
ಬೆಂಗಳೂರು (ಏ.14): ಮಗು ಮಾಡಿಕೊಳ್ಳುವ ವಿಚಾರಕ್ಕೆ ಗಂಡ-ಹೆಂಡತಿ ನಡುವೆ ಜಗಳವಾಗಿ ಕೊಲೆಯಲ್ಲಿ ಅಂತ್ಯವಾದ ದುರ್ಘಟನೆ ನಗರದ ಎಚ್ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯ ಅನ್ನಸಂದ್ರದಲ್ಲಿ ನಡೆದಿದೆ.
ಗಿರಿಜಾ ಕೊಲೆಯಾದ ಪತ್ನಿ, ನವೀನ್ ಕೊಲೆ ಮಾಡಿದ ಆರೋಪಿ ಪತಿ. ಭಟ್ಕಳ ಮೂಲದವರಾದ ಗಿರಿಜಾ, ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದ ನವೀನ್ ಎಂಬುವವನೊಂದಿಗೆ ಕಳೆದ ಎಂಟು ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದರು. ಮದುವೆ ಬಳಿಕ ಗಂಡ-ಹೆಂಡತಿ ಇಬ್ಬರೂ ಬೆಂಗಳೂರಲ್ಲಿ ನೆಲೆಸಿದ್ದರು.
ಮದುವೆಯಾದ ಪತ್ನಿಯನ್ನೇ ಕಾಲ್ ಗರ್ಲ್ ಮಾಡಿದ ಗಂಡ; ಫೇಸ್ಬುಕ್ನಲ್ಲಿ ಹೆಂಡತಿ ಫೊಟೋ ಹಂಚಿಕೊಂಡ ಕಿತಾಪತಿ
ಮದುವೆ ಬಳಿಕ ಗಿರಿಜಾಗೆ ಗರ್ಭಪಾತ ಆಗಿತ್ತು. ಗರ್ಭಪಾತ ಆಗಿದ್ದರಿಂದ ಸದ್ಯಕ್ಕೆ ಮಗು ಬೇಡ ಎಂದಿದ್ದ ಗಿರಿಜಾ. ಆದರೆ ಮಗು ಬೇಕು ಅಂತಾ ಹಟಕ್ಕೆ ಬಿದ್ದಿದ್ದ ಗಂಡ ನವೀನ್. ಇದೇ ವಿಚಾರಕ್ಕೆ ಇಬ್ಬರ ನಡುವೆ ದಿನನಿತ್ಯ ಜಗಳ ನಡೆಯುತ್ತಿತ್ತು.
ಏ.12 ರಂದು ಮತ್ತೆ ಮಗು ಬೇಕು ನವೀನ್, ಬೇಡ ಸದ್ಯಕ್ಕೆ ಬೇಡ ಅಂತಾ ಗಿರಿಜಾ ಜಗಳಮಾಡಿಕೊಂಡಿದ್ದಾರೆ. ಅಂದು ರಾತ್ರಿ ಕುಪಿತಗೊಂಡಿದ್ದ ಆರೋಪಿ ನವೀನ್ ಪತ್ನಿಯನ್ನ ಮುಗಿಸಲು ನಿರ್ಧರಿಸಿಬಿಟ್ಟಿದ್ದಾನೆ. ಪತ್ನಿ ಮಲಗಿರುವ ಸಮಯ ನೋಡಿ ಉಸಿರುಗಟ್ಟಿಸಿ ಕೊಲೆ ಮಾಡಿಯೇ ಬಿಟ್ಟಿದ್ದಾನೆ ಪಾಪಿ ಗಂಡ. ಪತಿಯನ್ನ ನಂಬಿ ಬಂದ ಗಿರಿಜಾ ನಿದ್ದೆಯಲ್ಲಿದ್ದಾಗಲೇ ಚಿರನಿದ್ರೆಗೆ ಜಾರಿದ್ದಾಳೆ. ಸದ್ಯ ಆರೋಪಿ ನವೀನ್ ಬಂಧಿಸಿದ ಪೊಲೀಸರು. ಕೊಲೆ ಘಟನೆ ಸಂಬಂಧ ಎಚ್ಎಎಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ