
ವಿಜಯಪುರ (ಜ.9): ಚಲಿಸುತ್ತಿದ್ದ ಸರ್ಕಾರಿ ಬಸ್ಸಿನ ಚಕ್ರದ ಕೆಳಗೆ ಹಾರಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಬೆಚ್ಚಿಬೀಳಿಸುವ ಘಟನೆ ವಿಜಯಪುರ ನಗರದ ಟಿಪ್ಪು ಸುಲ್ತಾನ್ ಸರ್ಕಲ್ನಲ್ಲಿ ನಡೆದಿದೆ.
ಮೃತ ಯುವಕ ಹಾಸನ ಮೂಲದವರೆಂದು ತಿಳಿದು ಬಂದಿದೆ. ಸ್ಥಳಕ್ಕೆ ಗಾಂಧಿಚೌಕ್ ಪೊಲೀಸರು ಆಗಮಿಸಿದ್ದು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಹೆಸರು, ವಿಳಾಸ ಪತ್ತೆ ಹಚ್ಚುತ್ತಿರುವ ಪೊಲೀಸರು.
ಘಟನೆ ಸಿಸಿಟಿವಿಯಲ್ಲಿ ದಾಖಲಾಗಿದ್ದು, ಸರ್ಕಾರಿ ಬಸ್ ಸಮೀಪಕ್ಕೆ ಬರುತ್ತಿದ್ದ ಮೊಬೈಲ್ ಎಸೆದು ಚಕ್ರದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದು ಸಿಸಿಟಿವಿಯಲ್ಲಿ ಕಾಣಿಸಿದೆ. ಚಕ್ರದ ಕೆಳಗೆ ಸಿಲುಕಿ ರಕ್ತಸಿಕ್ತವಾಗ್ತಿದ್ದಂತೆ ಬೆಚ್ಚಿಬಿದ್ದ ಸ್ಥಳೀಯರು. ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿರುವ ಯುವಕ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಮೊಬೈಲ್ ಮೂಲಕ ಯುವಕನ ಪೋಷಕರ ಪತ್ತೆ ಹಚ್ಚುತ್ತಿರುವ ಪೊಲೀಸರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ