ತಲ್ವಾರ್ ತೋರಿಸಿದ ಯುವಕನಿಗೆ ಧರ್ಮದೇಟು ನೀಡಿ ಪೊಲೀಸರಿಗೊಪ್ಪಿಸಿದ ಸ್ಥಳೀಯರು!

Published : May 27, 2024, 08:23 AM IST
ತಲ್ವಾರ್ ತೋರಿಸಿದ ಯುವಕನಿಗೆ ಧರ್ಮದೇಟು ನೀಡಿ ಪೊಲೀಸರಿಗೊಪ್ಪಿಸಿದ ಸ್ಥಳೀಯರು!

ಸಾರಾಂಶ

ತಲ್ವಾರ್‌ ಹಿಡಿದುಕೊಂಡು ಹೆದ್ದಾರಿಯಲ್ಲಿ ಓಡಾಡಿ ಆತಂಕ ಮೂಡಿಸಿದ್ದ ಯುವಕನಿಗೆ ಸಾರ್ವಜನಿಕರು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ಆನಂದಪುರದಲ್ಲಿ ಭಾನುವಾರ ನಡೆದಿದೆ,

ಶಿವಮೊಗ್ಗ (ಮೇ.27): ತಲ್ವಾರ್‌ ಹಿಡಿದುಕೊಂಡು ಹೆದ್ದಾರಿಯಲ್ಲಿ ಓಡಾಡಿ ಆತಂಕ ಮೂಡಿಸಿದ್ದ ಯುವಕನಿಗೆ ಸಾರ್ವಜನಿಕರು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ಆನಂದಪುರದಲ್ಲಿ ಭಾನುವಾರ ನಡೆದಿದೆ,

ಯುವಕನೊಬ್ಬ ತಲ್ವಾರ್‌ ಹಿಡಿದು ನಡೆದು ಹೋಗುತ್ತಿರುವುದನ್ನು ಕಾರಿನಲ್ಲಿದ್ದವರು ವಿಡಿಯೋ ಚಿತ್ರೀಕರಣ ಮಾಡಿದ್ದಾರೆ. ತಲ್ವಾರ್‌ ಹಿಡಿದು ತೆರಳುತ್ತಿದ್ದವನನ್ನು ಸ್ಥಳೀಯರು ತಡೆದಿದ್ದಾರೆ. ಈ ವೇಳೆ ‘ನನ್ನ ತಮ್ಮನಿಗೆ ಆಕ್ಸಿಡೆಂಟ್‌ ಅಗಿದೆʼ ಎಂದು ಆತ ಕೂಗಿರುವುದು ವಿಡಿಯೋದಲ್ಲಿ ದಾಖಲಾಗಿದೆ. 

ಕಾಂಗ್ರೆಸ್‌ ಸರ್ಕಾರದಲ್ಲಿ ಪೊಲೀಸರಿಗೇ ರಕ್ಷಣೆ ಇಲ್ಲ: ಆರಗ ಜ್ಞಾನೇಂದ್ರ

ಆತನ ಕೈಯಲ್ಲಿದ್ದ ತಲ್ವಾರ್‌ ಕಸಿದ ಸ್ಥಳೀಯರು ರಸ್ತೆಯ ಪಕ್ಕದ ಕೆರೆಗೆ ಎಸೆದಿದ್ದಾರೆ. ಬಳಿಕ ಯುವಕನಿಗೆ ಧರ್ಮದೇಟು ನೀಡಿದ್ದಾರೆ. ಆ ಯುವಕನನ್ನು ಪೊಲೀಸ್‌ ಠಾಣೆಗೆ ಒಪ್ಪಿಸಿದ್ದಾರೆ. ಆನಂದಪುರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಯುವಕ ತಲ್ವಾರ್‌ ಬೀಸುತ್ತ ಓಡಾಡಿದ್ದರಿಂದ ಆನಂದಪುರದಲ್ಲಿ ಕೆಲ ಹೊತ್ತು ಆತಂಕ ಸೃಷ್ಟಿಯಾಗಿತ್ತು. ಸದ್ಯ ಇದರ ವಿಡಿಯೋ ವೈರಲ್‌ ಆಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ನನ್ನ ಜೊತೆಗೂ ಬಾ: ಗೆಳೆಯನ ಗರ್ಲ್‌ಫ್ರೆಂಡ್‌ಗೆ ಸಂದೇಶ: ಪ್ರಶ್ನಿಸಿದ್ದಕ್ಕೆ ಸ್ನೇಹಿತನನ್ನೇ ಕೊಂದು ಪೀಸ್ ಪೀಸ್ ಮಾಡಿದ
The Devil Movie: ಕಾಲವೇ ಸತ್ಯ ಹೇಳುತ್ತದೆ. ಸಮಯವೇ ಉತ್ತರಿಸುತ್ತದೆ-ಜೈಲಿನಿಂದಲೇ Darshan ಮೆಸೇಜ್