ಸ್ನೇಹಿತನ ಜೊತೆ ಚಾರಣಕ್ಕೆ ಬಂದು ನಾಪತ್ತೆ ಪ್ರಕರಣ; 4 ದಿನಗಳ ಬಳಿಕ ಶವವಾಗಿ ಪತ್ತೆ!

Published : Dec 28, 2023, 04:31 PM IST
ಸ್ನೇಹಿತನ ಜೊತೆ ಚಾರಣಕ್ಕೆ ಬಂದು ನಾಪತ್ತೆ ಪ್ರಕರಣ; 4 ದಿನಗಳ ಬಳಿಕ ಶವವಾಗಿ ಪತ್ತೆ!

ಸಾರಾಂಶ

ಸ್ನೇಹಿತರ ಜೊತೆ ಚಾರಣಕ್ಕೆ ಬಂದು ದಾರಿ ತಪ್ಪಿ ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆಯಾಗಿದ್ದಾನೆ. ಗಗನ್ ದೀಪಕ್ ಸಿಂಗ್ ಮೃತ ದುರ್ದೈವಿ. ಉತ್ತರಪ್ರದೇಶ ಮೂಲದ ಮೃತ ಯುವಕ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿ ಹಲವು ವರ್ಷಗಳಿಂದ ಬೆಂಗಳೂರಿನಲ್ಲಿ ನಲೆಸಿದ್ದ ಯುವಕ. 

ಬೆಂಗಳೂರು (ಡಿ.28): ಸ್ನೇಹಿತರ ಜೊತೆ ಚಾರಣಕ್ಕೆ ಬಂದು ದಾರಿ ತಪ್ಪಿ ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆಯಾಗಿದ್ದಾನೆ. ಗಗನ್ ದೀಪಕ್ ಸಿಂಗ್ ಮೃತ ದುರ್ದೈವಿ. ಉತ್ತರಪ್ರದೇಶ ಮೂಲದ ಮೃತ ಯುವಕ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿ ಹಲವು ವರ್ಷಗಳಿಂದ ಬೆಂಗಳೂರಿನಲ್ಲಿ ನಲೆಸಿದ್ದ ಯುವಕ. 

ಕಳೆದ ಭಾನುವಾರ ಗೆಳೆಯರೊಂದಿಗೆ ಸಾವನದುರ್ಗ ಏಕಶಿಲಾ ಬೆಟ್ಟಕ್ಕೆ ಚಾರಣ ಬಂದಿದ್ದ ಯುವಕ. ಸ್ನೇಹಿತನ ಜೊತೆ ಚಾರಣಕ್ಕೆ ಬಂದ ವೇಳೆ ದಾರಿ ತಪ್ಪಿ ಕಾಣೆಯಾಗಿದ್ದ. ಘಟನೆ ಮಾಹಿತಿ ತಿಳಿದು ಕಳೆದ ನಾಲ್ಕು ದಿನಗಳಿಂದ ಯುವಕನಿಗಾಗಿ ಹುಡುಕಾಟ ನಡೆಸಿದ್ದ ಅರಣ್ಯ ಇಲಾಖೆ ಸಿಬ್ಬಂದಿ, ಪೊಲೀಸರು. ಆದರೂ ಪತ್ತೆಯಾಗಿರಲಿಲ್ಲ. ಬಳಿಕ ಥರ್ಮಲ್ ಡ್ರೋನ್, ಶ್ವಾನದಳ ಸೇರಿ SDRF ತಂಡದಿಂದ ಶೋಧಕಾರ್ಯ ಮುಂದುವರಿಸಿದ್ದರು. ಸತತ 100 ಗಂಟೆಗಳ ಕಾರ್ಯಾಚರಣೆ ಬಳಿಕ ಯುವಕನ ಶವ ಪತ್ತೆಯಾಗಿದೆ. ಮೃತದೇಹ ಹೊರತೆಗೆಯುತ್ತಿರುವ ಪೊಲೀಸರು. ಘಟನೆ ಸಂಬಂಧ ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು. 

 

ಅಕಾಲಿಕ ಸಾವು ಎಂದರೇನು…. ಗರುಡ ಪುರಾಣದಲ್ಲಿ ಇದಕ್ಕೆ ಪರಿಹಾರವಿದೆಯಂತೆ !
 

ಶಬರಿಮಲೆ ಯಾತ್ರೆಗೆ ತೆರಳಿದ್ದ ವೇಳೆ ಕಾರು ಅಪಘಾತ

ಕುಶಾಲನಗರ: ಶಬರಿಮಲೆ ಯಾತ್ರೆಗೆ ತೆರಳಿದ ಯಾತ್ರಿಗಳ ಕಾರು ಶಬರಿಮಲೆಯ ಸಮೀಪ ಅಪಘಾತಕ್ಕೀಡಾಗಿ ಕುಶಾಲನಗರ ಸಮೀಪದ ಚಿಕ್ಕತೂರು ಗ್ರಾಮದ ನಿವಾಸಿ ಚಾಲಕ ಚಂದ್ರ ಎಂಬವರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಅಪಘಾತದಲ್ಲಿ ಮೂರು ಮಂದಿ ತೀವ್ರ ಗಾಯಗೊಂಡು ಆಸ್ಪತ್ರೆ ಸೇರಿರುವುದಾಗಿ ತಿಳಿದು ಬಂದಿದೆ. 

ತುಮಕೂರು ಬಳಿ ಸಚಿವ ಮಧು ಬಂಗಾರಪ್ಪ ಅವರಿದ್ದ ಕಾರು ಅಪಘಾತ

ಶಬರಿಮಲೆಗೆ ತೆರಳಿ ಹಿಂತಿರುಗುವ ಸಂದರ್ಭ ಕಾರು ಮರಕ್ಕೆ ಡಿಕ್ಕಿಯಾಗಿ ಘಟನೆ ಸಂಭವಿಸಿದೆ. ಸಿದ್ದಯ್ಯ ಬಡಾವಣೆಯ ನಿವಾಸಿಗಳಾದ ಲಿಂಗಂ, ಹಾಗೂ ಅವರ ಪುತ್ರ ಸಂತೋಷ್ ಮತ್ತು ಹರೀಶ್ ಗಂಭೀರ ಗಾಯಗೊಂಡು ಕೇರಳದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಾಲಿವುಡ್ ನಿರ್ದೇಶಕ ವಿಕ್ರಂ ಭಟ್, ಪತ್ನಿ ಶ್ವೇತಾಂಬರಿ ಭಟ್ ಬಂಧನ; ಅಂತಿಂಥ ವಂಚನೆ ಕೇಸಲ್ಲ ಇದು ಅಂತೀರಾ?!
ಕೊಪ್ಪಳ: ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ - ಪ್ರಿ-ವೆಡ್ಡಿಂಗ್ ಶೂಟಿಂಗ್ ಮುಗಿಸಿ ವಾಪಸಾಗುವಾಗ ಭೀಕರ ದುರಂತ!