Jewelry Theft Case: ಮಗಳ ಮದುವೆಗೆ ಮಾಡಿದ್ದ ಸಾಲ ತೀರಿಸಲು ಆಭರಣ ಕದ್ದ ಕೆಲಸದಾಕೆ ಬಂಧನ

Kannadaprabha News   | Kannada Prabha
Published : Jun 25, 2025, 04:49 AM ISTUpdated : Jun 25, 2025, 12:14 PM IST
Crime news

ಸಾರಾಂಶ

ಮಗಳ ಮದುವೆಗೆ ಮಾಡಿದ್ದ ಸಾಲ ತೀರಿಸಲು ಶಿಕ್ಷಕಿ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಚಿನ್ನಾಭರಣ ಕದ್ದಿದ್ದಾರೆ. ₹14.3 ಲಕ್ಷ ಮೌಲ್ಯದ 143 ಗ್ರಾಂ ಚಿನ್ನ ಜಪ್ತಿ ಮಾಡಲಾಗಿದೆ. ಜೆ.ಪಿ.ನಗರದಲ್ಲಿ ನಡೆದ ಈ ಘಟನೆಯಲ್ಲಿ ಮನೆಕೆಲಸದಾಳು ಶಾಂತಿ ಬಂಧಿತಳಾಗಿದ್ದಾಳೆ.

ಬೆಂಗಳೂರು (ಜೂ.25): ಮಗಳ ಮದುವೆಗೆ ಮಾಡಿದ್ದ ಸಾಲ ತೀರಿಸಲು ತಾನು ಕೆಲಸ ಮಾಡುತ್ತಿದ್ದ ಶಿಕ್ಷಕಿ ಮನೆಯಲ್ಲಿ ಚಿನ್ನಾಭರಣ ಕದ್ದು ಮಹಿಳೆಯೊಬ್ಬರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿದ್ದಾರೆ.

ರಾಗಿಗುಡ್ಡದ ನಿವಾಸಿ ಶಾಂತಿ ಅಲಿಯಾಸ್ ಶಾಂತಮ್ಮ ಬಂಧಿತರಾಗಿದ್ದು, ಆರೋಪಿಯಿಂದ ₹14.3 ಲಕ್ಷ ಮೌಲ್ಯದ 143 ಗ್ರಾಂ ಚಿನ್ನ ಜಪ್ತಿ ಮಾಡಲಾಗಿದೆ. ಕೆಲ ದಿನಗಳ ಹಿಂದೆ ಜೆ.ಪಿ.ನಗರದ 2ನೇ ಹಂತದಲ್ಲಿ ನೆಲೆಸಿರುವ ನಿವೃತ್ತ ಶಿಕ್ಷಕರ ಮನೆಯಲ್ಲಿ ಚಿನ್ನಾಭರಣ ಕಳ್ಳತನ ಬಗ್ಗೆ ದೂರು ದಾಖಲಾಯಿತು. ಈ ಬಗ್ಗೆ ತನಿಖೆ ನಡೆಸಿದ ಜೆ.ಪಿ.ನಗರ ಠಾಣೆ ಪೊಲೀಸರು, ಶಂಕೆ ಮೇರೆಗೆ ಮನೆ ಕೆಲಸದಾಳು ಶಾಂತಿಯನ್ನು ವಶಕ್ಕೆ ಪಡೆದು ವಿಚಾರಿಸಿದಾಗ ತಪ್ಪೊಪ್ಪಿಕೊಂಡಿದ್ದಾಳೆ.

ಹಲವು ವರ್ಷಗಳಿಂದ ಜೆ.ಪಿ.ನಗರದ 2ನೇ ಹಂತದಲ್ಲಿ ಶಿಕ್ಷಕಿ ಆಯೇಷಾ ಕುಟುಂಬ ನೆಲೆಸಿದ್ದು, ಇವರ ಮನೆಯಲ್ಲಿ ಶಾಂತಿ ಕೆಲಸಕ್ಕಿದ್ದಳು. ಮನೆಯೊಡತಿಗೆ ಗೊತ್ತಾಗದಂತೆ 4 ಚಿನ್ನದ ಬಳೆಗಳು ಹಾಗೂ ಒಂದು ನೆಕ್ಲೇಸ್‌ ಅನ್ನು ಆಕೆ ಕಳವು ಮಾಡಿ ಮಾರಾಟ ಮಾಡಿದ್ದಳು. ಸಂಬಂಧಿಕರ ಮದುವೆಗೆ ಹೋಗಲು ಆಭರಣ ನೋಡಿದಾಗ ಆಯೇಷಾಗೆ ಕಳ್ಳತನದ ಬಗ್ಗೆ ಗೊತ್ತಾಗಿದೆ. ಈ ಬಗ್ಗೆ ಜೆ.ಪಿ.ನಗರ ಠಾಣೆಗೆ ಮನೆ ಕೆಲಸದಾಳು ಮೇಲೆ ಶಂಕಿಸಿ ಅವರು ದೂರು ನೀಡಿದ್ದರು. ಅದರಂತೆ ಮನೆಕೆಲಸದಾಳು ಶಾಂತಿಯನ್ನು ವಶಕ್ಕೆ ಪಡೆದು ಪೊಲೀಸರು ಪ್ರಶ್ನಿಸಿದಾಗ ಕಳ್ಳತನ ಪತ್ತೆಯಾಗಿದೆ. ತನ್ನ ಮಗಳ ಮದುವೆಗೆ ₹5 ಲಕ್ಷ ಸಾಲ ಮಾಡಿಕೊಂಡಿದ್ದೆ. ಈ ಆರ್ಥಿಕ ಸಂಕಷ್ಟದಿಂದ ಸಾಲ ತೀರಿಸಲು ಮನೆಯೊಡತಿ ಆಭರಣ ಕಳವು ಮಾಡಿದ್ದಾಗಿ ಆಕೆ ವಿಚಾರಣೆ ವೇಳೆ ಹೇಳಿಕೆ ನೀಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರು ಅಪಾರ್ಟ್‌ಮೆಂಟ್‌ನ 16 ಕುಟುಂಬಗಳಿಗೆ ರೌಡಿಸಂ ದರ್ಶನ; ಮಾಟ-ಮಂತ್ರ ಮಾಡಿಸಿ ಕಿರುಕುಳ!
ಕೆಲಸ ಇಲ್ಲದ ಗಂಡನಿಗೆ ಪತ್ನಿ ಶೀಲದ ಮೇಲೆ ಶಂಕೆ: ನಿದ್ರೆಯಲ್ಲಿದ್ದ ಮಗಳ ಕತ್ತು ಸೀಳಿದ ಪತಿ