
ವಿಜಯಪುರ (ಆ.5): ಕಣ್ಣು ಹೊಡೆದು ಚುಡಾಯಿಸಿದ ಯುವಕನಿಗೆ ಮಹಿಳೆಯೋರ್ವಳು ನಡುರಸ್ತೆಯಲ್ಲೇ ಚಪ್ಪಲಿಯಿಂದ ಹಿಗ್ಗಾಮುಗ್ಗಾ ಥಳಿಸಿದ ಘಟನೆ ವಿಜಯಪುರ ಜಿಲ್ಲೆಯ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ನಡೆದಿದೆ.
ಬಸ್ ನಿಲ್ದಾಣದ ಎದುರು ನಿಂತು ಬಸ್ನಲ್ಲಿ ಹೋಗುವ ಬರುವ ಮಹಿಳಾ ಪ್ರಯಾಣಿಕರಿಗೆ ಕಣ್ಣು ಹೊಡೆದು ಚುಡಾಯಿಸುತ್ತಿದ್ದ ಕುಡಕ. ಅದೇ ರೀತಿ ಮಹಿಳೆಗೆ ಕಣ್ಣು ಹೊಡೆದು ಕರೆದಿದ್ದಾನೆ. ರೊಚ್ಚಿಗೆದ್ದ ಮಹಿಳೆ ದಬಾಯಿಸಿದ್ದಾಳೆ. ಮಹಿಳೆ ಕೋಪ ಕಂಡು ಓಡಿಹೋಗುತ್ತಿದ್ದ ಕುಡುಕ. ಈ ವೇಳೆ ಕುಡುಕನನ್ನ ಹಿಡಿದು ಮಹಿಳೆಗೆ ಒಪ್ಪಿಸಿದ ಸಾರ್ವಜನಿಕರು. ಚಪ್ಪಲಿಯಿಂದ ಹಿಗ್ಗಾಮುಗ್ಗಾ ಬಾರಿಸಿದ ಮಹಿಳೆ.
ಕುಂದಾಪುರ: ಪತ್ನಿಯ ಕುತ್ತಿಗೆಗೆ ಇರಿದು ಕತ್ತಿ ಹಿಡಿದು ಕುಣಿದಾಡಿದ ಪತಿ!
ಕಣ್ಣು ಹೊಡೆದ ಕುಡುಕ ಯುವಕನಿಗೆ ಚಪ್ಪಲಿಯಿಂದ ಹೊಡೆಯುತ್ತಿರುವ ಮಹಿಳೆ ದೃಶ್ಯ ಸಾರ್ವಜನಿಕರ ಮೊಬೈಲ್ ನಲ್ಲಿ ಸೆರೆಯಾಗಿದ್ದ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇನ್ನೂ ನಾಲ್ಕೇಟು ಬಿಗಿಬೇಕಿತ್ತು ಎಂದಿರೋ ನೆಟ್ಟಿಗರು.
ನಗರ ಬಸ್ ನಿಲ್ದಾಣದಲ್ಲಿ ಪುಂಡುಪೋಕರಿಗಗಳು ಕಂಠಪೂರ್ತಿ ಕುಡಿದು ಬಂದು ಮಹಿಳೆಯರಿಗೆ ಶಾಲಾ ವಿದ್ಯಾರ್ಥಿಗಳಿಗೆ ದಿನನಿತ್ಯ ಕಿರುಕುಳ ನೀಡುತ್ತಿರುವ ದೂರುಗಳು ಕೇಳಿಬಂದಿವೆ. ಕೇಂದ್ರ ಬಸ್ ನಿಲ್ದಾಣದಲ್ಲಿ ಅಗತ್ಯ ಭದ್ರತೆ ಒದಗಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ