
ಬೆಂಗಳೂರು (ಸೆ.03): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದೆ. ಕಾರು ಡಿವೈಡರ್ಗೆ ಡಿಕ್ಕಿಯಾಗಿ ಮೇಲ್ಸೇತುವೆಯಿಂದ ಬಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಯಶವಂತಪುರ ಸರ್ಕಲ್ನಲ್ಲಿ ಬೆಳಗಿನ ಜಾವ 3.45ರ ಸುಮಾರಿಗೆ ಅಪಘಾತ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಏನಿದು ಘಟನೆ?: ಮೇಕ್ರಿ ಸರ್ಕಲ್ ರಸ್ತೆಯಿಂದ ತುಮಕೂರು ರಸ್ತೆಗೆ ಸಂಚರಿಸುವಾಗ ಯಶವಂತಪುರ ಸರ್ಕಲ್ ಬಳಿ ಮುಂದೆ ಹೋಗುತ್ತಿದ್ದ ಬೈಕ್ಗೆ ತಮಿಳುನಾಡು ರಿಜಿಸ್ಟ್ರೇಷನ್ ಹೊಂದಿರುವ ಕಾರು TN37DH9484 ಕಾರು ಡಿಕ್ಕಿ ಹೊಡೆದಿದೆ. ಬಳಿಕ ರಸ್ತೆ ವಿಭಜಕಕ್ಕೆ ಗುದ್ದಿ ಮೇಲ್ಸೇತುವೆಯಿಂದ ಕೆಳಗೆ ಅಪ್ಪಳಿಸಿದೆ. ಬಿದ್ದ ರಭಸಕ್ಕೆ ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡರು. ಬೈಕ್ ಸವಾರನಿಗೂ ಗಾಯವಾಗಿದೆ. ಕಾರು ನಜ್ಜುಗುಜ್ಜಾಗಿದೆ.
ಹೇಗಿತ್ತು ಗೊತ್ತಾ ದರ್ಶನ್-ಸುದೀಪ್ ಗೆಳೆತನ?: ಕಿಚ್ಚನ ಅದೊಂದು ಮಾತು.. ಬೇರೆ ಕತೆ ಹೇಳಿತ್ತು!
ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮದ್ಯ ಸೇವಿಸಿ ವೇಗವಾಗಿ ವಾಹನ ಚಾಲನೆ ಮಾಡಿರುವುದು ಘಟನೆಗೆ ಕಾರಣವೆಂದು ಮೇಲ್ನೋಟಕ್ಕೆ ಕಂಡುಬಂದಿದೆ. ಕಾರಿನಲ್ಲಿ ಮದ್ಯದ ಬಾಟಲಿಗಳು ದೊರೆತಿವೆ. ತಮಿಳುನಾಡು ನೋಂದಣಿ ಸಂಖ್ಯೆಯ ಕಾರು ಇದಾಗಿದೆ. ಯಶವಂತಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ