
ಮೈಸೂರು (ಜು.5): ರಸ್ತೆ ಡಿವೈಡರ್ಗೆ ಡಿಕ್ಕಿಯಾಗಿ ತರಕಾರಿ ತುಂಬಿದ್ದ ಲಾರಿ ಪಲ್ಟಿಯಾದ ಘಟನೆ ನಂಜನಗೂಡಿ ಗೋಳೂರು ಗ್ರಾಮದ ಬಳಿ ಘಟನೆ ನಡೆದಿದ್ದು, ಸ್ವಲ್ಪದರಲ್ಲೇ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮೈಸೂರಿನಿಂದ ಚಾಮರಾಜನಗರ ಕಡೆಗೆ ತರಕಾರಿ ತುಂಬಿಕೊಂಡು ಸಾಗುತ್ತಿದ್ದ ಲಾರಿ. ಗೋಳೂರು ಗ್ರಾಮ ಸಮೀಪಿಸುತ್ತಿದ್ದಂತೆ ತಿರುವು ಪಡೆದುಕೊಳ್ಳುವಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ಗೆ ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಸಂಪೂರ್ಣ ಜಖಂಗೊಂಡಿರುವ ಲಾರಿ ಪಲ್ಟಿಯೊಡೆದಿದೆ. ಪಲ್ಟಿ ಹೊಡೆಯುತ್ತಿದ್ದಂತೆ ಲೋಡ್ ಮಾಡಲಾಗಿದ್ದ ಅಷ್ಟೂ ತರಕಾರಿಗಳು ರಸ್ತೆಗೆ ಬಿದ್ದಿವೆ.
ಮನೆ ಮೇಲೆ ಗುಡ್ಡದ ಮಣ್ಣು ಕುಸಿದು ಕೂಲಿ ಕಾರ್ಮಿಕ ಮಹಿಳೆ ದುರ್ಮರಣ!
ಲಕ್ಷಾಂತರ ರೂಪಾಯಿ ಮೌಲ್ಯದ ತರಕಾರಿ ಮಣ್ಣಪಾಲು ಆಗಿದೆ. ಈ ವೇಳೆ ಲಾರಿ ಮುಗುಚಿಬಿಳುತ್ತಿದ್ದಂತೆ ಸ್ಥಳೀಯರು ವಾಹನ ಸವಾರರು ತರಕಾರಿಗೆ ಮುಗಿಬಿದ್ದ ಘಟನೆ ನಡೆಯಿತು. ಸುತ್ತಮುತ್ತಲಿದ್ದ ಜನರು ಓಡಿಬಂದು ರಸ್ತೆಗೆ ಬಿದ್ದಿದ್ದ ತರಕಾರಿ ಚೀಲದಲ್ಲಿ ತುಂಬಿಕೊಂಡ ಹೊತ್ತೊಯ್ದ ಸ್ಥಳೀಯರು.
ಸ್ಥಳಕ್ಕೆ ನಂಜನಗೂಡು ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ