಶಂಕರಿ ಠಾಣೆ ರೌಡಿಶೀಟರ್ ಸಾಗರ್ ಅಲಿಯಾಸ್ ಇಟ್ಟಮಡು (22), ಬೈಯಪ್ಪನಹಳ್ಳಿ ಠಾಣೆಯ ರಾಜು ಅಲಿಯಾಸ್ ರಾಜುದೊರೈ (25), ಬ್ಯಾಡರಹಳ್ಳಿ ಠಾಣೆ ವಾಸುದೇವ ಅಲಿಯಾಸ್ ವಾಸು(32), ಹುಳಿಮಾವು ಠಾಣೆಯ ಚೇತನ್ ಅಲಿಯಾಸ್ ಮಾದೇಶ(29), ಇಂದಿರಾನಗರ ಠಾಣೆಯ ಕೋಟೇಶ್ವರನ್ ಅಲಿಯಾಸ್ ಕೋಟೆ(23), ಅಮೃತಹಳ್ಳಿ ನಿವಾಸಿ ಸ್ಯಾಮುಯಲ್(24), ಯಶವಂತಪುರ ಠಾಣೆಯ ಮಂಜುನಾಥ್(35) ಎಂಬ ರೌಡಿಶೀಟರ್ಗಳನ್ನು ಬಂಧಿಸಲಾಗಿದ್ದು, ಇದರೊಂದಿಗೆ ನಗರದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಇಸ್ಪೀಟ್ ಅಡ್ಡೆಗಳು, ವಿಡಿಯೋ ಗೇಮ್ಸ್ಗಳನ್ನು ನಡೆಸುತ್ತಿದ್ದ ಬಿ.ಹರಿರಾಜಶೆಟ್ಟಿ ಅಲಿಯಾಸಿ ಹರೀಶ್ (58) ಎಂಬಾತನನ್ನು ಗೂಂಡಾ ಕಾಯ್ದೆ ಅಡಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹೆಂಡತಿ ತಂಗಿಯೊಂದಿಗೆ ಕುಚ್ ಕುಚ್...ಗರ್ಭಿಣಿ ಪತ್ನಿ ಹತ್ಯೆ ಮಾಡಿದ!
ಆರೋಪಿಗಳ ವಿರುದ್ಧ ನಗರದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ 8-10 ವರ್ಷಗಳಿಂದ ಕೊಲೆ, ಕೊಲೆ ಯತ್ನ, ಹಲ್ಲೆ, ಸುಲಿಗೆ, ಸರ ಅಪಹರಣ, ಗಾಂಜಾ, ಅತ್ಯಾಚಾರ, ಪೊಲೀಸ್ ಅಧಿಕಾರಿಗಳ ಮೇಲೆ ಹಲ್ಲೆ, ಅಕ್ರಮ ಚಟುವಟಿಕೆಗಳು ಸೇರಿ ಹತ್ತಾರು ಪ್ರಕರಣಗಳು ದಾಖಲಾಗಿವೆ. ಎಷ್ಟು ಬಾರಿ ಎಚ್ಚರಿಕೆ ನೀಡಿದರೂ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುವ ಜೊತೆಗೆ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದರು. ಹೀಗಾಗಿ ಗೂಂಡಾ ಕಾಯ್ದೆಯಡಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ