
ದಕ್ಷಿಣ ಕನ್ನಡ (ಮಾ.30): ಅಕ್ರಮ ದನ ಸಾಗಾಟದ ವಾಹನ ಡಿಕ್ಕಿಯಾಗಿ ವ್ಯಕ್ತಿಯೋರ್ವ ದುರ್ಮರಣಕ್ಕೀಡಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಮರ್ಧಾಳ ಎಂಬಲ್ಲಿ ನಡೆದಿದೆ.
ಮರ್ಧಾಳ ನೆಕ್ಕಿತ್ತಡ್ಕ ಸಮೀಪದ ಅಚ್ಚಿಲ ಪಟ್ಟೆ ನಿವಾಸಿ ವಿಠಲ ರೈ ಸಾವು. ವಿಠಲ ರೈ ತನ್ನ ಕಾರನ್ನು ಮರ್ಧಾಳದಲ್ಲಿ ನಿಲ್ಲಿಸಿ ರಸ್ತೆ ದಾಟುತ್ತಿದ್ದ ವೇಳೆ ಸುಬ್ರಹ್ಮಣ್ಯ ಕಡೆಯಿಂದ ಕಡಬ ಕಡೆಗೆ ತೆರಳುತ್ತಿದ್ದ ಮಾರುತಿ 800 ಕಾರು ವಿಠಲ ರೈಗೆ ಡಿಕ್ಕಿ ಹೊಡೆದು ಎಸ್ಕೇಪ್ ಆಗಿದೆ. ಡಿಕ್ಕಿ ಹೊಡೆದ ಬಳಿಕ ಕಾರನ್ನು ನಿಲ್ಲಿಸದೆ ಚಾಲಕ ಹೋಗಿದ್ದಾನೆ. ಕಾರನ್ನು ಮರ್ಧಾಳ ಸಮೀಪದ ನೆಕ್ಕಿತ್ತಡ್ಕ ಎಂಬಲ್ಲಿನ ದಿ.ರಶೀದ್ ಎಂಬವರ ಮನೆಯ ಮುಂಭಾಗದಲ್ಲಿ ನಿಲ್ಲಿಸಿ ಪರಾರಿಯಾಗಿರುವ ಆರೋಪಿ. ದನವನ್ನು ಪಕ್ಕದ ತೋಟದಲ್ಲಿ ಕಟ್ಟಿ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ..
ಜರ್ಸಿ ತಳಿ ಉತ್ಪಾದನಾ ಘಟಕದ ಹುಲ್ಲುಗಾವಲಿಗೆ ಬೆಂಕಿ; ಹತ್ತಾರು ಎಕರೆ ಹಸಿ ಹುಲ್ಲು ಸುಟ್ಟು ಭಸ್ಮ!
ಅಕ್ರಮ ದನ ಸಾಗಾಟದ ಕಾರೊಂದು ಡಿಕ್ಕಿ ಹೊಡೆದು ವ್ಯಕ್ತಿ ಮೃತಪಟ್ಟ ಹಿನ್ನೆಲೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆ ಖಂಡಿಸಿ ಕಡಬ ಆಸ್ಪತ್ರೆಯ ಬಳಿ ಸ್ಥಳೀಯರ ಪ್ರತಿಭಟನೆ ನಡೆಸಿದರು. ತಕ್ಷಣ ದ.ಕ ಜಿಲ್ಲಾ ಎಸ್ಪಿ ಸ್ಥಳಕ್ಕೆ ಬರಬೇಕು ಅಂತ ಪ್ರತಿಭಟನಾಕಾರರ ಪಟ್ಟು ಹಿಡಿದರು. ಕಡಬ ಸರಕಾರಿ ಆಸ್ಪತ್ರೆಯ ಬಳಿ ಹಿಂದೂ ಸಂಘಟನೆಗಳಿಂದಲೂ ಪ್ರತಿಭಟನೆ ನಡೆದಿದೆ. ಸದ್ಯ ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ