
ಗದಗ (ಜು.15): ಹೆಂಡತಿಗೆ ಚುಡಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ದುರುಳ ನಡುರಸ್ತೆಯಲ್ಲೇ ಗಂಡನ ಮೇಲೆಯೇ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಾರೋಗೇರಿಯಲ್ಲಿ ನಡೆದಿದೆ.
ದೇವರಾಜ, ಭಾಗವ್ವ, ಚಂದ್ರವ್ವ, ಹಾಗೂ ದಾನಪ್ಪ ಹಲ್ಲೆಗೊಳಗಾದವರು, ಬಸವರಾಜ, ರವಿ, ಕೋಟೆಪ್ಪ ಹಾಗೂ ಮುತ್ತಪ್ಪ ಅನ್ನೋರಿಂದ ಹಲ್ಲೆ ನಡೆಸಿದ ದುರುಳರು.
ದೇವರಾಜ ಪತ್ನಿಗೆ ಚುಡಾಯಿಸಿದ್ದ ಕೊಟ್ರೆಪ್ಪ. ಹೆಂಡತಿಗೆ ಚುಡಾಯಿಸಿದ್ದಕ್ಕೆ ಪ್ರಶ್ನಿಸಿದ್ದ ಗಂಡ ದೇವರಾಜ್. ಪ್ರಶ್ನೆ ಮಾಡಿದ್ದ. ಮಾಡಿದ ತಪ್ಪಿಗೆ ತೆಪ್ಪಗೆ ಇರುವ ಬದಲು ಮಾರಕಾಸ್ತ್ರಗಳನ್ನ ಹಿಡಿದು ನಡುರಸ್ತೆಯಲ್ಲೇ ದೇವರಾಜ ಕುಟುಂಬಸ್ಥರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ದುರುಳ ಕೊಟ್ರೆಪ್ಪ
ಬಳ್ಳಾರಿ: ಕಾಂಗ್ರೆಸ್ ಪಾಲಿಕೆ ಸದಸ್ಯನಿಗೆ ಹಿಗ್ಗಾಮುಗ್ಗಾ ಥಳಿತ, ಕಾರಣ?
ಕುಟುಂಬದ ಆರು ಜನರು. ಏಕಾಏಕಿ ನಡೆದ ದಾಳಿಗೆ ತೀವ್ರ ಗಾಯಗೊಂಡು ರಸ್ತೆ ಮೇಲೆ ಬಿದ್ದು ಹೊರಳಾಡಿದ ದಲಿತ ಕುಟುಂಬ. ತೀವ್ರ ಗಾಯಗೊಂಡ ದಲಿತ ಕುಟುಂಬ. ಸದ್ಯ ಗಾಯಾಳುಗಳನ್ನ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಕರಣ ಸಂಬಂಧ ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ