ಚಿತ್ರದುರ್ಗದಲ್ಲಿ ಹೃದಯ ವಿದ್ರಾವಕ ಘಟನೆ: ಬೀದಿ ನಾಯಿಗಳ ಭೀಕರ ದಾಳಿಗೆ ಬಾಲಕ ಬಲಿ!

Published : Oct 17, 2024, 07:29 AM IST
ಚಿತ್ರದುರ್ಗದಲ್ಲಿ ಹೃದಯ ವಿದ್ರಾವಕ ಘಟನೆ: ಬೀದಿ ನಾಯಿಗಳ ಭೀಕರ ದಾಳಿಗೆ ಬಾಲಕ ಬಲಿ!

ಸಾರಾಂಶ

ಬೀದಿ ನಾಯಿಗಳ ಹಿಂಡೊಂದು ಬಾಲಕನೊಬ್ಬನನ್ನು ಬಲಿ ಪಡೆದ ಹೃದಯ ವಿದ್ರಾವಕ ಘಟನೆ ತಾಲೂಕಿನ ರಾಂಪುರ ಗ್ರಾಮದ ಕೊಂಡಾಪುರ ರಸ್ತೆಯಲ್ಲಿ ಬುಧವಾರ ನಡೆದಿದೆ.

ಮೊಳಕಾಲ್ಮುರು (ಚಿತ್ರದುರ್ಗ) (ಅ.17): ಬೀದಿ ನಾಯಿಗಳ ಹಿಂಡೊಂದು ಬಾಲಕನೊಬ್ಬನನ್ನು ಬಲಿ ಪಡೆದ ಹೃದಯ ವಿದ್ರಾವಕ ಘಟನೆ ತಾಲೂಕಿನ ರಾಂಪುರ ಗ್ರಾಮದ ಕೊಂಡಾಪುರ ರಸ್ತೆಯಲ್ಲಿ ಬುಧವಾರ ನಡೆದಿದೆ. ಮೃತ ಬಾಲಕನನ್ನು ರಾಂಪುರ ಗ್ರಾಮದ ಸಿ.ಮಿಥುನ್ (11) ಎನ್ನಲಾಗಿದೆ. ಐದನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಮಿಥುನ್ ಎಂದಿನಂತೆ ಟ್ಯೂಶನ್ ಗೆ ತೆರಳಿ ಮರಳಿ ಬರುವಾಗ ದಾರಿಯಲ್ಲಿ ನಿಂತಿದ್ದ ಮೂರ್ನಾಲ್ಕು ಬೀದಿ ನಾಯಿಗಳು ಏಕಾ ಏಕಿ ದಾಳಿ ಮಾಡಿವೆ.

ಈ ವೇಳೆ ಬಾಲಕ ಕಿರುಚಾಡಿದರೂ ಬಿಡದೆ ತಲೆ, ಎದೆ ಭಾಗ, ಕೈ, ಕಾಲು ಸೇರಿದಂತೆ ವಿವಿಧ ಕಡೆ ಮಾರಣಾಂತಿಕವಾಗಿ ಕಚ್ಚಿ ಗಾಯಗೊಳಿಸಿವೆ. ಗಂಭೀರವಾಗಿ ಗಾಯಗೊಂಡ ಬಾಲಕನನ್ನು ರಾಂಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತಂದು ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆಂದು ಬಳ್ಳಾರಿಯ ವಿಮ್ಸ್ ಗೆ ಕರೆತಂದಾಗ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಕೊನೆಯುಸಿರೆಳೆದಿದ್ದಾನೆ ಎನ್ನಲಾಗಿದೆ. ರಾಂಪುರ ಗ್ರಾಮದ ಕೊಂಡಾಪುರ ರಸ್ತೆ ಸದಾ ಜನನೀ ಬಿಡ ಪ್ರದೇಶವಾಗಿದೆ. ಕೊಂಡಾಪುರ, ತಿಮ್ಲಾಪುರ, ಕರಡಿಹಳ್ಳಿ ಸೇರಿದಂತೆ ಆಂಧ್ರ ಗಡಿ ಭಾಗದ ವಿವಿಧ ಭಾಗಗಳನ್ನು ಸಂಪರ್ಕಿಸುವ ಮುಖ್ಯ ರಸ್ತೆಯಾಗಿದೆ. ವಾಹನ ಸಂಚಾರ ಸದಾ ಹೆಚ್ಚಾಗಿರುತ್ತದೆ. ಆದರೆ ಬುಧವಾರ ಜಿಟಿ ಜಿಟಿ ಮಳೆ ಇದ್ದರಿಂದ ಜನರ ಓಡಾಟ ಇರಲಿಲ್ಲ. 

ಇದೇ ಸಮಯ ರಸ್ತೆಯಲ್ಲಿ ಸಾಗಿ ಬರುತ್ತಿದ್ದ ಬಾಲಕ ಮಿಥುನ್ ಮೇಲೆ ನಾಯಿಗಳು ದಾಳಿ ಮಾಡುತ್ತಿದ್ದರೂ ಆ ಕ್ಷಣಕ್ಕೆ ಸ್ಥಳದಲ್ಲಿ ಯಾರೂ ಇರಲಿಲ್ಲ ಎನ್ನಲಾಗಿದೆ. ಘಟನೆಯಿಂದ ಗ್ರಾಮದಲ್ಲಿ ಆತಂಕ ಮನೆ ಮಾಡಿದ್ದು, ಮಕ್ಕಳನ್ನು ಹೊರಗೆ ಕಳಿಸಲು ಸಾರ್ವಜನಿಕರಿಗೆ ಭೀತಿ ಎದುರಾಗಿದೆ. ಮಡುಗಟ್ಟಿದ ದುಃಖ: ಕಣ್ಣ ಮುಂದೆಯೇ ಆಡಿಕೊಂಡು ಖುಶಿ ಖುಶಿಯಾಗಿ ಕಲಿಯಲು ಹೋಗಿದ್ದ ಬಾಲಕ ನಾಯಿಗಳ ದಾಳಿಗೆ ತುತ್ತಾಗಿದ್ದರಿಂದ ಇಡೀ ಗ್ರಾಮವೇ ದುಃಖದ ಮಡುವಿನಲ್ಲಿ ಮಲಗಿತ್ತು. ಗ್ರಾಮದ ಬೀದಿಗಳಲ್ಲಿ ನೀರವ ಮೌನ ಆವರಿಸಿತ್ತು. ಮಗನ ಸಾವಿನಿಂದ ಪೋಷಕರ ದುಃಖ ಮುಗಿಲು ಮುಟ್ಟಿತ್ತು. ಬಾಳಿ ಬದುಕಬೇಕಾದ ಮಗನನ್ನು ಕಳೆದುಕೊಂಡ ಕುಟುಂಬಸ್ಥರ ದುಃಖದ ಕಟ್ಟೆ ಒಡೆದಿತ್ತು.

ಕಾವೇರಿ 6ನೇ ಹಂತದ ಕುಡಿಯುವ ನೀರು ಯೋಜನೆಗೆ ಸೂಚನೆ: ಸಿಎಂ ಸಿದ್ದರಾಮಯ್ಯ

ಗ್ರಾಮ ಪಂಚಾಯಿತಿ ಬೇಜವಾಬ್ದಾರಿ: ಗ್ರಾಮದಲ್ಲಿ ಬೀದಿ ನಾಯಿಗಳು ಕಾಟ ಹೆಚ್ಚುತ್ತಿವೆ. ಹಲವು ಬಾರಿ ಮಕ್ಕಳ ಮೇಲೆ ದಾಳಿ ಮಾಡಿ ಗಾಯಗೊಳಿಸಿರುವ ಘಟನೆಗಳು ಜರುಗಿದ್ದು, ಕಳೆದೆರಡು ವರ್ಷಗಳಿಂದ ನಾಲ್ಕೈದು ಇಂಥಹ ಪ್ರಕರಣಗಳು ಬೆಳಕಿಗೆ ಬಂದಿವೆ. ಅಲ್ಲದೆ ಕಳೆದ ತಿಂಗಳು ಎರಡು ಕೋತಿಗಳು ಇಬ್ಬರು ಬಾಲಕರನ್ನು ಕಚ್ಚಿ ಗಾಯಗೊಳಿಸಿವೆ. ಬೀದಿ ನಾಯಿಗಳ ಹಾವಳಿಗೆ ಕಡಿವಾಣ ಹಾಕುವಂತೆ ಹಲವು ಬಾರಿ ಪಂಚಾಯಿತಿಗೆ ಮನವಿ ಮಾಡಿದ್ದರೂ, ಸಮಸ್ಯೆ ಪರಿಹಾರವಾಗಿಲ್ಲ ಎನ್ನುವ ಮಾತುಗಳು ಸಾರ್ವಜನಿಕವಾಗಿ ಕೇಳಿಬಂದವು. ರಾಂಪುರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಾಲಿವುಡ್ ನಿರ್ದೇಶಕ ವಿಕ್ರಂ ಭಟ್, ಪತ್ನಿ ಶ್ವೇತಾಂಬರಿ ಭಟ್ ಬಂಧನ; ಅಂತಿಂಥ ವಂಚನೆ ಕೇಸಲ್ಲ ಇದು ಅಂತೀರಾ?!
ಕೊಪ್ಪಳ: ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ - ಪ್ರಿ-ವೆಡ್ಡಿಂಗ್ ಶೂಟಿಂಗ್ ಮುಗಿಸಿ ವಾಪಸಾಗುವಾಗ ಭೀಕರ ದುರಂತ!