ಯಾದಗಿರಿ: ಮಿನರಲ್ ವಾಟರ್ ಬಾಟೆಲ್‌ನಲ್ಲಿ ಸತ್ತ ಜಿರಳೆ ಪತ್ತೆ!

Published : May 26, 2024, 10:11 AM IST
ಯಾದಗಿರಿ: ಮಿನರಲ್ ವಾಟರ್ ಬಾಟೆಲ್‌ನಲ್ಲಿ ಸತ್ತ ಜಿರಳೆ ಪತ್ತೆ!

ಸಾರಾಂಶ

ಬಾಯಾರಿಕೆಗೆ ನೀರು ಕುಡಿಯಲು ಮಿನರಲ್ ವಾಟರ್ ಬಾಟಲ್‌  ಖರೀದಿಸಿ ಗ್ರಾಹಕ ಬಾಟಲಿಯಲ್ಲಿ ಜಿರಳೆ ಕಂಡು ಹೌಹಾರಿದ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ಪಟ್ಟಣದಲ್ಲಿರುವ ಶಾಂತು ಹೋಟೆಲ್‌ನಲ್ಲಿ ನಡೆದಿದೆ.

ಯಾದಗಿರಿ (ಮೇ.26): ಬಾಯಾರಿಕೆಗೆ ನೀರು ಕುಡಿಯಲು ಮಿನರಲ್ ವಾಟರ್ ಬಾಟಲ್‌  ಖರೀದಿಸಿ ಗ್ರಾಹಕ ಬಾಟಲಿಯಲ್ಲಿ ಜಿರಳೆ ಕಂಡು ಹೌಹಾರಿದ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ಪಟ್ಟಣದಲ್ಲಿರುವ ಶಾಂತು ಹೋಟೆಲ್‌ನಲ್ಲಿ ನಡೆದಿದೆ.

ಹೌದು, ಇಷ್ಟು ದಿನ ಕೂಲ್‌ಡ್ರಿಂಕ್ಸ್ ಪೌಚ್‌, ಫುಡ್ ಆರ್ಡರ್‌ನಲ್ಲಿ ಜಿರಳೆ ಪತ್ತೆಯಾಗಿರುವ ಸುದ್ದಿ ಕೇಳಿದ್ದೇವು. ಅದರಲ್ಲಿ ಪ್ಯಾಕ್ ಮಾಡಿರೋದ್ರಿಂದ ಓಪನ್ ಮಾಡುವವರೆಗೆ ಕಾಣಿಸುತ್ತಿರಲಿಲ್ಲ. ಆದರೆ ಮಿನರಲ್ ವಾಟರ್ ಬಾಟಲಿಯಲ್ಲಿ ಜಿರಳೆ ಕಂಡು ಗ್ರಾಹ ಬೆಚ್ಚಿಬಿದ್ದಿದ್ದಾನೆ. 

 

ಕುಡಿದ ಮತ್ತಿನಲ್ಲಿ ತಲೆಮೇಲೆ ಕಲ್ಲು ಎತ್ತಿಹಾಕಿ ಕುಡುಕ ಪರಾರಿ, ವ್ಯ ಗಂಭೀರ ಗಾಯಗೊಂಡ ವ್ಯಕ್ತಿ ಸಾವು!

ಶಾಂತು ಹೆಸರಿನ ಹೋಟೆಲ್‌ಗೆ ಹೋಗಿದ್ದ ಗ್ರಾಹಕ. ಬಾಯಾರಿಕೆ ತಣಿಸಲು SPLASH ಕಂಪನಿಯ ವಾಟರ್ 2ಲೀ. ಬಾಟಲಿ ಖರೀದಿಸಿದ್ದಾನೆ. ಇನ್ನೇನು ಬಾಟಲಿ ಎತ್ತಿ ಗಟಗಟ ಕುಡಿಯಬೇಕು ಎನ್ನುವಷ್ಟರಲ್ಲಿ ಬಾಟಲಿಯಲ್ಲಿ ಜಿರಳೆ ಸತ್ತು ಬಿದ್ದಿರುವುದು ಕಂಡಿದ್ದಾನೆ. ಇದೇ ಮೊದಲ ಬಾರಿ ವಾಟರ್ ಬಾಟಲಿಯಲ್ಲಿ ಜಿರಳೆ ಪತ್ತೆಯಾಗಿರುವುದು ಕಂಡು ಹೋಟೆಲ್‌ಗೆ ಬಂದಿದ್ದ ಗ್ರಾಹಕರು ಸಹ ಬೆಚ್ಚಿಬಿದ್ದಿದ್ದು, ಈಗಾಗಲೇ ಆ ಕಂಪನಿಯ ಬಾಟಲಿ ಖರೀದಿಸಿ ನೀರು ಕುಡಿದವರು ಕಣ್ಣುಕಣ್ಣು ಬಿಡುವಂತಾಯ್ತು.

 

ಅರಣ್ಯಪ್ರದೇಶಕ್ಕೆ ಬೆಂಕಿ ಇಟ್ಟ ಕಿಡಿಗೇಡಿಗಳು ಮೂರು ಸಾವಿರಕ್ಕೂ ಅಧಿಕ ಮರಗಳು ಸುಟ್ಟು ಭಸ್ಮ!

ಆಹಾರ ಸುರಕ್ಷತಾ ಅಧಿಕಾರಿಗಳ ಗಮನಕ್ಕೆ ತಂದ ಗ್ರಾಹಕ. ಗ್ರಾಹಕರ ದೂರಿನ ಮೇರೆಗೆ ಕೂಡಲೇ ಸ್ಥಳಕ್ಕೆ ಬಂದ ಆಹಾರ ಸುರಕ್ಷತಾ ಅಧಿಕಾರಿಗಳ ತಂಡ ಹೋಟೆಲ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಬಳಿಕ ಎರಡು ಲೀ.  ಕಂಪನಿಯ ಬಾಟಲಿಗಳನ್ನು ವಶಕ್ಕೆ ಪಡೆದುಕೊಂಡರು. ಶ್ರೇಯಸ್ ಟ್ರೇಡರ್ಸ್ ಕಂಪನಿ SPLASH ಕಂಪನಿಯ ನೀರಿನ ವಾಟರ್ ಬಾಟಲಿಯನ್ನು ಡಿಸ್ಟ್ರಿಬ್ಯೂಟರ್ ಮಾಡುತ್ತಿದೆ. ಯಾದಗಿರಿ ಜಿಲ್ಲೆಯಾದ್ಯಂತ ಸ್ಪಾಶ್ ಹೆಸರಿನ ಬಾಟಲಿಗಳು ಮಾರಾಟವಾಗುತ್ತಿವೆ. ಹೀಗಾಗಿ ಶ್ರೇಯಸ್ ಟ್ರೇಡರ್ಸ್ ಕಂಪನಿಯ ಗೋಡೌನ್ ಗೆ ಆಹಾರ ಸುರಕ್ಷತಾ ಅಧಿಕಾರಿಗಳ ಭೇಟಿ ನೀಡಿ ಅಲ್ಲಿಯೂ ನೀರಿನ ಬಾಟಲಿ ಪರಿಶೀಲನೆ ನಡೆಸಿತು.

ಸದ್ಯ ಗ್ರಾಹಕನ ದೂರಿನ ಮೇರೆಗೆ ಮಹಾರಾಷ್ಟ್ರದ ಸೊಲ್ಲಾಪುರ ಮೂಲದ SPLASH ಡಿಸ್ಟ್ರಿಬ್ಯೂಟರ್ ಸಂಗನಗೌಡ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರು ವಿಜಯ್ ಗುರೂಜಿ ಗ್ಯಾಂಗ್ ಸಮೇತ ಅರೆಸ್ಟ್; ಟೆಕ್ಕಿಗೆ ಲೈಂಗಿಕ ಶಕ್ತಿ ಹೆಚ್ಚಿಸೋದಾಗಿ ₹40 ಲಕ್ಷ ವಂಚನೆ!
ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಶಿಕ್ಷಕನಿಗೆ ಪೋಷಕರಿಂದ ಧರ್ಮದೇಟು!