Koppal crime: ಮದುವೆ ಮಾಡಿಸುತ್ತಿಲ್ಲವೆಂದು ಅಣ್ಣನನ್ನೇ ಕೊಂದ ಭೂಪ

Published : Feb 04, 2023, 08:59 AM ISTUpdated : Feb 04, 2023, 09:02 AM IST
Koppal crime: ಮದುವೆ ಮಾಡಿಸುತ್ತಿಲ್ಲವೆಂದು ಅಣ್ಣನನ್ನೇ ಕೊಂದ ಭೂಪ

ಸಾರಾಂಶ

ತನ್ನ ಮದುವೆ ಮಾಡಿಸುತ್ತಿಲ್ಲ ಹಾಗೂ ಆಸ್ತಿ ಹಂಚಿಕೆ ಮಾಡುತ್ತಿಲ್ಲ ಎಂಬ ಕಾರಣಕ್ಕಾಗಿ ತಮ್ಮನೊಬ್ಬ ಸ್ವಂತ ಅಣ್ಣನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ತಾಲೂಕಿನ ಪಟ್ಟಲಚಿಂತಿ ಗ್ರಾಮದಲ್ಲಿ ಗುರುವಾರ ರಾತ್ರಿ ನಡೆದಿದೆ.

ಕುಷ್ಟಗಿ (ಫೆ.4) :ತನ್ನ ಮದುವೆ ಮಾಡಿಸುತ್ತಿಲ್ಲ ಹಾಗೂ ಆಸ್ತಿ ಹಂಚಿಕೆ ಮಾಡುತ್ತಿಲ್ಲ ಎಂಬ ಕಾರಣಕ್ಕಾಗಿ ತಮ್ಮನೊಬ್ಬ ಸ್ವಂತ ಅಣ್ಣನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ತಾಲೂಕಿನ ಪಟ್ಟಲಚಿಂತಿ ಗ್ರಾಮದಲ್ಲಿ ಗುರುವಾರ ರಾತ್ರಿ ನಡೆದಿದೆ.

ಯಮನೂರಪ್ಪ ಕಡಿವಾಲ (37) ಕೊಲೆಗೀಡಾದ ವ್ಯಕ್ತಿ. ಮಲ್ಲಪ್ಪ ಕಡಿವಾಳ ಕೊಲೆ ಮಾಡಿದ ಆರೋಪಿ. ತಾಲೂಕಿನ ಹನುಮಸಾಗರದ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಗಿದ್ದೇನು?:

ಮಲ್ಲಪ್ಪನು ತನಗೆ ಮದುವೆ ಮಾಡಿಸುವಂತೆ ಹಾಗೂ ಪಿತ್ರಾರ್ಜಿತ ಆಸ್ತಿಯಲ್ಲಿ ಪಾಲು ನೀಡುವಂತೆ ಹಿರಿಯ ಸಹೋದರ ಯಮನೂರಪ್ಪನಿಗೆ ದುಂಬಾಲು ಬಿದ್ದಿದ್ದ. ಆದರೆ ಮಲ್ಲಪ್ಪ ಎಲ್ಲರೂ ಸೇರಿ ಮಾತನಾಡಿ ಸಮಸ್ಯೆ ಬಗೆಹರಿಸಿಕೊಳ್ಳೊಣ ಎಂದು ವಿಷಯವನ್ನು ಮುಂದೆ ಹಾಕುತ್ತ ಬಂದಿದ್ದ. ಇದರಿಂದ ಇಬ್ಬರ ಮಧ್ಯೆ ದ್ವೇಷ ಬೆಳೆದಿತ್ತು.

ಯಮನೂರಪ್ಪ ಗುರುವಾರ ರಾತ್ರಿ ಕೆಲಸದಿಂದ ಮನೆಗೆ ಬಂದು ಮನೆಯ ಬಚ್ಚಲಿನಲ್ಲಿ ಮುಖ ತೊಳೆಯುತ್ತಿದ್ದಾಗ ಏಕಾಯೇಕಿ ಆತನ ಮೇಲೆ ದಾಳಿ ಮಾಡಿದ ಮಲ್ಲಪ್ಪ ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಕಾರ್ಯಾಚರಣೆಗೆ ಇಳಿದ ಪೊಲೀಸರು ಆರೋಪಿಯನ್ನು ಹನುಮನಾಳ ಗ್ರಾಮದಲ್ಲಿ ಶುಕ್ರವಾರ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತು ಮೃತ ಯಮನೂರಪ್ಪನ ಪತ್ನಿ ನೀಡಿದ ದೂರಿನ ಅನ್ವಯ ಹನುಮಸಾಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಪೊಲೀಸರು ಆರೋಪಿಯನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಗೆಳೆಯನೊಂದಿಗೆ ಸೇರಿ ಅಪ್ಪನ ಕೊಂದ ಅಮ್ಮನ ವಿರುದ್ಧ ಸಾಕ್ಷಿ ಹೇಳಿದ 6 ವರ್ಷದ ಕಂದ

ಪಟ್ಟಲಚಿಂತಿ ಗ್ರಾಮದಲ್ಲಿ ಮದುವೆ ಹಾಗೂ ಆಸ್ತಿ ಹಂಚಿಕೆ ಮತ್ತು ಇನ್ನಿತರ ವಿಚಾರದಲ್ಲಿ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿದ ಆರೋಪಿಯನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು.

ಅರುಣಾಂಗ್ಷು ಗಿರಿ ಎಸ್ಪಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಾಲಿವುಡ್ ನಿರ್ದೇಶಕ ವಿಕ್ರಂ ಭಟ್, ಪತ್ನಿ ಶ್ವೇತಾಂಬರಿ ಭಟ್ ಬಂಧನ; ಅಂತಿಂಥ ವಂಚನೆ ಕೇಸಲ್ಲ ಇದು ಅಂತೀರಾ?!
ಕೊಪ್ಪಳ: ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ - ಪ್ರಿ-ವೆಡ್ಡಿಂಗ್ ಶೂಟಿಂಗ್ ಮುಗಿಸಿ ವಾಪಸಾಗುವಾಗ ಭೀಕರ ದುರಂತ!