
ಶಿವಮೊಗ್ಗ (ಜು.20): ಮೀನು ಹಿಡಿಯಲು ಹೋಗಿದ್ದ ವ್ಯಕ್ತಿಯೋರ್ವ ನದಿಯಲ್ಲಿ ಕಣ್ಮರೆಯಾದ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಯಡಗೊಪ್ಪ-ಯಲವಾಟ ಗ್ರಾಮದಲ್ಲಿ ನಡೆದಿದೆ.
ಉದ್ರಿ ವಡ್ಡಿಗೇರೆ ಗ್ರಾಮದ ಯಲ್ಲಪ್ಪ(45) ನಾಪತ್ತೆಯಾಗಿರುವ ವ್ಯಕ್ತಿ. ಇಂದು ತನ್ನ ಸಹೋದರನೊಂದಿಗೆ ಮೀನು ಹಿಡಿಯಲು ನದಿಗೆ ತೆರಳಿದ್ದ ಮೃತ ವ್ಯಕ್ತಿ. ಮೀನು ಹಿಡಿಯುವ ವೇಳೆ ನದಿಯ ನೀರಿನ ಸುಳಿಗೆ ಸಿಲುಕಿ ಮುಳುಗಿದ್ದಾನೆ. ಆದರೆ ಇದುವರೆಗೆ ಮೃತವ್ಯಕ್ತಿ ಪತ್ತೆಯಾಗಿಲ್ಲ.
ವಿವಾಹಿತ ಮಹಿಳೆ ಜೊತೆ ಅಕ್ರಮ ಸಂಬಂಧ ಬೆಳೆಸೋದಕ್ಕೆ ಅಣ್ತಮ್ಮ ಕಿತ್ತಾಟ; ಕೊಲೆಯಲ್ಲಿ ಅಂತ್ಯ!
ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕದಳದ ಸಿಬ್ಬಂದಿ ಮೃತದೇಹ ಪತ್ತೆ ಕಾರ್ಯಾಚರಣೆ ನಡೆಸಿದ್ದಾರೆ. ಸ್ಥಳಕ್ಕೆ ತಹಸೀಲ್ದಾರ್ ಮಂಜುಳಾ ಹೆಗಡಾಳ್, ಪಿಎಸ್ಐ ನಾಗರಾಜ್, ತಾಪಂ ಇಒ ಡಾ ಪ್ರದೀಪ್ ಕುಮಾರ್ ಭೇಟಿ ನೀಡಿದ್ದಾರೆ. ಕಾರ್ಯಾಚರಣೆ ಮುಂದುವರಿದಿದ್ದು, ಇದುವರೆಗೆ ಮೃತದೇಹ ಪತ್ತೆಯಾಗಿಲ್ಲ. ಸೊರಬ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ