Bengaluru: ತಡರಾತ್ರಿ ಭೀಕರ ಅಪಘಾತ; ನಿವೃತ್ತ ಯೋಧ ಸ್ಥಳದಲ್ಲೇ ಸಾವು

Published : Oct 11, 2022, 08:50 AM ISTUpdated : Oct 11, 2022, 08:57 AM IST
Bengaluru: ತಡರಾತ್ರಿ ಭೀಕರ ಅಪಘಾತ; ನಿವೃತ್ತ ಯೋಧ ಸ್ಥಳದಲ್ಲೇ ಸಾವು

ಸಾರಾಂಶ

ಬೆಂಗಳೂರು ನಗರದಲ್ಲಿ ಸಂಜೆ, ರಾತ್ರಿ ಹೊತ್ತಿನಲ್ಲೇ ಹೆಚ್ಚು ಅಪಘಾತ ಸಂಭವಿಸುತ್ತಿದ್ದು, ರಾತ್ರಿ ಸಮಯದಲ್ಲಿ ಸಂಭವಿಸುವ ಅಪಘಾತ ಪ್ರಕರಣಗಳಲ್ಲಿ ಬಹುತೇಕ ಮದ್ಯಸೇವಿಸಿ ವಾಹನ ಚಾಲನೆ ಮಾಡಿರುವ ಘಟನೆಗಳೇ ಹೆಚ್ಚಾಗಿವೆ.

ಬೆಂಗಳೂರು (ಅ.11) :ನಗರದಲ್ಲಿ ಸಂಜೆ, ರಾತ್ರಿ ಹೊತ್ತಿನಲ್ಲೇ ಹೆಚ್ಚು ಅಪಘಾತ ಸಂಭವಿಸುತ್ತಿದ್ದು, ರಾತ್ರಿ ಸಮಯದಲ್ಲಿ ಸಂಭವಿಸುವ ಅಪಘಾತ ಪ್ರಕರಣಗಳಲ್ಲಿ ಬಹುತೇಕ ಮದ್ಯಸೇವಿಸಿ ವಾಹನ ಚಾಲನೆ ಮಾಡಿರುವ ಘಟನೆಗಳೇ ಹೆಚ್ಚಾಗಿವೆ.

ಬೆಂಗಳೂರಿನಲ್ಲಿ ನಿನ್ನೆ ತಡರಾತ್ರಿ ಇಂಥದೇ ಭೀಕರ ಅಪಘಾತ ಸಂಭವಿಸಿದ್ದು, ಈ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಏರ್ಪೋರ್ಟ್ ರಸ್ತೆ ಸಮೀಪದ ಕೊಡಿಗೇಹಳ್ಳಿ ಮುಖ್ಯರಸ್ತೆಯಲ್ಲಿ ತಡರಾತ್ರಿ ನಡೆದಿರುವ ಈ ಅಪಘಾತದಲ್ಲಿ ನಿವೃತ್ತ ಯೋಧ ರವಿಶಂಕರ್(59) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತದೇಹ ಎಂಎಸ್ ಆಸ್ಪತ್ರೆಗೆ ರವಾನಿಸಲಾಗಿದೆ.  ಹೋಟೆಲ್ ಸಿಬ್ಬಂದಿ ರಾಘವೇಂದ್ರ ಸೇರಿ ಫುಟ್‌ಪಾತ್ ಮೇಲೆ ನಿಂತಿದ್ದ ನಾಲ್ವರು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಚಾಲಕ ಮದ್ಯಸೇವನೆ ಮಾಡಿ ಕಾರು ಚಲಾಯಿಸಿರುವುದೇ ಅಪಘಾತಕ್ಕೆ ಕಾರಣವಾಗಿದೆ. ಹೆಬ್ಬಾಳ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ. 

Bengaluruನಲ್ಲಿ 16 ವರ್ಷದ ಬಾಲಕಿಯನ್ನು ಬಲಿ ಪಡೆದ ಶಾಲಾ ಬಸ್!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕ್ಯಾಸ್ಟ್ರೋಲ್ ಬ್ರಾಂಡ್‌ನ ನಕಲಿ ಎಂಜಿನ್ ಆಯಿಲ್ ಉತ್ಪಾದನೆ ಮಾಡುತ್ತಿದ್ದ ಘಟಕದ ಮೇಲೆ ದಾಳಿ
ಕೋಲಾರ: ಅಪ್ಪ- ಅಮ್ಮನ ವಿಚ್ಚೇದನಕ್ಕೆ ಮನನೊಂದು 26 ವರ್ಷದ ಪುತ್ರ ಆತ್ಮ*ಹತ್ಯೆ!