ರಾಯಚೂರು: ಮಳಿಗೆ ತೆರವುಗೊಳಿಸಲು ಬಂದ ನಗರಸಭೆ ಸಿಬ್ಬಂದಿಗೆ ಮಚ್ಚು ತೋರಿಸಿ ಜೀವ ಬೆದರಿಕೆ!

Published : Feb 23, 2024, 12:17 PM IST
ರಾಯಚೂರು: ಮಳಿಗೆ ತೆರವುಗೊಳಿಸಲು ಬಂದ ನಗರಸಭೆ ಸಿಬ್ಬಂದಿಗೆ ಮಚ್ಚು ತೋರಿಸಿ ಜೀವ ಬೆದರಿಕೆ!

ಸಾರಾಂಶ

ನಗರಸಭೆ ಮಳಿಗೆ ಖಾಲಿ ಮಾಡಿಸಲು ಹೋದ ಸಿಬ್ಬಂದಿಗೆ ಮಚ್ಚು ತೋರಿಸಿ ಜೀವ ಬೆದರಿಕೆ ಹಾಕಿದ ಘಟನೆ ರಾಯಚೂರು ನಗರದ ಮಹಿಳಾ ಸಮಾಜದ ಬಳಿ ನಡೆದಿದೆ.

ರಾಯಚೂರು (ಫೆ.23): ನಗರಸಭೆ ಮಳಿಗೆ ಖಾಲಿ ಮಾಡಿಸಲು ಹೋದ ಸಿಬ್ಬಂದಿಗೆ ಮಚ್ಚು ತೋರಿಸಿ ಜೀವ ಬೆದರಿಕೆ ಹಾಕಿದ ಘಟನೆ ರಾಯಚೂರು ನಗರದ ಮಹಿಳಾ ಸಮಾಜದ ಬಳಿ ನಡೆದಿದೆ.

 ಅನಧಿಕೃತವಾಗಿ ಮಳಿಗೆಯಲ್ಲಿ ಇರುವ ವ್ಯಾಪಾರಿಗಳು. ಯಾವುದೇ ತೆರಿಗೆ, ಬಾಡಿಗೆ ಕೊಡದೇ ವ್ಯಾಪಾರ ಮಾಡುತ್ತಿರುವ ವ್ಯಕ್ತಿಗಳು. ಇವರಿಗೆ ಕಳೆದ ಏಪ್ರಿಲ್ ತಿಂಗಳಲ್ಲೇ ಮಳಿಗೆ ಖಾಲಿ ಮಾಡುವಂತೆ ನಗರಸಭೆ ಸಿಬ್ಬಂದಿ ನೋಟಿಸ್ ನೀಡಿದ್ದರು. ನೋಟಿಸ್ ಕೊಟ್ಟರೂ ಕ್ಯಾರೇ ಎನ್ನದೇ ಎಂದಿನಂತ ವ್ಯಾಪಾರ ವಹಿವಾಟು ಮುಂದುವರಿಸಿದ್ದರು. ನೋಟಿಸ್ ಅವಧಿ ಮುಗಿದಿರೋದ್ರಿಂದ ಇಂದು ನಗರಸಭೆ ಸಿಬ್ಬಂದಿ ಮಳಿಗೆ ತೆರವು ಕಾರ್ಯಾಚರಣೆಗೆ ಮುಂದಾಗಿದ್ರು. ಈ ವೇಳೆ ಮಳಿಗೆ ಖಾಲಿ ಮಾಡಿ ಎಂದಿದ್ದಕ್ಕೆ ಸಿಬ್ಬಂದಿ ಜೊತೆ ಕಿರಿಕ್ ಮಾಡಿರುವ ವ್ಯಾಪಾರಿಗಳು.

ಶಕ್ತಿ ಯೋಜನೆ ಅವಾಂತರ: ಫ್ರೀ ಬಸ್ ಹತ್ತಿ ನಾಪತ್ತೆಯಾಗಿದ್ದ ನಾಲ್ವರು ಅಪ್ರಾಪ್ತ ಬಾಲಕಿಯರು ತಿಂಥಿಣಿ ಜಾತ್ರೆಯಲ್ಲಿ ಪತ್ತೆ!

ನಗರಸಭೆ ಮಳಿಗೆಯಲ್ಲಿ ಅನಧಿಕೃತವಾಗಿ ಎಳನೀರು ಮಾರಾಟ ಮಾಡುತ್ತಿರುವ ವ್ಯಾಪಾರಿ. ತೆರವುಗೊಳಿಸಲು ಸಿಬ್ಬಂದಿ ಹೋದಾಗ ಮಚ್ಚು ಹಿಡಿದು ಜೀವ ಬೆದರಿಕೆ ಹಾಕಿರುವ ವ್ಯಾಪಾರಿ. ಮಚ್ಚು ಕೆಳಗಿಡಲು ಹೇಳಿದ್ರೂ ಕೇಳದೇ ಸಿಬ್ಬಂದಿಗೆ ಮಚ್ಚು ತೋರಿಸಿ ಬೆದರಿಕೆ ಹಾಕಿರುವ ವ್ಯಾಪಾರಿ. ತೆರವುಗೊಳಿಸಿದರೆ ಮಚ್ಚಿನೇಟು ಎಂಬಂತೆ ಬೆದರಿಕೆ ಹಾಕಲಾಗಿದೆ. ನಗರದ ಸದರ್ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರೋ ಘಟನೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಹಣ ಸುಲಿಗೆ ಮಾಡ್ತಿದ್ದ ನಕಲಿ ಪಿಎಸ್ಐ ಬಂಧನ: ಪೊಲೀಸ್‌ ಕನಸು ಈಡೇರದಾಗ ಸುಲಿಗೆ ಕೃತ್ಯ
ತುರುವೇಕೆರೆ: ದೇವರ ಮೇಲೆ ಹಾಕಿದ್ದ 500 ಗ್ರಾಂ ಸರ, 10 ಸಾವಿರ ರೂ. ನಗದು ಕದ್ದ ಕಳ್ಳರು!