ಪೊಲೀಸ್‌ ಜೀಪನ್ನೇ ಓಡಿಸಿಕೊಂಡು ಹೋಗಿ ದುಷ್ಕರ್ಮಿಗಳಿಂದ ಬಚಾವಾದ!

Kannadaprabha News, Ravi Janekal |   | Kannada Prabha
Published : Sep 13, 2025, 07:09 AM IST
kalaburagi shocking incident

ಸಾರಾಂಶ

ಶಹಾಬಾದ್‌ನಲ್ಲಿ ಗುಂಡಿನ ದಾಳಿಯಿಂದ ತಪ್ಪಿಸಿಕೊಳ್ಳಲು ಯುವಕನೊಬ್ಬ ಪೊಲೀಸ್ ಜೀಪ್ ಕದ್ದು ಪರಾರಿಯಾಗಿದ್ದಾನೆ. ಈ ಘಟನೆ ಭಂಕೂರಿನ ಐನಾಪೂರ ಬಳಿ ನಡೆದಿದ್ದು, ಕೊಲೆ ಪ್ರಕರಣದ ದ್ವೇಷಕ್ಕೆ ದಾಳಿ ನಡೆದಿದೆ ಎನ್ನಲಾಗಿದೆ.

ಕಲಬುರಗಿ (ಸೆ.13): ಶಹಾಬಾದ್‌: ಗುಂಡಿನ ದಾಳಿಯಿಂದ ಬಚಾವ್‌ ಆಗಲು ಹೈವೇ ಪೆಟ್ರೋಲಿಂಗ್‌ ಪೊಲೀಸ್ ಜೀಪನ್ನೇ ಓಡಿಸಿಕೊಂಡು ಹೋಗಿ ಯುವಕನೋರ್ವ ಸಿನಿಮೀಯ ಶೈಲಿಯಲ್ಲಿ ಪಾರಾದ ಘಟನೆ ಇಲ್ಲಿನ ಭಂಕೂರಿನ ಐನಾಪೂರ ಬಳಿ ನಡೆದಿದೆ. 

ಶಹಾಬಾದ್‌ ನಿವಾಸಿ ಶಂಕರ ಅಳ್ಳೋಳ್ಳಿ ತನ್ನ ಸಂಬಂಧಿಕರು, ಸ್ನೇಹಿತರೊಂದಿಗೆ ಡಾಬಾದಲ್ಲಿ ರಾತ್ರಿ ಭೋಜನ ಸೇವಿಸುತ್ತಿದ್ದರು. ಏಳೆಂಟು ಜನರ ಗುಂಪು ಡಾಬಾಗೆ ನುಗ್ಗಿ ಗುಂಡಿನ ದಾಳಿ ನಡೆಸಿದೆ. ಆಗ ಡಾಬಾದ ಹಿಂಬದಿಯಿಂದ ಹೈವೇಗೆ ಶಂಕರ ಬಂದಿದ್ದಾರೆ. 

ಇದನ್ನೂ ಓದಿ: ಭಿಕ್ಷೆ ಬೇಡಿ ಆಸ್ಪತ್ರೆ ಬಿಲ್‌ ಕಟ್ಟಿದ್ರೂ ಚಿಕಿತ್ಸೆ ಫಲಿಸದೆ ಮಗು ಸಾವು!

ಅಲ್ಲೇ ಸಮೀಪದಲ್ಲಿದ್ದ ಪೊಲೀಸರು, ಗಲಾಟೆ ಶಬ್ದ ಕೇಳಿ ಜೀಪು ನಿಲ್ಲಿಸಿ ಡಾಬಾಗೆ ಧಾವಿಸಿದ್ದಾರೆ. ಈ ವೇಳೆ ಪೊಲೀಸರ ಜೀಪು ಏರಿದ ಶಂಕರನಿಗೆ ಕೀ ಗಾಡಿಯಲ್ಲೇ ಇರುವುದು ಕಂಡಿದೆ. ಆತ ಜೀವ ಭಯದಲ್ಲಿ ಜೀಪನ್ನು ಓಡಿಸಿಕೊಂಡು ಹೋಗಿ ಪಾರಾಗಿದ್ದಾನೆ. 

ಕೊಲೆ ಪ್ರಕರಣದ ದ್ವೇಷಕ್ಕೆ ಶಂಕರನ ಮೇಲೆ ದಾಳಿ ನಡೆದಿದೆ ಎನ್ನಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕೆಲಸ ಇಲ್ಲದ ಗಂಡನಿಗೆ ಪತ್ನಿ ಶೀಲದ ಮೇಲೆ ಶಂಕೆ: ನಿದ್ರೆಯಲ್ಲಿದ್ದ ಮಗಳ ಕತ್ತು ಸೀಳಿದ ಪತಿ
ಬೆಂಗಳೂರು ಮತ್ತೊಂದು ಲವ್ ಜಿಹಾದ್ ಕೇಸ್; ಇಸ್ಲಾಂಗೆ ಮತಾಂತರ ಆಗದಿದ್ರೆ ಹುಡುಗಿಯನ್ನ 32 ಪೀಸ್ ಮಾಡೋದಾಗಿ ಬೆದರಿಕೆ!