Aunty ಎಂದಿದ್ದಕ್ಕೆ ಸೆಕ್ಯೂರಿಟಿ ಗಾರ್ಡ್‌ಗೆ ಚಪ್ಪಲಿಯಿಂದ ಹಲ್ಲೆ ಮಾಡಿದ ಮಹಿಳೆ!

Published : Sep 24, 2023, 12:23 PM IST
Aunty ಎಂದಿದ್ದಕ್ಕೆ ಸೆಕ್ಯೂರಿಟಿ ಗಾರ್ಡ್‌ಗೆ ಚಪ್ಪಲಿಯಿಂದ ಹಲ್ಲೆ ಮಾಡಿದ ಮಹಿಳೆ!

ಸಾರಾಂಶ

ಎಟಿಎಂ ಕೇಂದ್ರದ ಬಾಗಿಲ ಬಳಿ ‘ಆಂಟಿ ಪಕ್ಕಕ್ಕೆ ಸರಿಯಿರಿ’ ಎಂದ ಸೆಕ್ಯೂರಿಟಿ ಗಾರ್ಡ್‌ಗೆ ಮಹಿಳೆಯೊಬ್ಬರು ಚಪ್ಪಲಿಯಿಂದ ಹೊಡೆದು ಅವಾಚ್ಯ ಶಬ್ಧಗಳಿಂದ ನಿಂದಿಸಿದ ಆರೋಪದಡಿ ಮಲ್ಲೇಶ್ವರ ಪೊಲೀಸ್‌ ಠಾಣೆಯಲ್ಲಿ ಮಹಿಳೆ ವಿರುದ್ಧ ದೂರು ದಾಖಲಾಗಿದೆ. 

ಬೆಂಗಳೂರು (ಸೆ.24): ಎಟಿಎಂ ಕೇಂದ್ರದ ಬಾಗಿಲ ಬಳಿ ‘ಆಂಟಿ ಪಕ್ಕಕ್ಕೆ ಸರಿಯಿರಿ’ ಎಂದ ಸೆಕ್ಯೂರಿಟಿ ಗಾರ್ಡ್‌ಗೆ ಮಹಿಳೆಯೊಬ್ಬರು ಚಪ್ಪಲಿಯಿಂದ ಹೊಡೆದು ಅವಾಚ್ಯ ಶಬ್ಧಗಳಿಂದ ನಿಂದಿಸಿದ ಆರೋಪದಡಿ ಮಲ್ಲೇಶ್ವರ ಪೊಲೀಸ್‌ ಠಾಣೆಯಲ್ಲಿ ಮಹಿಳೆ ವಿರುದ್ಧ ದೂರು ದಾಖಲಾಗಿದೆ. ರಾಜಾಜಿನಗರದ ಪೊಲೈಟ್‌ ಸೆಕ್ಯೂರಿಟಿ ಏಜೆನ್ಸಿಯ ಸೆಕ್ಯೂರಿ ಗಾರ್ಡ್‌ ಕೃಷ್ಣಯ್ಯ(64) ಎಂಬುವವರು ನೀಡಿದ ದೂರಿನ ಮೇರೆಗೆ ಪದ್ಮನಾಭನಗರ ನಿವಾಸಿ ಅಶ್ವಿನಿ ಎಂಬುವರ ವಿರುದ್ಧ ಎಫ್‌ಐಆರ್‌ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಏನಿದು ಘಟನೆ: ದೂರುದಾರ ಕೃಷ್ಣಯ್ಯ ರಾಜಾಜಿನಗರದ ಪೊಲೈಟ್‌ ಸೆಕ್ಯೂರಿ ಏಜೆನ್ಸಿಯಲ್ಲಿ ಸೆಕ್ಯೂರಿ ಗಾರ್ಡ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಈ ಏಜೆನ್ಸಿಯು ವಿವಿಧ ಬ್ಯಾಂಕ್‌ಗಳ ಎಟಿಎಂಗೆ ಹಣ ತುಂಬುವ ಕೆಲಸ ಮಾಡುತ್ತಿದೆ. ಎಟಿಎಂ ಕೇಂದ್ರಗಳಲ್ಲಿ ಎಟಿಎಂ ಯಂತ್ರಗಳಿಗೆ ತುಂಬುವಾಗ ಕೃಷ್ಣಯ್ಯ ಹೊರಗೆ ಭದ್ರತೆ ನೀಡುವ ಕೆಲಸ ಮಾಡುತ್ತಾರೆ. ಅದರಂತೆ ಕೃಷ್ಣಯ್ಯ ಅವರು ಸೆ.19ರಂದು ರಾತ್ರಿ 7.30ರ ಸುಮಾರಿಗೆ ಮಲ್ಲೇಶ್ವರದ ಗಣೇಶ ದೇವಸ್ಥಾನದ ರಸ್ತೆಯ ಐಸಿಐಸಿಐ ಬ್ಯಾಂಕ್‌ ಎಟಿಎಂ ಯಂತ್ರಕ್ಕೆ ಹಣ ತುಂಬಲು ಬಂದಿದ್ದಾರೆ.

ಹಸಿರು ಸೀರೆಯಲ್ಲಿ ಬಿಕಿನಿ ಬ್ಯೂಟಿ ಸೋನು ಗೌಡ: ಮೊದ್ಲು ನಿನ್ನ ಬ್ರಾ ಸರಿ ಮಾಡ್ಕೊಳ್ಳಮ್ಮ ಎಂದ ಫ್ಯಾನ್ಸ್‌!

ಈ ವೇಳೆ ಸಿಬ್ಬಂದಿ ಎಟಿಎಂ ಕೇಂದ್ರದ ಒಳಗೆ ಹಣ ತುಂಬುವಾಗ ಕೃಷ್ಣಯ್ಯ ಎಟಿಎಂ ಹೊರಗೆ ನಿಂತು ಕರ್ತವ್ಯ ನಿರ್ವಹಿಸುತ್ತಿದ್ದರು. ಈ ವೇಳೆ ಮಹಿಳೆ ಎಟಿಎಂ ಕೇಂದ್ರದ ಬಾಗಿಲಿಗೆ ಅಡ್ಡಲಾಗಿ ನಿಂತಿದ್ದರು ಎನ್ನಲಾಗಿದೆ. ಈ ವೇಳೆ ಕೃಷ್ಣಯ್ಯ ಅವರು ‘ಆಂಟಿ ಪಕ್ಕಕ್ಕೆ ಸರಿಯಿರಿ’ ಎಂದಿದ್ದಾರೆ. ಅಷ್ಟಕ್ಕೆ ಕೋಪಗೊಂಡ ಮಹಿಳೆ ನನ್ನನ್ನೇ ಆಂಟಿ ಅನ್ನುವೆಯಾ ಎಂದು ಅವಾಚ್ಯ ಶಬ್ಧಗಳಿಂದ ನಿಂದಿಸಿ ಏಕಾಏಕಿ ಚಪ್ಪಲಿ ತೆಗೆದು ಕೃಷ್ಣಯ್ಯ ಅವರ ಮುಖಕ್ಕೆ ಹಲ್ಲೆ ಮಾಡಿದ್ದಾರೆ. ನಿನ್ನನ್ನು ಜೀವಂತ ಬಿಡುವುದಿಲ್ಲ ಎಂದು ಮಹಿಳೆ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಬಳಿಕ ಸೆಕ್ಯೂರಿಗಾರ್ಡ್ ಕೃಷ್ಣಯ್ಯ ಮಹಿಳೆ ವಿರುದ್ಧ ಮಲ್ಲೇಶ್ವರ ಠಾಣೆಗೆ ದೂರು ನೀಡಿದ್ದಾರೆ,

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ
ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?