ಮಾಸಿಕ 20 ಸಾವಿರ ಸಂಬಳ: ದಿನಕ್ಕೆ 10 ಲಕ್ಷ ಖರ್ಚು! ಜಿರಳೆಗಳಿಗೆ ಊಟ ಕೊಟ್ಟವನ ಜಾತಕ ತೆರೆದ ಮುಸ್ಲಿಂ ಮುಖಂಡ

Published : Jul 30, 2026, 06:33 PM IST
Junaid

ಸಾರಾಂಶ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ನಡೆದ ಪ್ರತಿಭಟನೆಗೆ 35 ದಿನಗಳ ಕಾಲ ಉಚಿತ ಊಟ ನೀಡಿದ್ದ ಮೊಹಮ್ಮದ್ ಜುನೈದ್ ಇದೀಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರತಿಭಟನಾಕಾರರಿಂದ ಕಡೆಗಣನೆಗೆ ಒಳಗಾಗಿ ಕಣ್ಣೀರು ಹಾಕಿರುವ ಅವರ ವಿರುದ್ಧವೇ ಇದೀಗ ದೇಶದ್ರೋಹದ ಆರೋಪ ಕೇಳಿಬಂದಿದ್ದು, ಅವರ ಹಣದ ಮೂಲದ ಬಗ್ಗೆ ತನಿಖೆಗೆ ಆಗ್ರಹಿಸಲಾಗಿದೆ.

ನೀಟ್​ ಪ್ರಶ್ನೆ ಪತ್ರಿಕೆ ಸೋರಿಕೆ ನೆಪದಲ್ಲಿ ಕಾಕ್ರೋಚ್​ ಜನತಾ ಪಕ್ಷ ನಡೆಸಿರುವ ಪ್ರತಿಭಟನೆಯ ಹಿಂದಿನ ಕೈವಾಡದ ಬಗ್ಗೆ ಹಲವಾರು ಅನುಮಾನಗಳು ಸುಳಿದಾಡುತ್ತಲೇ ಇವೆ. ಪಾಕಿಸ್ತಾನಿಗಳು, ಖಲಿಸ್ತಾನಿಗಳ ಬೆಂಬಲ, ಲಕ್ಷ ಲಕ್ಷ ರೂಪಾಯಿ ಖರ್ಚು, ಶಿಕ್ಷಣ ಸಚಿವರಾಗಿದ್ದ ಧರ್ಮೇಂದ್ರ ಪ್ರಧಾನ್​ ಅವರ ರಾಜೀನಾಮೆ ಬಳಿಕ ಅಷ್ಟೋ ಮಂದಿ ಸ್ಟಾರ್​ ಹೋಟೆಲ್​ನಲ್ಲಿ ಮಾಡಿದ ಪಾರ್ಟಿಗೆ ತಗುಲಿದ ಲಕ್ಷಾಂತರ ರೂಪಾಯಿಗಳ ಖರ್ಚು-ವೆಚ್ಚ... ಹೀಗೆ ಬಗೆಯುತ್ತಾ ಹೋದಂತೆ, ಇದರ ಹಿಂದಿರುವ ವ್ಯವಸ್ಥಿತ ಪಿತೂರಿಯ ಬಗ್ಗೆ ಇದಾಗಲೇ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆಯಾಗುತ್ತಿರುವ ನಡುವೆಯೇ, ಪ್ರತಿಭಟನೆಯ ಸಮಯದಲ್ಲಿ ಸತತ 35 ದಿನ, ಪ್ರತಿಭಟನಾಕಾರರಿಗೆ ಊಟವನ್ನು ನೀಡಿದವ ಮೊಹಮ್ಮದ್​ ಜುನೈದ್ ಅವರ ಬಗ್ಗೆ ಇದೀಗ ಕೆಲವು ಮುಸ್ಲಿಂ ಸಮುದಾಯದಿಂದಲೇ ಭಾರಿ ವಿರೋಧ ವ್ಯಕ್ತವಾಗುತ್ತಿದೆ.

​.ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ನಿರಂತರ 35 ದಿನಗಳ ಕಾಲ ಉಚಿತ ಆಹಾರ ಮತ್ತು ನೀರು ಪೂರೈಸಿ ಸುದ್ದಿಯಲಿದ್ದಾರೆ ಗಾಜಿಯಾಬಾದ್​ನ ಮೊಹಮ್ಮದ್​. ಆದರೆ, ಇದೀಗ ಅತ್ತ ಸ್ಟಾರ್​ ಹೋಟೆಲ್​ನಲ್ಲಿ ಭರ್ಜರಿ ಪಾರ್ಟಿ ಮಾಡುತ್ತಿದ್ದರೆ, ಇತ್ತ 35 ದಿನಗಳ ಕಾಲ ಉಚಿತ ಆಹಾರ-ನೀರು ನೀಡಿದ್ದ ಮೊಹಮ್ಮದ್​ ಜುನೈದ್​ ಕಣ್ಣೀರು ಹಾಕಿದ್ದರು. ಮಾಧ್ಯಮಗಳ ಮುಂದೆ ಬಂದಿರುವ ಅವರು, ಅಂದು ನಾನು ಅವರಿಗೆ ಆಹಾರ ನೀಡಿದೆ. ಇಂದು ನನ್ನನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಾರೆ. ಸಿಜೆಪಿ ಸಂಸ್ಥಾಪಕ ಅಭಿಜೀತ್​ ದೀಪ್ಕೆ, ಪ್ರತಿಭಟನೆ ಮುಗಿದ ಬಳಿಕ ನನ್ನತ್ತ ಕಣ್ಣು ಕೂಡ ಹಾಯಿಸಿಲ್ಲ ಎಂದು ಗಳಗಳನೆ ಅತ್ತಿದ್ದರು.

ದೇಶದ್ರೋಹಿ, ತನಿಖೆ ಆಗಲಿ

ಆದರೆ ಇದೇ ಮೊಹಮ್ಮದ್​ ಜುನೈದ್​ ವಿರುದ್ಧ ಮುಸ್ಲಿಂ ಮುಖಂಡರೊಬ್ಬರು ಭಾರೀ ಆರೋಪ ಮಾಡಿದ್ದಾರೆ. geowiredailyಗೆ ನೀಡಿರುವ ಸಂದರ್ಶನದಲ್ಲಿ ಅವರು, ಜುನೈದ್​ ಒಬ್ಬ ಮುಸ್ಲಿಂ ವಿರೋಧಿ, ದೇಶದ್ರೋಹಿ ಎಂದಿದ್ದಾರೆ. ಅವನಿಗೆ ತಿಂಗಳಿಗೆ 20 ಸಾವಿರ ಸಂಬಳ ಬರುತ್ತದೆ. ಆದರೆ ಅಷ್ಟೂ ಜನರಿಗೆ ಉಚಿತ ಊಟ ಕೊಟ್ಟಿದ್ದಾನೆ. ಅದರ ಖರ್ಚು ಏನಿಲ್ಲವೆಂದರೂ ದಿನಕ್ಕೆ ಹತ್ತಿಪ್ಪತ್ತು ಲಕ್ಷ ಆಗುತ್ತದೆ. ಆತನ ಬಳಿ ಅಷ್ಟು ಹಣ ಬಂದಿದ್ದು ಹೇಗೆ ಎನ್ನುವ ತನಿಖೆ ಆಗಬೇಕಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಗಮನ ಹರಿಸಬೇಕಿದೆ ಎಂದಿದ್ದಾರೆ ಅವರು. ಒಂದು ವೇಳೆ ಆತನ ಬಳಿ ಇಷ್ಟೆಲ್ಲಾ ಹಣ ಇದ್ದಿದ್ದೇ ಹೌದಾದರೆ, ಆತನ ವಿರುದ್ಧ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ತನಿಖೆ ಮಾಡಬೇಕು, ಇಲ್ಲದೇ ಹೋದರೆ ಇದರ ಹಿಂದಿರುವ ಶಕ್ತಿಗಳ ಬಗ್ಗೆಯೂ ತನಿಖೆ ಆಗಬೇಕು ಎಂದಿದ್ದಾರೆ.

ಅಂದು ಹೇಳಿದ್ದೇನು?

ಪ್ರತಿಭಟನಾಕಾರರಿಗೆ ಉಚಿತ ಆಹಾರ ಮತ್ತು ನೀರು ವಿತರಿಸುತ್ತಿದ್ದ ಸಮಯದಲ್ಲಿ, ದೆಹಲಿ ಪೊಲೀಸರು ಎಂದು ಹೇಳಿಕೊಂಡ ಕೆಲವರು ತಮ್ಮ ಕಣ್ಣಿಗೆ ಬಟ್ಟೆ ಕಟ್ಟಿ ರಾತ್ರಿಯಿಡೀ ಅಪಹರಿಸಿ ಕಿರುಕುಳ ನೀಡಿದ್ದಾರೆ ಎಂದು ಇದೇ ಜುನೈದ್​ ಆರೋಪಿಸಿದ್ದರು. ಜುಲೈ 24ರ ರಾತ್ರಿ ಸುಮಾರು 10:50ರ ಸುಮಾರಿಗೆ ನನಗೆ ನಾಯಿ ಕಚ್ಚಿತ್ತು. ಚಿಕಿತ್ಸೆಗಾಗಿ ಆರ್‌ಎಂಎಲ್ ಆಸ್ಪತ್ರೆಗೆ ತೆರಳಿ, ರಾತ್ರಿ 12:10ರ ವೇಳೆಗೆ ವಾಪಸ್ ಆಟೋದಲ್ಲಿ ಹೊರಟಿದ್ದಾಗ ಈ ಘಟನೆ ನಡೆದಿದೆ. ನಾನು 50-60 ಮೀಟರ್ ದೂರ ಹೋಗುತ್ತಿದ್ದಂತೆ ಕೆಲವು ವಾಹನಗಳು ನಮ್ಮನ್ನು ತಡೆದವು. ನಮ್ಮನ್ನು ಕೊಲ್ಲಲು ಬಂದಿದ್ದಾರೆ ಎಂದೇ ನಾವು ಭಯಪಟ್ಟಿದ್ದೆವು. ಆದರೆ ಅವರು ತಾವು ದೆಹಲಿ ಪೊಲೀಸರು ಎಂದು ಹೇಳಿಕೊಂಡರು. ನಂತರ ನಮ್ಮ ಕಣ್ಣಿಗೆ ಬಟ್ಟೆ ಕಟ್ಟಿ ಎಲ್ಲಿಗೋ ಕರೆದುಕೊಂಡು ಹೋದರು. ಇಡೀ ರಾತ್ರಿ ನಮ್ಮನ್ನು ಅಲ್ಲಿಯೇ ಕೂರಿಸಿದ್ದರು ಎಂದು ಜುನೈದ್ ಅಳಲು ತೋಡಿಕೊಂಡಿದ್ದರು. ಅದರ ಬೆನ್ನಲ್ಲೇ ಇದೀಗ ತಾವು ಮಾಡಿರುವುದು ತಪ್ಪೆಂದು ಗೊತ್ತಾಗಿದೆ, ಆಹಾರ ವಿತರಿಸಿದವರೇ ಉಲ್ಟಾ ಹೊಡೆದರು ಎಂದು ಕಣ್ಣೀರು ಹಾಕಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
ಕಳ್ಳತನವನ್ನೂ ಮಾಡಿದ್ರು, ಟೀ ಮಾಡ್ಕೊಂಡು ಕುಡಿದು ಹೋದ್ರು: ಶಿರಸಿಯಲ್ಲಿ ಕೈಚಳಕ ತೋರಿಸಿದ ಕೂಲ್ ಕಳ್ಳರು