ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿ ಮೇಲೆ ಮಚ್ಚಿನಿಂದ ಹಲ್ಲೆ; ಕೃಷಿ ಹೊಂಡಕ್ಕೆ ಬಿದ್ದು ಭಗ್ನಪ್ರೇಮಿ ಆತ್ಮಹತ್ಯೆ!

Published : Aug 05, 2024, 12:26 PM IST
ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿ ಮೇಲೆ ಮಚ್ಚಿನಿಂದ ಹಲ್ಲೆ; ಕೃಷಿ ಹೊಂಡಕ್ಕೆ ಬಿದ್ದು ಭಗ್ನಪ್ರೇಮಿ ಆತ್ಮಹತ್ಯೆ!

ಸಾರಾಂಶ

ಪ್ರೀತಿ ನಿರಾಕರಿಸಿದ ಯುವತಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ ಭಗ್ನಪ್ರೇಮಿ ಕೃಷಿ ಹೊಂಡಕ್ಕೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ದೇವಲಾಪುರ ಹೋಬಳಿಯ ಸುನಗನಹಳ್ಳಿ ಸಮೀಪ ಸಂಭವಿಸಿದೆ.

ನಾಗಮಂಗಲ (ಆ.5) :  ಪ್ರೀತಿ ನಿರಾಕರಿಸಿದ ಯುವತಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ ಭಗ್ನಪ್ರೇಮಿ ಕೃಷಿ ಹೊಂಡಕ್ಕೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ದೇವಲಾಪುರ ಹೋಬಳಿಯ ಸುನಗನಹಳ್ಳಿ ಸಮೀಪ ಸಂಭವಿಸಿದೆ.

ಮಂಡ್ಯ ತಾಲೂಕಿನ ಬಿಳಿದೇಗಲು ಸಮೀಪದ ಹೊಸಹಳ್ಳಿಯ ಕಾಂತಯ್ಯನ ಪುತ್ರ ಶರತ್ (30) ಆತ್ಮಹತ್ಯೆ ಮಾಡಿಕೊಂಡ ಭಗ್ನ ಪ್ರೇಮಿಯಾಗಿದ್ದಾನೆ.

ಶರತ್ ಹುಟ್ಟೂರು ಹೊಸಹಳ್ಳಿಯಾದರೂ ಬೆಳೆದಿದ್ದು ಕೆರಗೋಡು ಸಮೀಪದ ಅಂಚಹಳ್ಳಿಯ ತನ್ನ ಅಜ್ಜಿ ತಾತನ ಮನೆಯಲ್ಲಿ. ಹಲವು ವರ್ಷಗಳಿಂದ ಅಂಚಹಳ್ಳಿಯಲ್ಲಿಯೇ ನೆಲೆಸಿದ್ದ ಶರತ್. ಅದೇ ಗ್ರಾಮದ ಯುವತಿಯೊಬ್ಬಳನ್ನು ಕಳೆದ ಆರೇಳು ವರ್ಷದಿಂದ ಪ್ರೀತಿಸುತ್ತಿದ್ದನು. ಆದರೆ, ಇತ್ತೀಚೆಗೆ ಆ ಯುವತಿ ಶರತ್ ಪ್ರೀತಿಯನ್ನು ನಿರಾಕರಿಸಿ ಬ್ರೇಕ್‌ಅಪ್ ಮಾಡಿಕೊಂಡಿದ್ದಳು ಎನ್ನಲಾಗಿದೆ. ಇದರಿಂದ ಕುಪಿತಗೊಂಡ ಶರತ್ ಯುವತಿಯನ್ನು ಮಚ್ಚಿನಿಂದ ಹಲ್ಲೆ ನಡೆಸಿದ ನಂತರ ತನ್ನ ಮೊಬೈಲ್ ಸ್ವಿಚ್‌ಆಫ್ ಮಾಡಿಕೊಂಡು ನಾಗಮಂಗಲ ತಾಲೂಕಿನ ಸುನಗನಹಳ್ಳಿ ಸಮೀಪವಿರುವ ಕೃಷಿ ಹೊಂಡವೊಂದಕ್ಕೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕೊಪ್ಪಳ: ಒಂದೇ ಕುಟುಂಬದ ಮೂವರ ನಿಗೂಢ ಸಾವು ಪ್ರಕರಣ, ಭಗ್ನ ಪ್ರೇಮಿಯಿಂದ ಮೂವರ ಹತ್ಯೆ

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‌ಐ ರವಿಕುಮಾರ್ ಶರತ್ ಮೃತದೇಹವನ್ನು ಹೊರತೆಗೆಸಿ ತಾಲೂಕಿನ ಬಿ.ಜಿ.ನಗರದ ಆದಿಚುಂಚನಗಿರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿ ಮರಣೋತ್ತರ ಪರೀಕ್ಷೆಗೊಳಪಡಿಸಿದರು.

ಶವಪರೀಕ್ಷೆ ನಂತರ ಮೃತದೇಹವನ್ನು ವಾರಸುದಾರರಿಗೆ ಹಸ್ತಾಂತರಿಸಲಾಯಿತು. ಈ ಸಂಬಂಧ ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವತಿಗೆ ಕೊಲೆಯತ್ನ ನಡೆಸಿರುವ ಸಂಬಂಧ ಕೆರಗೋಡು ಪೊಲೀಸ್ ಠಾಣೆಯಲ್ಲಿ ಯುವತಿಯ ಪೋಷಕರು ಪ್ರಕರಣ ದಾಖಲಿಸಿದ್ದಾರೆಂದು ತಿಳಿದುಬಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

8ನೇ ಕ್ಲಾಸ್ ಹುಡುಗಿ ಮೇಲೆ ಬಲತ್ಕಾರ, ಬೆದರಿಸಿ ಚಿನ್ನ ದೋಚಿದ್ದ 10ನೇ ಕ್ಲಾಸ್ ಹುಡುಗ ಅರೆಸ್ಟ್
ಬಿಜೆಪಿ ನಾಯಕನ ಸಂಬಂಧಿ 17ರ ಯುವಕನಿಗೆ ಚೂರಿ ಇರಿದು ಕೊಂದ ದುಷ್ಕರ್ಮಿಗಳು!