Wildlife: ಜಿಂಕೆ ಮರಿ‌ಸಾಕಲು ಹೋಗಿ ಪೇಚಿಗೆ ಸಿಲುಕಿದ ಕಾಫಿ ಎಸ್ಟೇಟ್ ಮಾಲೀಕ!

Published : Feb 05, 2023, 01:31 PM IST
Wildlife: ಜಿಂಕೆ ಮರಿ‌ಸಾಕಲು ಹೋಗಿ ಪೇಚಿಗೆ ಸಿಲುಕಿದ ಕಾಫಿ ಎಸ್ಟೇಟ್ ಮಾಲೀಕ!

ಸಾರಾಂಶ

ಜಿಂಕೆ ಮರಿ ಸಾಕಲು ಹೋಗಿ ಪೇಚಿಗೆ ಸಿಲುಕಿದ ಎಸ್ಟೇಟ್ ಮಾಲೀಕ ಕಾಫಿ ಎಸ್ಟೇಟ್ ಒಂದರಲ್ಲಿ ಜಿಂಕೆ ಮರಿ ಸಾಕಿದ ಮಾಲೀಕರ ವಿರುದ್ಧ ಅರಣ್ಯ ಇಲಾಖೆ ಪ್ರಕರಣ ದಾಖಲಿಸಿದೆ. 

ವರದಿ : ಆಲ್ದೂರು ಕಿರಣ್ ಏಷ್ಯಾನೆಟ್ ಸುವರ್ಣ ನ್ಯೂಸ್ ಚಿಕ್ಕಮಗಳೂರು

ಚಿಕ್ಕಮಗಳೂರು (ಫೆ.5): ಜಿಂಕೆ ಮರಿ ಸಾಕಲು ಹೋಗಿ ಪೇಚಿಗೆ ಸಿಲುಕಿದ ಎಸ್ಟೇಟ್ ಮಾಲೀಕ ಕಾಫಿ ಎಸ್ಟೇಟ್ ಒಂದರಲ್ಲಿ ಜಿಂಕೆ ಮರಿ ಸಾಕಿದ ಮಾಲೀಕರ ವಿರುದ್ಧ ಅರಣ್ಯ ಇಲಾಖೆ ಪ್ರಕರಣ ದಾಖಲಿಸಿದೆ. 

ಚಿಕ್ಕಮಗಳೂರು ಜಿಲ್ಲೆ ಕಳಸ ತಾಲ್ಲೂಕಿನ ಕೆ. ತಲಗೂರು ಗ್ರಾಮದ ಕಾಫಿ ಎಸ್ಟೇಟ್ ಮಾಲೀಕ ತಿಮೋತಿ ಮಿಸ್ಕಿತ್ ಅವರ ತೋಟದ ಮನೆಯಲ್ಲಿ ಸಾಕಿದ್ದ ಚುಕ್ಕಿ ಜಿಂಕೆ ಮರಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ.  ತಿಮೋತಿ ಮಿಸ್ಕಿತ್ ಅವರ ಮನೆಯಲ್ಲಿ ಜಿಂಕೆಯ ಉಗುರು ಸೇರಿದಂತೆ ಅಲಂಕಾರಿಕ ವಸ್ತುಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ. ಅವರ ಮೇಲೆ ವನ್ಯಜೀವಿ ಸಂರಕ್ಷಣಾ ಕಾಯ್ದೆಯನ್ವಯ ಪ್ರಕರಣ ದಾಖಲಿಸಲಾಗಿದೆ. 

ನಿರೀಕ್ಷಕಿ ಸುನಿತಾ ಅವರ ನೇತೃತ್ವದ ತಂಡ ಖಚಿತ ಮಾಹಿತಿಯನ್ನಾಧರಿಸಿ ದಾಳಿ ನಡೆಸಿದ್ದಾರೆ. ಜಿಂಕೆ ಮರಿಯನ್ನು ವಶಪಡಿಸಿಕೊಂಡಿದ್ದಾರೆ. ತೋಟದಲ್ಲಿ ಸಿಕ್ಕಿದ್ದ ಜಿಂಕೆ ಮರಿಯನ್ನು ಸಾಕಲು ಹೋಗಿ ಈಗ ತೋಟದ ಮಾಲೀಕರು ಪೇಚಿಗೆ ಸಿಲುಕಿದ್ದಾರೆ.

ಉಗುರು ಮಾರಾಟ ಆರೋಪಿ ಬಂಧನ :

ಕಾಡುಬೆಕ್ಕಿನ ಉಗುರು ಮಾರಾಟ ಮಾಡುತ್ತಿದ್ದ ಅರೋಪಿಯನ್ನ ಅರಣ್ಯ ಸಂಚಾರಿ ದಳ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ನಗರದ ಬೋಳಾರಾಮೇಶ್ವರ ದೇವಾಲಯ ಸಮೀಪ ಅಕ್ರಮವಾಗಿ ಕಾಡು ಬೆಂಕಿನ ಪಂಜಾ ಮತ್ತು ಹಲ್ಲು, ಉಗುರುಗಳನ್ನ ಮಾರಾಟ ಮಾಡುತ್ತಿದ್ದ ಮಾಹಿತಿ ಆಧರಿಸಿ ಅರಣ್ಯ ಸಂಚಾರಿ ದಳ‌ದ ಪೊಲೀಸರು ದಾಳಿ ಮಾಡಿ ಆರೋಪಿಯನ್ನ ಬಂಧಿಸಿದ್ದಾರೆ. ಈ ಸಂಬಂಧ ಅರಣ್ಯ ಸಂಚಾರಿ ದಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾನವ, ವನ್ಯಜೀವಿ ಸಂಘರ್ಷ ತಡೆಗೆ ಕ್ರಮ ಅಗತ್ಯ: ರಿಷಬ್‌ ಶೆಟ್ಟಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ
ಮಧುಗಿರಿ: ಕದ್ದ ಎಟಿಎಂ ಭಾರ ಇದೆ ಎಂದು ರಸ್ತೆಯಲ್ಲೇ ಬಿಟ್ಟು ಹೋದರು