Bengaluru: ಇದೆ ವಿಷಯಕ್ಕೆ ವರ್ತಕರ ಜೋಡಿ ಕೊಲೆ ಆಗಿದ್ದು: ಪೊಲೀಸರ ತನಿಖೆಯಲ್ಲಿ ಪತ್ತೆಯಾಗಿದ್ದೇನು?

Published : Feb 09, 2024, 09:47 AM IST
Bengaluru: ಇದೆ ವಿಷಯಕ್ಕೆ ವರ್ತಕರ ಜೋಡಿ ಕೊಲೆ ಆಗಿದ್ದು: ಪೊಲೀಸರ ತನಿಖೆಯಲ್ಲಿ ಪತ್ತೆಯಾಗಿದ್ದೇನು?

ಸಾರಾಂಶ

ಕುಂಬಾರಪೇಟೆಯಲ್ಲಿ ಬುಧವಾರ ರಾತ್ರಿ ನಡೆದಿದ್ದ ಇಬ್ಬರು ವರ್ತಕರ ಜೋಡಿ ಕೊಲೆಗೆ ಕೌಟುಂಬಿಕ ಕಲಹ ಹಾಗೂ ₹70 ಲಕ್ಷ ಮೌಲ್ಯದ ಕಟ್ಟಡ ವಿವಾದ ಕಾರಣವಾಗಿವೆ ಎಂಬ ಸಂಗತಿ ಹಲಸೂರು ಗೇಟ್ ಪೊಲೀಸರ ತನಿಖೆಯಲ್ಲಿ ಪತ್ತೆಯಾಗಿದೆ. 

ಬೆಂಗಳೂರು (ಫೆ.09): ಕುಂಬಾರಪೇಟೆಯಲ್ಲಿ ಬುಧವಾರ ರಾತ್ರಿ ನಡೆದಿದ್ದ ಇಬ್ಬರು ವರ್ತಕರ ಜೋಡಿ ಕೊಲೆಗೆ ಕೌಟುಂಬಿಕ ಕಲಹ ಹಾಗೂ ₹70 ಲಕ್ಷ ಮೌಲ್ಯದ ಕಟ್ಟಡ ವಿವಾದ ಕಾರಣವಾಗಿವೆ ಎಂಬ ಸಂಗತಿ ಹಲಸೂರು ಗೇಟ್ ಪೊಲೀಸರ ತನಿಖೆಯಲ್ಲಿ ಪತ್ತೆಯಾಗಿದೆ. ಇನ್ನು ದ್ವೇಷದ ಹಿನ್ನೆಲೆಯಲ್ಲಿ ಸುರೇಶ್‌ ಹತ್ಯೆಗೆ ಬಂದಿದ್ದ ಆರೋಪಿ ಭದ್ರಿ ಪ್ರಸಾದ್‌ ಕೈಗೆ ಅಚಾನಕ್ಕಾಗಿ ಸಿಕ್ಕಿ ಮಹೇಂದ್ರ ಸಹ ಬಲಿಯಾಗಿದ್ದಾರೆ. ಅಲ್ಲದೆ ಈ ಅವಳಿ ಕೊಲೆಗೆ ಕುಂಬಾರ ಸಂಘದ ಒಳ ರಾಜಕಾರಣವು ಸಹ ಪ್ರಚೋದಿಸಿದೆ ಎನ್ನಲಾಗಿದೆ. ಕುಂಬಾರಪೇಟೆಯ ‘ಹರಿ ಮಾರ್ಕೆಟಿಂಗ್’ ಕಚೇರಿಯಲ್ಲಿ ತನ್ನ ಸೋದರ ಸಂಬಂಧಿ ಸುರೇಶ್ ಹಾಗೂ ಆತನ ಸ್ನೇಹಿತ ಮಹೇಂದ್ರ ಮೇಲೆ ಚಾಕುವಿನಿಂದ ದಾಳಿ ನಡೆಸಿ ರಾತ್ರಿ ಭೀಕರವಾಗಿ ಎಲೆಕ್ಟ್ರಿಕಲ್ ವ್ಯಾಪಾರಿ ಭದ್ರಿ ಕೊಲೆ ಮಾಡಿದ್ದ.

ಕೌಟುಂಬಿಕ ಕಲಹ-₹70 ಲಕ್ಷ ಗಲಾಟೆ: ಕುಂಬಾರಪೇಟೆಯಲ್ಲಿ ಕುಂಬಾರ ಸೇವಾ ಸದನಕ್ಕೆ ಸೇರಿದ ಕಟ್ಟಡದಲ್ಲಿ ‘ಭದ್ರಿ ಎಲೆಕ್ಟ್ರಿಕಲ್ಸ್’ ಹೆಸರಿನ ಮಳಿಗೆಯನ್ನು ಆರೋಪಿ ಭದ್ರಿ ಪ್ರಸಾದ್ ನಡೆಸುತ್ತಿದ್ದು, ಕೋರಮಂಗಲ ಸಮೀಪ ತನ್ನ ಕುಟುಂಬದ ಜತೆ ಆತ ನೆಲೆಸಿದ್ದ. ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಒಂದು ಮಹಡಿಯನ್ನು ₹70 ಲಕ್ಷಕ್ಕೆ ಆತನಿಗೆ ಕುಂಬಾರ ಸಂಘವು ನೀಡಿತ್ತು. ಇನ್ನು ಕುಂಬಾರ ಸಂಘದ ಚಟುವಟಿಕೆಯಲ್ಲಿ ಸಹ ಭದ್ರಿ ಪ್ರಸಾದ್ ಗುರುತಿಸಿಕೊಂಡಿದ್ದು, ಇದೇ ಸಂಘದ ಪದಾಧಿಕಾರಿಯಾಗಿದ್ದ ಸುರೇಶ್ ಜತೆ ಸಂಘದ ಆತಂರಿಕ ವಿಚಾರವಾಗಿ ಆತನಿಗೆ ವೈಮನಸ್ಸು ಮೂಡಿತ್ತು ಎಂದು ಪೊಲೀಸರು ಹೇಳಿದ್ದಾರೆ.

ರಾಪಿಡೋ ಬುಕ್‌ ಮಾಡಿ ಚಾಲಕನಿಗೆ 4 ಸಾವಿರ ವಂಚನೆ: ಸೈಬರ್ ವಂಚಕರ ಹೊಸ ತಂತ್ರವೇನು?

ಇನ್ನು ತನ್ನ ಕೌಟುಂಬಿಕ ಕಲಹದಲ್ಲಿ ಸುರೇಶ್ ಪ್ರವೇಶಿಸಿದ್ದು ಭದ್ರಿಗೆ ಸಿಟ್ಟು ತರಿಸಿತು. ಕೊನೆಗೆ ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ ಭದ್ರಿಯಿಂದ ಆತನ ಪತ್ನಿ ಹಾಗೂ ಮಕ್ಕಳು ಪ್ರತ್ಯೇಕವಾಗಿದ್ದರು. ಈ ಬೆಳವಣಿಗೆ ಹಿಂದೆ ಸುರೇಶ್ ಕುಮ್ಮಕ್ಕು ಇದೆ ಎಂದು ಭಾವಿಸಿ ಆರೋಪಿ ಕೋಪಗೊಂಡಿದ್ದ. ಹೀಗಿರುವಾಗ ಕುಂಬಾರಪೇಟೆಯಲ್ಲಿ ಭದ್ರಿ ನೀಡಲಾಗಿದ್ದ ಕಟ್ಟಡದ ಮಳಿಗೆಯನ್ನು ಆತನ ವಿಚ್ಛೇದಿತ ಪತ್ನಿಗೆ ಕುಂಬಾರ ಸಂಘವು ಮರು ಹಂಚಿಕೆ ಮಾಡಿತ್ತು. ಆನಂತರ ಆ ಮಳಿಗೆಯನ್ನು ಬೇರೊಬ್ಬರಿಗೆ ₹30 ಲಕ್ಷಕ್ಕೆ ಸುರೇಶ್ ಮಾರಾಟ ಮಾಡಿಸಿದ್ದ.

ಇದರಿಂದ ನನಗೆ ಹಾಗೂ ನನ್ನ ಪತ್ನಿ ಮತ್ತು ಮಕ್ಕಳಿಗೆ ಸುರೇಶ್ ಸುಮಾರು ₹40 ಲಕ್ಷ ಮೋಸ ಮಾಡಿದ್ದಾನೆ ಎಂದು ಭದ್ರಿ ಆರೋಪಿಸಿದ್ದ. ಈ ಹಿನ್ನೆಲೆಯಲ್ಲಿ ಕೋಪಗೊಂಡ ಆತ, ಕೊನೆಗೆ ಸುರೇಶ್ ಕೊಲೆಗೆ ನಿರ್ಧಸಿದ್ದ. ಅಂತೆಯೇ ಬುಧವಾರ ರಾತ್ರಿ ಹರಿ ಮಾರ್ಕೆಂಟ್‌ ಕಚೇರಿಯಲ್ಲಿ ಸುರೇಶ್ ಇರುವ ಬಗ್ಗೆ ಖಚಿತ ಮಾಹಿತಿ ಪಡೆದು ಭದ್ರಿ ನುಗ್ಗಿದ್ದಾನೆ. ಆ ವೇಳೆ ಅಲ್ಲೇ ಇದ್ದ ಮಹೇಂದ್ರ ಜತೆ ಸಹ ಆರೋಪಿಗೆ ಜಗಳವಾಗಿದೆ. ಬಳಿಕ ಇಬ್ಬರಿಗೂ ಚಾಕುವಿನಿಂದ ಇರಿದು ಭದ್ರಿ ಭೀಕರವಾಗಿ ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ದಿವಾಳಿ, ಭ್ರಷ್ಟಾಚಾರ, ಟಿಪ್ಪು ಜಯಂತಿ ಕರ್ನಾಟಕಕ್ಕೆ ಸಿದ್ದು ಕೊಟ್ಟ ಉಡುಗೊರೆ: ತೇಜಸ್ವಿ ಸೂರ್ಯ

ಮೂಕ ಪ್ರೇಕ್ಷಕರಾದ ಜನರು: ಅವಳಿ ಹತ್ಯೆ ಕೃತ್ಯದ ಆರೋಪಿ ಕೈಯಲ್ಲಿ ಚಾಕು ಹಿಡಿದು ಅಬ್ಬರಿಸುವಾಗ ಸ್ಥಳೀಯ ಜನರು ಮೂಕ ಪ್ರೇಕ್ಷಕರಾಗಿದ್ದರು. ‘ನನ್ನ ಸಂಸಾರ ಹಾಳು ಮಾಡಿದ. ನನ್ನ ಹೆಂಡ್ತಿ ಮಕ್ಕಳನ್ನು ಬೀದಿಗೆ ತಳ್ಳಿದ್ರು’ ಎಂದು ಆಕ್ರೋಶ ವ್ಯಕ್ತಪಡಿಸಿ ಮಹೇಂದ್ರ ಅವರಿಗೆ ಚಾಕುವಿನಿಂದ ಇರಿದು ಭದ್ರಿ ಕೂಗಾಡುವ ವಿಡಿಯೋ ವೈರಲ್ ಆಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕಬಡ್ಡಿ ಟೂರ್ನಿ ವೇಳೆಯಲ್ಲೇ ಪ್ಲೇಯರ್‌ ರಾಣಾ ಬಲ್ಚೌರಿಯಾ ಕೊ*ಲೆ!
ಪೊಲೀಸ್‌ ಚೆಕಿಂಗ್‌ ವೇಳೆ ಹೋಟೆಲ್‌ ಬಾಲ್ಕನಿಯಿಂದ ಹಾರಿದ ಬೆಂಗಳೂರು ಮಹಿಳೆ, ಸ್ಥಿತಿ ಗಂಭೀರ!