ಮೊಬೈಲ್ ಕಸಿದು ತಮಾಷೆ ಮಾಡಿದಕ್ಕೆ ಗೆಳೆಯನ ಮೇಲೆ ಮಚ್ಚಿನಿಂದ ಹಲ್ಲೆ!

Published : May 18, 2024, 11:18 AM IST
ಮೊಬೈಲ್ ಕಸಿದು ತಮಾಷೆ ಮಾಡಿದಕ್ಕೆ ಗೆಳೆಯನ ಮೇಲೆ ಮಚ್ಚಿನಿಂದ ಹಲ್ಲೆ!

ಸಾರಾಂಶ

ಮೊಬೈಲ್ ವಿಚಾರಕ್ಕೆ ಸ್ನೇಹಿತರ ನಡುವೆ ನಡೆದ ಗಲಾಟೆ ಒರ್ವನಿಗೆ ಮಚ್ಚಿನಿಂದ ಹೊಡೆದು ಹಲ್ಲೆ ನಡೆಸಿದ ಪ್ರಕರಣದ ಎಲ್ಲ ಆರೋಪಿಗಳನ್ನು ಬ್ಯಾಟರಾಯನಪುರ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು (ಮೇ.18): ಮೊಬೈಲ್ ವಿಚಾರಕ್ಕೆ ಸ್ನೇಹಿತರ ನಡುವೆ ನಡೆದ ಗಲಾಟೆ ಒರ್ವನಿಗೆ ಮಚ್ಚಿನಿಂದ ಹೊಡೆದು ಹಲ್ಲೆ ನಡೆಸಿದ ಪ್ರಕರಣದ ಎಲ್ಲ ಆರೋಪಿಗಳನ್ನು ಬ್ಯಾಟರಾಯನಪುರ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಬಾಪೂಜಿನಗರದ ಮಧುರ ಬಾರ್ ಬಳಿ ಮೂರು ದಿನದ ಹಿಂದೆ ನಡೆದ ಘಟನೆ. ವಿಜಯ್ ಎಂಬಾತನ ಮೇಲೆ ಮಚ್ಚಿನಿಂದ ಹೊಡೆದು ಹತ್ಯೆ ಮಾಡಿದ್ದ ಕಿರಾತರು. ಹತ್ಯೆ ಬಳಿಕ ಪರಾರಿಯಾಗಿದ್ದ ಮನೋಜ್, ತರುಣ್, ಕಿರಣ್ ಓರ್ವ ಅಪ್ರಾಪ್ತನ ಬಂಧಿಸಲಾಗಿದೆ.

ಬೆಂಗಳೂರು: ಜಗಳದ ವೇಳೆ ತಳ್ಳಾಟ, ವಿದ್ಯುತ್‌ ತಾಗಿ ಪೋಕ್ಸೋ ಆರೋಪಿ ಸಾವು

ಘಟನೆ ಹಿನ್ನೆಲೆ

ಎಲ್ಲರೂ ಸ್ನೇಹಿತರೇ ಆಗಿದ್ದಾರೆ. ತಿಂಗಳ ಹಿಂದೆ ವಿಜಯ್ ಮೊಬೈಲ್ ಕಸಿದುಕೊಂಡು ವಾಪಸ್ ಕೊಟ್ಟು ತಮಾಷೆ ಮಾಡಿದ್ದ ಮನೋಜ್. ಇದಾದ ಬಳಿಕ ಕಳೆದ ವಾರ ಒಂದೇ ಬಾರ್‌ನಲ್ಲಿ ಕುಡಿಯಲು ಸೇರಿದ್ದ ಮನೋಜ್, ವಿಜಯ್. ಈ ವೇಳೆ ಮೊಬೈಲ್ ಕಸಿದುಕೊಂಡ ವಿಚಾರ ಪ್ರಸ್ತಾಪಿಸಿ ಮತ್ತೆ ತಮಾಷೆ ಮಾಡಿದ್ದ. ಇದರಿಂದ ಕೋಪಗೊಂಡು ಮೂವರನ್ನ ಕರೆದುಕೊಂಡು ಬಂದು ಹಲ್ಲೆ ನಡೆಸಿದ ಮನೋಜ್. ನನಗೇ ಅವಮಾನ ಮಾಡ್ತಿಯಾ ಅಂತಾ ವಿಜಯ್ ಮೇಲೆ ಮಚ್ಚಿನಿಂದ ಹೊಡೆದಿದ್ದ ಆರೋಪಿ. ಮಚ್ಚಿನೇಟಿನಿಂದ ತೀವ್ರ ಗಾಯಗೊಂಡಿದ್ದ ವಿಜಯ್ ಬ್ಯಾಟರಾಯನಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಉತ್ತರಕನ್ನಡ: ನೀರು ಕೇಳುವ ನೆಪದಲ್ಲಿ ವೃದ್ಧೆಯ ಚಿನ್ನದ ಸರ ಎಗರಿಸಿ ಖದೀಮರು ಎಸ್ಕೇಪ್!
ನಟಿ ಶಿಲ್ಪಾ ಶೆಟ್ಟಿ ಒಡೆತನದ ಪಬ್‌ನಲ್ಲಿ ಉದ್ಯಮಿಯಿಂದ ಗಲಾಟೆ; ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನ!